ಸಂಪೂರ್ಣ ಲಾಕ್‌ಡೌನ್‌ಗೆ ಜನಬೆಂಬಲ

ರಸ್ತೆಗಿಳಿಯದ ಸಾರಿಗೆ ಬಸ್‌ ಸಂಚರಿಸದ ವಾಹನಗಳು  ಕೆಲ ಹೊತ್ತು ತರಕಾರಿ ಮಾರುಕಟ್ಟೆ, ಮಾಂಸದಂಗಡಿ ವಹಿವಾಟು

Team Udayavani, May 25, 2020, 1:30 PM IST

25-May-13

ಹರಪನಹಳ್ಳಿ: ಜನರಿಲ್ಲದೇ ಬಿಕೋ ಎನ್ನುತ್ತಿರುವ ಕೊಟ್ಟೂರು ವೃತ್ತ.

ಬಳ್ಳಾರಿ: ರಾಜ್ಯ ಸರ್ಕಾರದ ಮೇ 24ರ ಲಾಕ್‌ಡೌನ್‌ ಕರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರುವ ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಜನರೇ ಸ್ವಯಂ ಪ್ರೇರಣೆಯಿಂದ ಮತ್ತೊಂದು “ಜನತಾ ಕರ್ಫ್ಯೂ’ ಆಚರಿಸಿದ್ದಾರೆ.

ಬೆಳಗ್ಗೆ ಒಂದಷ್ಟು ಔಷಧ ಮಳಿಗೆ, ತರಕಾರಿ ಮಾರುಕಟ್ಟೆ, ಮಾಂಸದ ಅಂಗಡಿಗಳನ್ನು ಹೊರತುಪಡಿಸಿದರೆ ಉಳಿದಂತೆ ಎಲ್ಲ ವಿಧದ ವಾಣಿಜ್ಯ ಮಳಿಗೆಗಳು ಸಂಪೂರ್ಣ ಬಂದ್‌ ಆಗಿದ್ದು, ಬಳ್ಳಾರಿ ಸೇರಿ ಜಿಲ್ಲೆಯಾದ್ಯಂತ ಲಾಕ್‌ಡೌನ್‌ಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ಕೋವಿಡ್ ವೈರಸ್‌ ನಿಯಂತ್ರಿಸುವ ಸಲುವಾಗಿ ಕೇಂದ್ರ ರಾಜ್ಯ ಸರ್ಕಾರಗಳು ಲಾಕ್‌ಡೌನ್‌ನ್ನು ಜಾರಿಗೆ ತಂದಿದೆ. ಲಾಕ್‌ಡೌನ್‌ ನಿಮಿತ್ತ ವಾಣಿಜ್ಯ ಮಳಿಗೆಗಳು ಸೇರಿ ವಾಹನಗಳು ರಸ್ತೆಗಿಳಿಯದಂತೆ, ಜನರು ಹೊರಬರದಂತೆ ತಡೆಯುವಲ್ಲಿ ಪೊಲೀಸರ ಪಾತ್ರ ಪ್ರಮುಖ. ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಮೊದಲೆರಡು ಲಾಕ್‌ಡೌನ್‌ ನಲ್ಲಿ ಜನರು ಹೊರಬರದಂತೆ, ವಾಣಿಜ್ಯ ಮಳಿಗೆಗಳು ತೆರೆಯದಂತೆ ತಡೆಯುವ ಸಲುವಾಗಿ ಪೊಲೀಸರು ಇಡೀ ದಿನ ವೃತ್ತಗಳಲ್ಲಿ, ರಸ್ತೆಗಳಲ್ಲಿ ನಿಂತು ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ, ರಾಜ್ಯ ಸರ್ಕಾರ ಘೋಷಿಸಿದ್ದ ಮೇ 24ರ ಒಂದು ದಿನದ ಸಂಪೂರ್ಣ ಲಾಕ್‌ಡೌನ್‌ ನಲ್ಲಿ ಪೊಲೀಸರು ಎಲ್ಲಿಯೂ ಕಾಣದಿದ್ದರೂ, ರಸ್ತೆಗಳು ಮಾತ್ರ ವಾಹನಗಳು, ಪಾದಚಾರಿಗಳು ಇಲ್ಲದೇ ಖಾಲಿ ಖಾಲಿಯಾಗಿದ್ದ ದೃಶ್ಯ ಕಂಡುಬಂದವು.

ಬಳ್ಳಾರಿ ನಗರದಲ್ಲಿ ಬೆಳಗ್ಗೆ ಒಂದಷ್ಟು ತರಕಾರಿ ಮಾರುಕಟ್ಟೆ, ಮಾಂಸದ ಅಂಗಡಿಗಳು, ಹಾಲು, ಕಿರಾಣಿ ಅಂಗಡಿ ತೆರೆದು ನಂತರ ಬಂದ್‌ ಆಗಿದ್ದವು. ಇನ್ನು ಔಷಧ, ಪೆಟ್ರೋಲ್‌ ಬಂಕ್‌ ಎಂದಿನಂತೆ ಕಾರ್ಯನಿರ್ವಹಿಸಿದ್ದು, ಉಳಿದಂತೆ ಸಾರಿಗೆ ಬಸ್‌ಗಳು ಸಂಚಾರ ಸ್ಥಗಿತಗೊಳಿಸಿ ನಿಲುಗಡೆಯಾಗಿದ್ದವು. ನಗರದಲ್ಲಿ ಸಂಚರಿಸುವ ಪ್ರಯಾಣಿಕ ಆಟೋಗಳು, ನೆರೆಯ ಹಳ್ಳಿಗಳಿಂದ ಪ್ರಯಾಣಿಕರನ್ನು ಹೊತ್ತು ತರುವ ಟಂಟಂ ಆಟೋಗಳು ನಗರದತ್ತ ಸುಳಿಯಲಿಲ್ಲ. 4ನೇ ಹಂತದ ಲಾಕ್‌ಡೌನ್‌ನಲ್ಲಿ ಬಹುತೇಕ ಕ್ಷೇತ್ರಗಳಿಗೆ ಸಡಿಲಿಕೆ ನೀಡಿದ್ದರೂ, ಮೇ 24ರ ಒಂದು ದಿನ ಸಂಪೂರ್ಣ ಲಾಕ್‌ ಡೌನ್‌ಗೆ ಮಾತ್ರ ಜಿಲ್ಲೆಯ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರುವುದು ವಿಶೇಷವಾಗಿದ್ದು, ಲಾಕ್‌ಡೌನ್‌ ಬಗ್ಗೆ ಜನರಲ್ಲಿ ಜಾಗೃತಿ ಮೂಡಿದೆ ಎನ್ನಬಹುದು.

ಜೊತೆಗೆ ಸರ್ಕಾರಿ ಬಸ್‌, ಖಾಸಗಿ ಆಟೋ ಸಹ ರಸ್ತೆಗಿಳಿಯಲಿಲ್ಲ. ಅಲ್ಲದೆ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ನಗರ ಸೇರಿ ವಿವಿಧೆಡೆ ಅನಗತ್ಯವಾಗಿ ಯಾರು ರಸ್ತೆಗಿಳಿಯುವಂತಿಲ್ಲ ಎಂದು ಮೈಕ್‌ ಮೂಲಕ ಘೋಷಣೆ ಮಾಡಿದ್ದು, ವಾಣಿಜ್ಯ ಮಳಿಗೆಗಳವರು ಸಹ ಮುಂಜಾಗ್ರತೆ ವಹಿಸಿ ಬಂದ್‌ ಮಾಡಿದರು. ಇನ್ನು ನಗರದ ಮೋತಿ ವೃತ್ತ, ಗಡಗಿ ಚನ್ನಪ್ಪ ವೃತ್ತ ಸೇರಿ ಪ್ರಮುಖ ವೃತ್ತಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ದಿನನಿತ್ಯ ಜನರಿಂದ ತುಂಬಿ ತುಳುಕುತ್ತಿದ್ದ ಏರಿಯಾಗಳೆಲ್ಲ ಜನರಿಲ್ಲದೇ ಬೀಕೋ ಎನ್ನುತ್ತಿದ್ದವು.

ಮಾಂಸ ಖರೀದಿ ಜೋರು: ನಗರದಲ್ಲಿ ಬೆಳಿಗ್ಗೆ ಮಾಂಸ ಮತ್ತು ಮೀನು ಖರೀದಿ ತುಂಬಾ ಜೋರಾಗಿ ನಡೆದಿತ್ತು. ನಗರದ ದೊಡ್ಡಮಾರುಕಟ್ಟೆ, ಸಣ್ಣ ಮಾರ್ಕೆಟ್‌, ತಾಳೂರು ರಸ್ತೆ, ಕಪ್ಪಗಲ್‌ ರೋಡ್‌, ಎಂ.ಜಿ.ರಸ್ತೆ, ಸೇರಿದಂತೆ ನಾನಾಕಡೆ ಚಿಕನ್‌, ಮಟನ್‌, ಮೀನು ಖರೀದಿಯಲ್ಲಿ ಮಾಂಸ ಪ್ರಿಯರು ತೊಡಗಿಕೊಂಡಿದ್ದರು. ಕೆಲವೆಡೆ ನಿಯಮಗಳನ್ನು ಅನುಸರಿಸಿದರೆ ಇನ್ನೂ ಕೆಲವೆಡೆ ಸಾಮಾಜಿಕ ಅಂತರವೂ ಇಲ್ಲ, ಮಾಸ್ಕ್ ಕೂಡ ಧರಿಸಿರಲಿಲ್ಲ. ಭಾನುವಾರದ ಬಾಡೂಟಕ್ಕೆ ಮಾಂಸ ಖರೀದಿಯಲ್ಲಿ ನಿರತರಾಗಿದ್ದುದು ಕಂಡುಬಂದಿತು.

ಇನ್ನು ಲಾಕ್‌ಡೌನ್‌ನಲ್ಲಿ ಮದುವೆಗಳಿಗೆ ವಿನಾಯಿತಿ ನೀಡಿದ್ದರಿಂದ ಬಳ್ಳಾರಿ ಸೇರಿ ಜಿಲ್ಲೆಯಾದ್ಯಂತ ಬಹುತೇಕ ಮದುವೆಗಳು ಸರಳವಾಗಿ ನಡೆದವು. ಮನೆಗಳ ಮುಂದೆಯೇ ಪೆಂಡಾಲ್‌ಗ‌ಳನ್ನು ಅಳವಡಿಸಿ, ಸರಳವಾಗಿ ಮದುವೆಗಳು ನಡೆದವು. ಜನರು ಕಡಿಮೆ ಸಂಖ್ಯೆಯಲ್ಲಿ ನೆರೆದಿದ್ದು ಕಂಡುಬಂತು. ಅದೇ ರೀತಿ ಲಾಕ್‌ಡೌನ್‌ಗೆ ಬಳ್ಳಾರಿ ಮಾತ್ರವಲ್ಲದೇ, ಜಿಲ್ಲೆಯ ಹೊಸಪೇಟೆ, ಹ.ಬೊ. ಹಳ್ಳಿ ಸೇರಿ ಎಲ್ಲ ತಾಲೂಕುಗಳಲ್ಲೂ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ಹರಿವು; ಕಂಪ್ಲಿ-ಗಂಗಾವತಿ ಸಂಪರ್ಕ ಕಡಿತ

Bellary; ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ಹರಿವು; ಕಂಪ್ಲಿ-ಗಂಗಾವತಿ ಸಂಪರ್ಕ ಕಡಿತ

Bellary; ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

Bellary; ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Bellary; Indefinite strike by Lorry Owners Association

Bellary; ಲಾರಿ ಮಾಲೀಕರ ಸಂಘದಿಂದ ಅನಿರ್ದಿಷ್ಟಾವಧಿ ಮುಷ್ಕರ

14-siruguppa

Siruguppa: ಅಕ್ರಮ ಗಾಂಜಾ; 2 ದ್ವಿಚಕ್ರ ವಾಹನ ವಶ, 5 ಆರೋಪಿಗಳ ಬಂಧನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.