ರೈತರ ಆದಾಯ ಹೆಚ್ಚಿಸಿದ ಜೆಎಸ್‌ಡಬ್ಲ್ಯೂ ಫೌಂಡೇಶನ್‌


Team Udayavani, Jan 25, 2020, 4:20 PM IST

25-January-19

ಬಳ್ಳಾರಿ: ಕೈಗಾರಿಕೆಗಳು ಎಂದಾಕ್ಷಣ ಕೇವಲ ವ್ಯವಹಾರ, ಲಾಭಗಳಿಕೆ ಮಾತ್ರವಲ್ಲ. ಅವುಗಳಿಗೂ ಸಾಮಾಜಿಕ ಜವಾಬ್ದಾರಿಯಿದೆ ಎಂಬುದಕ್ಕೆ ಜಿಲ್ಲೆಯ ಜೆಎಸ್‌ಡಬ್ಲೂ ಸಂಸ್ಥೆಯೇ ಕಾರಣವಾಗಿದೆ. ಭೂಮಿಯಲ್ಲಿ ಫಲವತ್ತತೆಯ ಕೊರತೆ, ಮಳೆ ಅಭಾವದಿಂದ ಕೈಚೆಲ್ಲಿ ಕುಳಿತಿದ್ದ ರೈತರಿಗೆ ಜಿಂದಾಲ್‌ನ ಜೆಎಸ್‌ ಡಬ್ಲೂ ಫೌಂಡೇಶನ್‌ ಮಧ್ಯಸ್ಥಿಕೆ ವಹಿಸಿ ಅಗತ್ಯ ಸಲಹೆ, ಸೂಚನೆಗಳನ್ನು ನೀಡಿ, ಉತ್ತಮ ಇಳುವರಿ ಪಡೆದು ಆರ್ಥಿಕವಾಗಿ ಸದೃಢರಾಗುವಂತೆ ಮಾಡಿದೆ.

ಜಿಲ್ಲೆಯ ಸಂಡೂರು ತಾಲೂಕು ತೋರಣಗಲ್ಲು ಹೋಬಳಿ ವ್ಯಾಪ್ತಿಯಲ್ಲಿನ ಬಹುತೇಕ ಗ್ರಾಮಗಳ ರೈತರು ಭೂಮಿಯ ಫಲವತ್ತತೆಯ ಕೊರತೆ, ಮಳೆಯ ಅಭಾವ, ಹವಾಮಾನ ವೈಪರೀತ್ಯ, ಅಂತರ್ಜಲ ಮಟ್ಟ ಕುಸಿತ, ಹೆಚ್ಚಿದ ಬಂಡವಾಳ, ಕಡಿಮೆ ಇಳುವರಿಯಿಂದ ನಷ್ಟ ಸೇರಿ ಹಲವು ಸಮಸ್ಯೆಗಳಿಂದ ಕೃಷಿಯಿಂದ ವಿಮುಖರಾಗಿದ್ದರು. ಕೈಗಾರಿಕೆಗಳಲ್ಲಿ ಕೆಲಸಕ್ಕೆ ಸೇರಿದ್ದರು. ಇದನ್ನು ಮನಗಂಡಿದ್ದ ಜೆಎಸ್‌ಡಬ್ಲೂ ಫೌಂಡೇಶನ್‌ನವರು ರೈತರನ್ನು ವಾಪಸ್‌ ಕೃಷಿಯತ್ತ ಕೊಂಡೊಯ್ಯಲು ಯೋಜನೆಗಳನ್ನು ರೂಪಿಸಿದರು. ಮೊದಲು ಹೈದ್ರಾಬಾದ್‌ ಮೂಲದ ಇಂಟರ್‌ನ್ಯಾಷನಲ್‌ ಕ್ರಾಪ್ಸ್‌ ರೀಸರ್ಚ್‌ ಇನ್ಸ್‌ಟಿಟ್ಯೂಟ್‌ ಆಫ್‌ ದ ಸೆಮಿ ಆರಿಡ್‌ ಟ್ರಾಪಿಕ್ಸ್‌ (ಇಕ್ರಿಸ್ಯಾಟ್‌) ಎಂಬ ಸಂಸ್ಥೆಯಿಂದ ಆಯ್ದ ದೊಡ್ಡ ಅಂತಾಪುರ, ಚಿಕ್ಕ ಅಂತಾಪುರ, ಕೊಡಾಲು, ಜೋಗ ಗ್ರಾಮಗಳಲ್ಲಿ ಸಮೀಕ್ಷೆ ನಡೆಸಲಾಯಿತು.

ಸಮೀಕ್ಷೆಯಿಂದ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗುತ್ತಿದೆ. ಆದರೆ, ಮಣ್ಣು ಫಲವತ್ತತೆ ಕುಸಿದಿದೆ. ನೀರಿನ ಅಸಮರ್ಪಕ ಬಳಕೆ ಸೇರಿ ಕೆಲ ಅವೈಜ್ಞಾನಿಕ ಪದ್ಧತಿ ಅಳವಡಿಕೆಯಿಂದಾಗಿ ರೈತರು ನಷ್ಟಕ್ಕೀಡಾಗುತ್ತಿದ್ದು, ಕೃಷಿಯಿಂದ ದೂರವಾಗಲು ಕಾರಣ ಎಂಬುದು ತಿಳಿಯಿತು. ಬಳಿಕ ಮಧ್ಯಸ್ಥಿಕೆ ವಹಿಸಿದ ಜೆಎಸ್‌ಡಬ್ಲೂ ಫೌಂಡೇಶನ್‌ ಸರ್ಕಾರದ ಸೌಲಭ್ಯಗಳ ಜತೆಗೆ ರೈತರನ್ನು ಕೃಷಿಯಿಂದ ಆರ್ಥಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ತರಬೇತಿ ನೀಡಿ ಅರಿವು ಮೂಡಿಸಲಾಯಿತು ಎಂದು ಫೌಂಡೇಶನ್‌ನ ಮುಖ್ಯಸ್ಥ ವಿಶ್ವನಾಥ್‌ ಪಲ್ಲೇದ ತಿಳಿಸಿದರು.

ಜೆ.ಎಸ್‌.ಡಬ್ಲ್ಯೂ ಫೌಂಡೇಶನ್‌ನ ಸಮಿಕ್ಷೆಯ ಪ್ರಕಾರ, ಅಂತರ್ಜಲ ಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ದೊಡ್ಡ ಅಂತಾಪುರ, ಚಿಕ್ಕ ಅಂತಾಪುರ, ಕೊಡಾಲು, ಜೋಗ ಗ್ರಾಮಗಳಲ್ಲಿ ಚೆಕ್‌ ಡ್ಯಾಂಗಳನ್ನು ನಿರ್ಮಿಸಲಾಯಿತು. ಹರಿದು ಹೋಗುತ್ತಿದ್ದ ನೀರನ್ನು ಚೆಕ್‌ಡ್ಯಾಂ ಮೂಲಕ ತಡೆದು ನಿಲ್ಲಿಸಿದಾಗ ಅಲ್ಲಿನ ಸುತ್ತಮುತ್ತಲಿನ ಬೋರ್‌ವೆಲ್‌ಗ‌ಳು ರೀಚಾರ್ಜ್‌ ಆಗಿದ್ದು, ಮೊದಲು ಒಂದೆರಡು ತಿಂಗಳು ದೊರೆಯುತ್ತಿದ್ದ ನೀರು, ಇದೀಗ ಏಳೆಂಟು ತಿಂಗಳು ಲಭಿಸುತ್ತಿದೆ. ಇದರೊಂದಿಗೆ ಕೃಷಿ ಹೊಂಡ, ಬದುಗಳನ್ನು ನಿರ್ಮಿಸಲಾಗಿದೆ. ಜತೆಗೆ ರೈತರಿಗೆ ವಿವಿಧ ತಳಿಗಳನ್ನು ಸಹ ಪರಿಚಯಿಸಲಾಗಿದ್ದು, ಇದೀಗ ರೈತರು, ಉತ್ತಮ ಇಳುವರಿಯೊಂದಿಗೆ ವರ್ಷಕ್ಕೆ 2 ಬೆಳೆ ಪಡೆಯುತ್ತಿದ್ದು, ಅಷ್ಟೇ ಪ್ರಮಾಣದಲ್ಲಿ ಲಾಭವನ್ನೂ ಗಳಿಸುತ್ತಿದ್ದಾರೆ. 6 ಎಕರೆ ಹೊಲದಲ್ಲಿ ಹತ್ತಿಯೊಂದಿಗೆ ತರಕಾರಿಯನ್ನೂ ನಾಟಿ ಮಾಡಲಾಗಿದ್ದು, ಇಳುವರಿ ಉತ್ತಮವಾಗಿ ಬಂದಿದೆ. ಚೆಕ್‌ ಡ್ಯಾಂ ನಿರ್ಮಿಸಿದ್ದು, ಬೋರ್‌ವೆಲ್‌ ಗಳು ರೀಚಾರ್ಜ್‌ ಆಗಲು ಅನುಕೂಲವಾಗಿದೆ ಎಂದು ಲಿಂಗದಹಳ್ಳಿಯ ರೈತ ಸಿ.ಜಿ. ಹಾವಣ್ಣ ವಿಶ್ವಾಸ ವ್ಯಕ್ತಪಡಿಸಿದರು.

ಜೆಎಸ್‌ಡಬ್ಲೂ ಫೌಂಡೇಶನ್‌ನವರು ಮನೆಗಳಿಂದ ಹೊರಬಿಡುವ ತ್ಯಾಜ್ಯ ನೀರನ್ನು
ಶುದ್ಧೀಕರಿಸಿ ಮರುಬಳಕೆ ಮಾಡಲು ಮುಂದಾದಾಗ ದೊಡ್ಡ ಅಂತಾಪುರದಲ್ಲಿ 300 ಅಡಿ ಜಾಗವನ್ನು ಬಿಟ್ಟುಕೊಟ್ಟರು. ವೇಸ್ಟ್‌ವಾಟರ್‌ ಟ್ರೀಟ್‌ಮೆಂಟ್‌ ಸಿಸ್ಟಮ್‌ನಲ್ಲಿ ತ್ಯಾಜ್ಯ ನೀರನ್ನು ಶುದ್ಧೀಕರಿಸಿದ ಬಳಿಕ ಆ ನೀರನ್ನು ಕೃಷಿಗೆ ಬಳಸಲು ಅವಕಾಶ ಕಲ್ಪಿಸಲಾಗಿದ್ದು, ರೈತರೊಬ್ಬರು ಈ ನೀರಲ್ಲಿ ಮೂರು ಎಕರೆಯಲ್ಲಿ ಹತ್ತಿ, ಮೆಣಸಿನಕಾಯಿ ಬೆಳೆದು ಅ ಧಿಕ ಲಾಭವನ್ನು ಗಳಿಸಿದ್ದಾರೆ ಎಂದು ಪ್ರಣತಿ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಂಯೋಜಕಿ ಗಂಗಾ ತಿಳಿಸಿದರು.

2013-14ನೇ ಸಾಲಿನಲ್ಲಿ ಆರಂಭಿಸಲಾದ ಈ ಯೋಜನೆಯಲ್ಲಿ ಮೊದಲ ವರ್ಷ 300 ಹೆಕ್ಟೇರ್‌ ಜಮೀನನ್ನು ಅಭಿವೃದ್ಧಿಪಡಿಸಲಾಗಿದ್ದು, ಹಂತಹಂತವಾಗಿ ಏಳು ವರ್ಷಗಳ ಅವಧಿಯಲ್ಲಿ ಸುಮಾರು 10 ಸಾವಿರ ಹೆಕ್ಟೇರ್‌ ಜಮೀನನ್ನು ಅಭಿವೃದ್ಧಿಪಡಿಸಲಾಗಿದೆ. ಮುಂದಿನ ಐದು ವರ್ಷಗಳಲ್ಲಿ 25 ಹಳ್ಳಿಗಳಲ್ಲಿ ಸುಮಾರು 30 ರಿಂದ 40 ಸಾವಿರ ಹೆಕ್ಟೇರ್‌ ಪ್ರದೇಶವನ್ನು ಅಭಿವೃದ್ಧಿಪಡಿಸುವ ಗುರಿ ಹೊಂದಲಾಗಿದೆ ಎಂದು ಫೌಂಡೇಶನ್‌ನ ಮುಖ್ಯಸ್ಥ ವಿಶ್ವನಾಥ್‌ ಪಲ್ಲೇದ ತಿಳಿಸಿದರು.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.