ಹೋಂ ಕ್ವಾರಂಟೈನ್‌ ಮೇಲೆ ನಿಗಾ ವಹಿಸಿ

ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತ ಎಂ.ಎಸ್‌.ಶ್ರೀಕರ್‌ ಸೂಚನೆ

Team Udayavani, May 28, 2020, 1:03 PM IST

28-May-10

ಬಳ್ಳಾರಿ: ಡಿಸಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಕೋವಿಡ್ ಸ್ಥಿತಿಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತ ಎಂ.ಎಸ್‌.ಶ್ರೀಕರ್‌ ಮಾತನಾಡಿದರು.

ಬಳ್ಳಾರಿ: ಹೋಂ ಕ್ವಾರಂಟೈನ್‌ ನಲ್ಲಿರುವವರ ಮೇಲೆ ಜಿಲ್ಲಾಡಳಿತವು ತೀವ್ರ ನಿಗಾವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತ ಎಂ.ಎಸ್‌. ಶ್ರೀಕರ್‌ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಕೋವಿಡ್ ಸ್ಥಿತಿಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹೋಂ ಕ್ವಾರಂಟೈನ್‌ನಲ್ಲಿರುವವರ ಚಲನವಲನಕ್ಕೆ ಸಂಬಂಧಿಸಿದಂತೆ ಜಿಲ್ಲಾ ಕಂಟ್ರೋಲ್‌ ರೂಂ ಮೂಲಕ ಪ್ರತಿನಿತ್ಯ ಫಾಲೋಅಫ್‌ ಮಾಡುತ್ತಿರಬೇಕು. ಆರ್‌ಆರ್‌ಟಿ ತಂಡಗಳು ಸದಾ ನಿಗಾವಹಿಸಬೇಕು ಹಾಗೂ ಹೋಂ ಕ್ವಾರಂಟೈನ್‌ ನಲ್ಲಿರುವವರ ಪರಿಶೀಲನೆಗಾಗಿಯೇ ರೂಪಿಸಲಾಗಿರುವ ಆ್ಯಪ್‌ ಮೂಲಕವು ಅವರನ್ನು ಗಮನಿಸುತ್ತಿರಬೇಕು. ಕಡ್ಡಾಯವಾಗಿ ಅವರು ಹೋಂ ಕ್ವಾರಂಟೈನ್ ನಲ್ಲಿರುವಂತೆ ನೋಡಿಕೊಳ್ಳಬೇಕು ಎಂದರು.

ಕೋವಿಡ್‌-19 ಆಸ್ಪತ್ರೆಗಳಲ್ಲಿ 320 ಬೆಡ್‌ ವ್ಯವಸ್ಥೆ: ಜಿಲ್ಲೆಯಲ್ಲಿ ಜಿಲ್ಲಾಸ್ಪತ್ರೆಯನ್ನು ಕೋವಿಡ್‌-19 ಆಸ್ಪತ್ರೆಯನ್ನಾಗಿಸಿ ಕಾರ್ಯನಿರ್ವಹಿಸಲಾಗುತ್ತಿದ್ದು, 180 ಆಕ್ಸಿಜನ್‌ ಬೆಡ್‌, 30 ಐಎಸಿಯು ಬೆಡ್‌ ಸೇರಿದಂತೆ 210 ಬೆಡ್‌ ಸಾಮರ್ಥ್ಯ ಹೊಂದಿದೆ ಹಾಗೂ ತೋರಣಗಲ್ಲುವಿನಲ್ಲಿರುವ ಸಂಜೀವಿನಿ ಆಸ್ಪತ್ರೆಯನ್ನು ಕೋವಿಡ್‌-19 ಆಸ್ಪತ್ರೆಯನ್ನಾಗಿ ಕಾಯ್ದರಿಸಿಲಾಗಿದ್ದು 94 ನಾರ್ಮಲ್‌ ಬೆಡ್‌ ಹಾಗೂ 16 ಐಸಿಯು ಬೆಡ್‌ ವ್ಯವಸ್ಥೆ ಸೇರಿದಂತೆ 110 ಬೆಡ್‌ ಸಾಮರ್ಥ್ಯ ಹೊಂದಿದೆ ಎಂದು ಜಿಲ್ಲಾಧಿಕಾರಿ ನಕುಲ್‌ ಅವರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಗಮನಕ್ಕೆ ತಂದರು.

ಜಿಲ್ಲೆಯಲ್ಲಿ ಬಳ್ಳಾರಿಯ ಟಿಬಿ ಸ್ಯಾನಿಟೋರಿಯಂ, ಡೆಂಟಲ್‌ ಕಾಲೇಜು, ಹಳೆ ವಿಮ್ಸ್‌ ನಿರ್ದೇಶಕರ ಕಚೇರಿ, ತೋರಣಗಲ್ಲುವಿನ ಒಪಿಜೆ ಜಿಂದಾಲ್‌ ಕೇಂದ್ರ ಸೇರಿದಂತೆ 4 ಕೋವಿಡ್‌ ಆರೋಗ್ಯ ಕೇಂದ್ರಗಳನ್ನು ಕಾಯ್ದರಿಸಿಲಾಗಿದ್ದು 457 ಬೆಡ್‌ಗಳ ವ್ಯವಸ್ಥೆ ಇದೆ ಎಂದು ವಿವರಿಸಿದ ಅವರು ಎನ್‌ಎಂಡಿಸಿ ನೀಡಲಾದ 75 ಲಕ್ಷ ರೂ. ಹಾಗೂ ಜಿಲ್ಲಾ ಖನಿಜ ನಿಧಿಯಿಂದ ಕೆಲವೊಂದಿಷ್ಟು ಹಣವನ್ನು ಜಿಲ್ಲಾಸ್ಪತ್ರೆ ಹಾಗೂ ವಿಮ್ಸ್‌ನಲ್ಲಿ ಕೋವಿಡ್‌ ಸಂಬಂಧಿತ ವೈದ್ಯಕೀಯ ಉಪಕರಣಗಳಿಗೆ ಖರ್ಚು ಮಾಡಲಾಗಿದೆ ಎಂದರು.

7198 ವಲಸೆ ಕಾರ್ಮಿಕರು ತವರೂರಿಗೆ: ಬಳ್ಳಾರಿ ಜಿಲ್ಲೆಯಿಂದ ವಿವಿಧ ರಾಜ್ಯಗಳಿಗೆ 7198 ವಲಸೆ ಕಾರ್ಮಿಕರು/ಇತರೆ ವ್ಯಕ್ತಿಗಳು ಶ್ರಮಿಕ ರೈಲಿನ ಮೂಲಕ ಕಳುಹಿಸಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್‌.ಎಸ್‌.ನಕುಲ್‌ ಅವರು ವಿವರಿಸಿದರು. ಬಿಹಾರ, ಉತ್ತರಪ್ರದೇಶ, ಜಾರ್ಖಂಡ್‌, ಛತ್ತಿಸಗಡ್‌, ಮಧ್ಯಪ್ರದೇಶದ ವಲಸೆ ಕಾರ್ಮಿಕರನ್ನು ಜಿಲ್ಲೆಯ ಹೊಸಪೇಟೆ, ಬಳ್ಳಾರಿ ರೈಲು ನಿಲ್ದಾಣದ ಮೂಲಕ ಹಾಗೂ ಬಳ್ಳಾರಿಯಿಂದ ಬಸ್‌ ಮೂಲಕ ಕರೆದೊಯ್ದು ಬೆಂಗಳೂರು, ಕಲಬುರ್ಗಿ, ಹುಬ್ಬಳ್ಳಿ ರೈಲು ನಿಲ್ದಾಣದ ಮೂಲಕವೂ ಕಳುಹಿಸಿಕೊಡಲಾಗಿದೆ. ಒರಿಸ್ಸಾ ಮತ್ತು ಪಶ್ಚಿಮ ಬಂಗಾಳದ ವಲಸೆ ಕಾರ್ಮಿಕರು ನಮ್ಮ ರಾಜ್ಯದಲ್ಲಿದ್ದು, ಅವರನ್ನು ಕಳುಹಿಸಿಕೊಡಲಾಗುವುದು. ಅದಕ್ಕೂ ಮುನ್ನ ಅವರ ಆರೋಗ್ಯ ತಪಾಸಣೆ ಮಾಡಿ ಅತ್ಯಂತ ಸುರಕ್ಷಿತವಾಗಿ ಕಳುಹಿಸಿಕೊಡಲಾಗಿದೆ ಎಂದರು.

ವಿಮ್ಸ್‌ ವೈದ್ಯಕೀಯ ಲ್ಯಾಬ್‌ನಲ್ಲಿ ಸ್ವಾಬ್‌ ತಪಾಸಣೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಸುದಿàಘ ಚರ್ಚೆಗಳು ನಡೆದವು. ಸಭೆಯಲ್ಲಿ ಎಸ್ಪಿ ಸಿ.ಕೆ.ಬಾಬಾ, ಜಿಪಂ ಸಿಇಒ ಕೆ.ನಿತೀಶ್‌, ಪ್ರೊಬೇಷನರಿ ಐಎಎಸ್‌ ಈಶ್ವರ್‌ ಕಾಂಡೂ, ವಿಮ್ಸ್‌ ನಿರ್ದೇಶಕ ಡಾ| ದೇವಾನಂದ, ಡಿಎಚ್‌ಒ ಡಾ| ಜನಾರ್ಧನ್‌, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಎನ್‌.ಬಸರೆಡ್ಡಿ, ವಿಮ್ಸ್‌ ಅಧಿಧೀಕ್ಷಕ ಮರಿರಾಜ್‌, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ ಸೇರಿದಂತೆ ಇನ್ನಿತರರು ಇದ್ದರು

ಟಾಪ್ ನ್ಯೂಸ್

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.