ಗಣಿಜಿಲ್ಲೆಯಲ್ಲಿ ಹೆಚ್ಚಿದ ಸೋಂಕಿತರು-ಆತಂಕ
Team Udayavani, May 17, 2020, 11:15 AM IST
ಬಳ್ಳಾರಿ: ಗಣಿನಾಡಲ್ಲಿ ಮತ್ತೊಂದು ಕೋವಿಡ್ ಸೋಂಕಿತ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ 18ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹರಪನಹಳ್ಳಿ ತಾಲೂಕಿಗೆ ಸೇರಿದ 46 ವರ್ಷದ ವ್ಯಕ್ತಿಯಲ್ಲಿ ಕೋವಿಡ್-19 ಸೋಂಕು ದೃಢವಾಗಿದೆ. ಒಂದೊಂದೇ ಪ್ರಕರಣಗಳು ಕಾಣಿಸಿಕೊಳ್ಳುತ್ತಿರುವುದು ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ.
ಎರಡ್ಮೂರು ದಿನಗಳ ಹಿಂದೆ ಗುಜರಾತ್ ರಾಜ್ಯದ ಅಹಮದಾಬಾದ್ನಿಂದ ಮೂವರು ವ್ಯಕ್ತಿಗಳು, ಇಬ್ಬರು ಚಾಲಕರು ಸೇರಿ ಒಟ್ಟು ಐದು ಜನರು ಜಿಲ್ಲೆಗೆ ವಾಪಸ್ಸಾಗಿದ್ದಾರೆ. ಈ ವೇಳೆ ಜಿಲ್ಲೆಯ ಹಡಗಲಿ ತಾಲೂಕು ಗಡಿಭಾಗದ ಚೆಕ್ಪೋಸ್ಟ್ ನಲ್ಲಿ ಇವರ ವಾಹನವನ್ನು ತಡೆದ ಪಿಎಸ್ಐ ನಾಯಕ್, ವಿಚಾರಿಸಿದಾಗ ಗುಜರಾತ್ನ ಅಹಮದಾಬಾದ್ ನಿಂದ ಬರುತ್ತಿರುವುದಾಗಿ ತಿಳಿಸಿದ್ದು, ಕೂಡಲೇ ಅವರನ್ನು ಚೆಕ್ಪೋಸ್ಟ್ನಿಂದ ಜಿಲ್ಲೆಯ ತೋರಣಗಲ್ಲಿನ ಒಪಿಜೆ ಕೇಂದ್ರಕ್ಕೆ ಕರೆತಂದು ಕ್ವಾರಂಟೈನ್ ಮಾಡಲಾಗಿದೆ. ಇವರ ಗಂಟಲು ದ್ರವ ಪಡೆದು ಪರೀಕ್ಷಿಸಿದಾಗ ಒಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಸ್ಪಷ್ಟಪಡಿಸಿದ್ದಾರೆ.
ಹಡಗಲಿ ಚೆಕ್ಪೋಸ್ಟ್ನಿಂದ ನೇರವಾಗಿ ಕ್ವಾರಂಟೈನ್ ಕೇಂದ್ರಕ್ಕೆ ಹೋಗಿದ್ದರಿಂದ ಹರಪನಹಳ್ಳಿಯ ಯಾವುದೇ ಪ್ರದೇಶವನ್ನು ಕಂಟೈನ್ಮೆಂಟ್ ಝೋನ್ ಎಂದು ಗುರುತಿಸುವುದಿಲ್ಲ ಎಂದವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಶನಿವಾರ ದೃಢಪಟ್ಟ ಪ್ರಕರಣ ಸೇರಿ ಈವರೆಗೂ ಒಟ್ಟು 18 ಜನರಲ್ಲಿ ಸೋಂಕು ಪತ್ತೆಯಾದಂತಾಗಿದೆ. ಈಗಾಗಲೇ 13 ಜನ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಇನ್ನು ಬಳ್ಳಾರಿಯ ಕೌಲ್ಬಜಾರ್, ಸಂಡೂರು ತಾಲೂಕು ಕೃಷ್ಣಾನಗರ, ಕಂಪ್ಲಿ, ಸಿರುಗುಪ್ಪ ತಾಲೂಕು ಗೋಸಬಾಳು ಗ್ರಾಮದಲ್ಲಿ ತಲಾ ಒಂದೊಂದು ಪ್ರಕರಣ ಕಾಣಿಸಿಕೊಂಡಿದ್ದು, ಒಟ್ಟು ಐದು ಪ್ರಕರಣಗಳು ಸಕ್ರಿಯವಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ