ಮದುವೆಗೆ ಬರದಂತೆ ಆಹ್ವಾನ!
ಹೊಸಪೇಟೆ ಮದುಮಗನ ವಿಶಿಷ್ಟ ವಾಟ್ಸ್ ಆ್ಯಪ್ ಆಮಂತ್ರಣ ಪತ್ರಿಕೆ
Team Udayavani, May 9, 2020, 5:21 PM IST
ಬಳ್ಳಾರಿ: ಮದುವೆಗೆ ಬನ್ನಿ ಎಂದು ಆಮಂತ್ರಣ ಪತ್ರಿಕೆ ಕೊಟ್ಟು ಆಹ್ವಾನಿಸೋದು ಮಾಮೂಲು. ಆದರೆ ಕೋವಿಡ್ ಎಂಬ ಮಹಾಮಾರಿ ಮದುವೆ ಖುಷಿ, ಆಮಂತ್ರಣ ಪತ್ರಿಕೆಯ ಆಹ್ವಾನ ಎಲ್ಲದಕ್ಕೂ ಬ್ರೇಕ್ ಹಾಕಿದೆ. ಆದರೆ, ಲಾಕ್ಡೌನ್ ಅವಧಿಯಲ್ಲೇ ಮದುವೆಗೆ ಸಿದ್ಧವಾಗಿರುವ ಹೊಸಪೇಟೆಯ ಮದುಮಗನೊಬ್ಬ ವಾಟ್ಸ್ಆ್ಯಪ್ ಆಮಂತ್ರಣ ಪತ್ರಿಕೆಯಲ್ಲಿ ಮದುವೆಗೆ ಬರದಂತೆ ಮನವಿ ಮಾಡಿಕೊಂಡಿದ್ದಾರೆ. ಜಿಲ್ಲೆಯ ಹೊಸಪೇಟೆಯ ಚಿರಂಜೀವಿ ಕರಣಂ ಎನ್ನುವವರು ಮೇ 10 ರಂದು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು, ವಿಭಿನ್ನ ರೀತಿಯಲ್ಲಿ ಆಮಂತ್ರಣ ಪತ್ರಿಕೆ ರೂಪಿಸಿ ವಾಟ್ಸ್ಆ್ಯಪ್ ಮೂಲಕ ಆಹ್ವಾನ ನೀಡುತ್ತಿದ್ದಾರೆ.
ಹೇಗಿದೆ ವಾಟ್ಸ್ಆ್ಯಪ್ ಓಲೆ?: “ಸರಸ್ವತಿ ಎನ್ನುವವರೊಂದಿಗೆ ನನ್ನ ವಿವಾಹ ನಡೆಯಲಿದೆ. ಈ ವಿಷಯವನ್ನು ತಮ್ಮ “ಮಾಹಿತಿಗಾಗಿ’ ತಿಳಿಸುವುದಕ್ಕೆ ನನ್ನ ಮನಸ್ಸು ನಿರಾಕರಿಸುತ್ತಿದೆ. ಕೋವಿಡ್ ಹಿನ್ನೆಲೆಯಲ್ಲಿ ನನ್ನ ಬಂಧು- ಬಾಂಧವರನ್ನು ಮತ್ತು ಆತ್ಮೀಯರನ್ನು ಆಹ್ವಾನಿಸುವುದು ಕಷ್ಟಸಾಧ್ಯವಾಗುತ್ತಿದೆ. ಕ್ಷಮೆ ಇರಲಿ. ತಾವೆಲ್ಲ ಪರಿಸ್ಥಿತಿಯನ್ನು ಅರಿತುಕೊಂಡು ಮೇ 10 ರಂದು ಭಾನುವಾರ ನಡೆಯಲಿರುವ ನನ್ನ ಮದುವೆಗೆ ತಾವೆಲ್ಲರೂ ತಮ್ಮ ಮನೆಯಿಂದಲೇ ಆಶೀರ್ವದಿಸಬೇಕು ಎಂದು ತುಂಬು ಹೃದಯದಿಂದ ವಿನಂತಿಸುತ್ತೇನೆ. ಮುಂದಿನ ದಿನಗಳಲ್ಲಿ ನಾವೇ ತಮ್ಮ ಮನೆಗಳಿಗೆ ಆಗಮಿಸಿ ತಮ್ಮ ಆಶೀರ್ವಾದ ಪಡೆಯುತ್ತೇವೆ’ ಎಂದವರು ಕೋರಿದ್ದಾರೆ. ಜತೆಗೆ ಮನೆಯಲ್ಲೇ ಇರಿ, ಮಾಸ್ಕ್ ಧರಿಸಿ ಸಂಚರಿಸಿ, ಕೋವಿಡ್ ಓಡಿಸಿ ಎಂಬ ಸಂದೇಶದ ಜತೆಗೆ ಕೋವಿಡ್ ನಿಯಂತ್ರಣ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…