ಕೋವಿಡ್ ವಾರಿಯರ್ಸ್ ಗೆ ಹೂ ಮಳೆ
Team Udayavani, Apr 17, 2020, 6:12 PM IST
ಬಳ್ಳಾರಿ: ಗುಗ್ಗರಹಟ್ಟಿ ಪ್ರದೇಶದಲ್ಲಿ ಮನೆಮನೆ ಸಮೀಕ್ಷೆ ನಡೆಸುತ್ತಿರುವ ಕೊರೊನಾ ವಾರಿಯರ್ಸ್ಗೆ ಸ್ಥಳೀಯರು ಹೂ ಮಳೆ ಸುರಿಸಿ ಗೌರವಿಸಿದರು
ಬಳ್ಳಾರಿ: ಕೋವಿಡ್ ವೈರಸ್ ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ಕ್ವಾರಂಟೈನ್ ಪ್ರದೇಶವನ್ನಾಗಿ ಗುರುತಿಸಲಾದ ಗುಗ್ಗರಹಟ್ಟಿ ಪ್ರದೇಶದಲ್ಲಿ ಮನೆಮನೆ ಸಮೀಕ್ಷೆ ನಡೆಸುತ್ತಿರುವ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ, ಪೊಲೀಸ್ ಸಿಬ್ಬಂದಿ, ಪೌರ ಕಾರ್ಮಿಕರಿಗೆ ಸ್ಥಳೀಯರು ಗುರುವಾರ ಹೂಮಳೆ ಸುರಿಸಿ ಕೃತಜ್ಞತೆ ಸಲ್ಲಿಸಿದರು.
ಗುಗ್ಗರಹಟ್ಟಿ ಪ್ರದೇಶದಲ್ಲಿ ಮಾ.30 ರಂದು ವ್ಯಕ್ತಿಯೊಬ್ಬರಿಗೆ ಕೋವಿಡ್ ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ಸುತ್ತಲಿನ ಒಂದು ಕಿಮೀ ವ್ಯಾಪ್ತಿಯಲ್ಲಿ ಕ್ವಾರಂಟೈನ್ ಪ್ರದೇಶವೆಂದು ಗುರುತಿಸಿತ್ತು. ಈ ಪ್ರದೇಶದಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಮನೆಮನೆಗೆ ತೆರಳಿ ಸಮೀಕ್ಷೆ ಕಾರ್ಯದಲ್ಲಿ ತೊಡಗಿದ್ದಾರೆ. ಪೊಲೀಸ್ ಸಿಬ್ಬಂದಿ ಹಗಲಿರುಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪೌರ ಕಾರ್ಮಿಕರು ಸ್ವತ್ಛತೆ ಕಾಪಾಡುವುದರ ಜತೆಗೆ ಫಾಗಿಂಗ್ ಮಾಡುವ ಮೂಲಕ ಕೋವಿಡ್ ವೈರಸ್ ನಿಯಂತ್ರಿಸುವಲ್ಲಿ ಅವಿರತ ಶ್ರಮಿಸುತ್ತಿದ್ದಾರೆ. ಇಂತಹ ಕೊರೊನಾ ವಾರಿಯರ್ಸ್ಗೆ ಹೂ ನೀಡಿ ಆರತಿ ಬೆಳಗಿ ಸನ್ಮಾನಿಸಿದರು.
ಜತೆಗೆ ಸಾಲಾಗಿ ಕರ್ತವ್ಯಕ್ಕೆ ಹೋಗುತ್ತಿದ್ದ ವಾರಿಯರ್ಸ್ಗೆ ರಸ್ತೆ ಎರುಡು ಬದಿ ಮಹಡಿಗಳ ಮೇಲೆ ನಿಂತು ಹೂವಿನ ಮಳೆಗೈಯ್ಯುವ ಮೂಲಕ ಅವರ ಸೇವೆಯನ್ನು ಶ್ಲಾಘಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ