ಭತ್ತ-ರಾಗಿ-ಜೋಳ ಖರೀದಿ ಅವಧಿ ವಿಸ್ತರಣೆ
Team Udayavani, Jun 13, 2020, 2:41 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬಳ್ಳಾರಿ: 2019-20 ಮತ್ತು 2020-21ನೇ ಸಾಲಿನ ಹಿಂಗಾರು ಋತುವಿನಲ್ಲಿ ರೈತರು ಬೆಳೆದ ಭತ್ತ, ರಾಗಿ, ಜೋಳವನ್ನು ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಖರೀದಿಸಲು ರೈತರಿಗೆ ಅನುಕೂಲವಾಗುವಂತೆ ರೈತರ ನೋಂದಣಿ ಕಾರ್ಯವನ್ನು ಜೂ.30 ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷ, ಡಿಸಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ.
2020-21ನೇ ಸಾಲಿನ ಹಿಂಗಾರು (ರಬಿ) ಋತುವಿನಲ್ಲಿ ಬೆಳೆದ ಭತ್ತ, ರಾಗಿ, ಜೋಳವನ್ನು ನೋಂದಾಯಿಸಿಕೊಂಡು ಖರೀದಿಸಬೇಕು. ಮುಂಗಾರು ಮತ್ತು ಹಿಂಗಾರು ಋತುವಿನ ಖರೀದಿಯ ಲೆಕ್ಕಪತ್ರಗಳನ್ನು ಪ್ರತ್ಯೇಕವಾಗಿ ನಿರ್ವಹಿಸಬೇಕು. ಖರೀದಿಯು ಈಗಾಗಲೇ ತಿಳಿಸಿರುವಂತೆ ಫ್ರೂಟ್ಸ್ ತಂತ್ರಾಂಶದಲ್ಲಿ ರೈತರು ಮಾಡಿರುವ ನೋಂದಣಿ ಆಧಾರದಲ್ಲಿ ನಡೆಯಬೇಕು. ಮುಂಗಾರು ಋತುವಿನಲ್ಲಿ ಬೆಳೆದ ಬೆಳೆ ಬಗ್ಗೆ ಈಗಾಗಲೇ ನೋಂದಾಯಿಸಿದ್ದರೆ ಪುನಃ ನೋಂದಾಯಿಸುವ ಅವಶ್ಯಕತೆ ಇರುವುದಿಲ್ಲ. ಸಾಮಾನ್ಯ ಭತ್ತ ಪ್ರತಿ ಕ್ವಿಂಟಲ್ ಗೆ 1815 ರೂ., ಗ್ರೇಡ್ “ಎ’ ಭತ್ತ ಪ್ರತಿ ಕ್ವಿಂಟಲ್ಗೆ 1835 ರೂ. ನಿಗದಿಪಡಿಸಲಾಗಿದೆ. ರಾಗಿ ಉತ್ಪನ್ನಕ್ಕೆ 3150 ರೂ., ಹೈಬ್ರಿಡ್ ಜೋಳಕ್ಕೆ 2550 ರೂ., ಮತ್ತು ಮಾಲ್ದಂಡಿ ಜೋಳಕ್ಕೆ 2570 ರೂ.ಗಳ ಕನಿಷ್ಠ ಬೆಂಬಲ ಬೆಲೆ ನಿಗಧಿ ಪಡಿಸಲಾಗಿದೆ.
ಬೆಂಬಲ ಬೆಲೆ ಯೋಜನೆಯ ಮೂಲಕ ಜಿಲ್ಲೆಯ ಬಳ್ಳಾರಿ, ಕುರುಗೋಡು, ಸಿರುಗುಪ್ಪ ತಾಲೂಕುಗಳಲ್ಲಿ ಬಿಳಿಜೋಳ ಮತ್ತು ಭತ್ತ ಖರೀದಿಸಲಾಗುತ್ತದೆ. ಉಳಿದ ಸಂಡೂರು, ಕೂಡ್ಲಿಗಿ, ಕೊಟ್ಟೂರು, ಹೊಸಪೇಟೆ, ಕಂಪ್ಲಿ, ಎಚ್.ಬಿ.ಹಳ್ಳಿ, ಹಡಗಲಿ, ಹರಪನಹಳ್ಳಿ ತಾಲೂಕುಗಳ ಆಯಾ ಎ.ಪಿ.ಎಂ.ಸಿ. ಯಾರ್ಡ್ಗಳಲ್ಲಿ ಭತ್ತ, ರಾಗಿ ಮತ್ತು ಬಿಳಿಜೋಳ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಕನಿಷ್ಠ ಬೆಂಬಲೆ ಯೋಜನೆಯಡಿ ಸಂಗ್ರಾಹಣಾ ಕಾರ್ಯದಲ್ಲಿ ತೊಡಗಿರುವ ಸಿಬ್ಬಂದಿಗೆ ಪಾಸ್ ಹಾಗೂ ಮಾಸ್ಕ್ಗಳನ್ನು ಕೆಎಫ್ಸಿಎಸ್ ಸಿಯ ಜಿಲ್ಲಾ ವ್ಯವಸ್ಥಾಪಕರ ಬಳಿ ಪಡೆದುಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ