“ಕೈ’ಗೆ ಕೋಟೆ ಕಟ್ಟುವ ತವಕ, ರಾಮುಲುಗೆ ಅಸ್ತಿತ್ವದ ಸವಾಲು


Team Udayavani, Nov 1, 2018, 10:15 AM IST

b-50.jpg

ಬಳ್ಳಾರಿ: ಹೈವೋಲ್ಟೆಜ್‌ ಚುನಾವಣೆ ಎಂದೇ ಬಿಂಬಿಸಲಾಗುತ್ತಿರುವ ಬಳ್ಳಾರಿ ಲೋಕಸಭೆ ಉಪಚುನಾವಣೆ ಅಲ್ಪಾವಧಿಗೆ ಆಗಿದ್ದರೂ ಸಾರ್ವತ್ರಿಕ ಚುನಾವಣೆಗಿಂತಲೂ ಹೆಚ್ಚು ರಂಗೇರಿದೆ. ಇದನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿರುವ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ನೇರ ಪೈಪೋಟಿ ಏರ್ಪಟ್ಟಿದ್ದು, ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಜಿದ್ದಾಜಿದ್ದಿನ ಹೋರಾಟದಲ್ಲಿ ತೊಡಗಿವೆ. ರಾಜ್ಯದಲ್ಲಿ ನಡೆಯುತ್ತಿರುವ ಮೂರು ಲೋಕಸಭೆ ಕ್ಷೇತ್ರಗಳ ಉಪಚುನಾವಣೆ ಪೈಕಿ ಎರಡು ಕ್ಷೇತ್ರಗಳನ್ನು ಮಿತ್ರಪಕ್ಷ ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವ ಕಾಂಗ್ರೆಸ್‌, ಗಣಿನಾಡು ಬಳ್ಳಾರಿಯಲ್ಲಿ ಮಾತ್ರ ತನ್ನ ಅಭ್ಯರ್ಥಿ ವಿ.ಎಸ್‌. ಉಗ್ರಪ್ಪ ಅವರನ್ನು ಕಣಕ್ಕಿಳಿಸಿದೆ. ಹಾಗಾಗಿ, ಮಾಜಿ ಸಿಎಂ ಸಿದ್ದರಾಮಯ್ಯ, ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್‌ ಈ ಚುನಾವಣೆ ಯನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದಾರೆ. ಇನ್ನು, ತಮ್ಮ ರಾಜೀನಾಮೆಯಿಂದ ಎದುರಾದ ಚುನಾವಣೆ ಆಗಿದ್ದರಿಂದ ಹಾಗೂ ಸಹೋದರಿ ಜೆ.ಶಾಂತಾ ಅವರೇ ಸ್ಪರ್ಧಿಸಿರುವುದರಿಂದ ಶಾಸಕ ಬಿ.ಶ್ರೀರಾಮುಲು ಅವರೂ ವೈಯಕ್ತಿಕ ವಾಗಿ ಪ್ರತಿಷ್ಠೆಯನ್ನಾಗಿ ಸ್ವೀಕರಿಸಿದ್ದಾರೆ. ಇಲ್ಲಿ ಯಾರೇ ಗೆದ್ದರೂ ಅಂತರ ತೀರ ಕಡಿಮೆ ಯಾಗಿರಲಿದೆ ಎಂಬುದು ಜನಾಭಿಪ್ರಾಯ.

ವೆಂಕೋಬಿ ಸಂಗನಕಲ್ಲು 

6 ಕಾಂಗ್ರೆಸ್‌ ಶಾಸಕರ ಬಲ: ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು ಎಂಟು ವಿಧಾನಸಭಾ ಕ್ಷೇತ್ರಗಳು ಬರುತ್ತವೆ. ಈ ಪೈಕಿ ಆರರಲ್ಲಿ ಕಾಂಗ್ರೆಸ್‌ ಶಾಸಕರಿದ್ದಾರೆ. ಹೀಗಾಗಿ, ಕಾಂಗ್ರೆಸ್‌ ಮುಖಂಡರು ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ ಬಳ್ಳಾರಿಯನ್ನು ಮತ್ತೆ ಪಕ್ಷದ ಭದ್ರಕೋಟೆಯಾಗಿಸಲು ಶತಾಯ ಗತಾಯ ಯತ್ನಿಸುತ್ತಿದ್ದಾರೆ. ಇನ್ನು, ಕಳೆದ ಮೂರು ಅವಧಿಗೆ ಲೋಕಸಭೆ ಚುನಾವಣೆಯಲ್ಲಿ ಜಯ ಗಳಿಸಿದ್ದ ಬಿಜೆಪಿ, 2008ರ ವಿಧಾನಸಭೆ ಚುನಾವಣೆಯಲ್ಲಿ ಎಂಟು ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಬಳ್ಳಾರಿಯನ್ನು ಪಕ್ಷದ ಭದ್ರಕೋಟೆಯನ್ನಾಗಿಸಿತ್ತು. ಆದರೆ, 2013ರ ಚುನಾವಣೆಯಲ್ಲಿ ಶ್ರೀರಾಮುಲು ಅವರದ್ದೇ ಆದ ಬಿಎಸ್ಸಾರ್‌ ಪಕ್ಷದ ಸವಾಲಿನಿಂದಾಗಿ ಕೇವಲ ಒಂದು ಕ್ಷೇತ್ರದಲ್ಲಿ ಗೆದ್ದಿದ್ದ ಬಿಜೆಪಿ, 2018ರ ಚುನಾವಣೆಯಲ್ಲಿ ಮೂರರಲ್ಲಿ ಜಯ ಗಳಿಸಿತ್ತು. ಪ್ರತಿ ಚುನಾವಣೆಯಲ್ಲೂ “ಶಕ್ತಿ’
ಕಳೆದುಕೊಳ್ಳುತ್ತಿರುವ ಬಿಜೆಪಿಗೆ ಈ ಲೋಕಸಭೆ ಕ್ಷೇತ್ರವೂ ಕೈ ತಪ್ಪಿದರೆ ಶ್ರೀರಾಮುಲು ಅವರಿಗೆ ಅಸ್ತಿತ್ವದ ಪ್ರಶ್ನೆ ಎದುರಾಗುವ ಸಾಧ್ಯತೆಯಿದೆ. ಹೀಗಾಗಿ, ಸಹೋದರಿ ಜೆ.ಶಾಂತಾ ಅವರನ್ನು ಗೆಲ್ಲಿಸಿಕೊಳ್ಳಬೇಕಾದ ಅನಿವಾರ್ಯತೆ ಅವರಿಗೆ ಎದುರಾಗಿದೆ.

ವೈಯಕ್ತಿಕ ವಿಚಾರಗಳೇ ಅಸ್ತ್ರ: ಉಪಚುನಾವಣೆಯಲ್ಲಿ ಜಿಲ್ಲೆಯ ಅಭಿವೃದ್ಧಿಗಿಂತ ವೈಯಕ್ತಿಕ ವಿಚಾರಗಳೇ ಪ್ರಚಾರದ ಪ್ರಮುಖ ಅಸ್ತ್ರಗಳಾಗಿವೆ. ಶ್ರೀರಾಮುಲು ರಾಜೀನಾಮೆಯಿಂದ ಎದುರಾದ ಮೂರು ಉಪಚುನಾವಣೆ, ಸಹೋದರಿಯನ್ನೇ ಕಣಕ್ಕಿಳಿಸಿದ್ದು, 10 ವರ್ಷ ಸಂಸದರಾಗಿದ್ದ ಸಹೋದರ-ಸಹೋದರಿಯರು ಸಂಸತ್‌ನಲ್ಲಿ ಜಿಲ್ಲೆಯ ಬಗ್ಗೆ ಒಮ್ಮೆಯೂ ಧ್ವನಿಯೆತ್ತಿಲ್ಲ ಎಂಬುದು ಕಾಂಗ್ರೆಸ್‌ನ ಪ್ರಚಾರದ ಪ್ರಮುಖ ಅಸ್ತ್ರಗಳು. ಕಾಂಗ್ರೆಸ್‌ ಅಭ್ಯರ್ಥಿ ವಿ.ಎಸ್‌. ಉಗ್ರಪ್ಪ ಸ್ಥಳೀಯರಲ್ಲ. 1980ರ ದಶಕದಲ್ಲಿ ಎಲ್‌.ಜಿ.ಹಾವನೂರು ಅವರನ್ನು ಸೋಲಿಸಿದ್ದ ಉಗ್ರಪ್ಪ ಇದೀಗ ಶಾಂತಾ ಅವರನ್ನು ಸೋಲಿಸಲು ಬಳ್ಳಾರಿಗೆ ಬಂದಿದ್ದಾರೆ ಎಂಬುದು ಸೇರಿ ಕಾಂಗ್ರೆಸ್‌ನವರ ಪ್ರತಿಯೊಂದು ಆರೋಪಗಳನ್ನು ಜಾತಿ ಮತ್ತು ಸಮುದಾಯಕ್ಕೆ  ಬಿಂಬಿಸಿಕೊಳ್ಳುತ್ತಿರುವುದು ಬಿಜೆಪಿಯ ಪ್ರಚಾರದ ಪ್ರಮುಖ ವಿಷಯ.

ನಿರ್ಣಾಯಕ ಅಂಶ
ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 17,08,266 ಮತದಾರರಿದ್ದಾರೆ. ಇದರಲ್ಲಿ ಬಹುಸಂಖ್ಯಾತ ಹಾಗೂ ಪ್ರಬಲವಾದ ಪರಿಶಿಷ್ಟ ಸಮುದಾಯ, ವೀರಶೈವ ಲಿಂಗಾಯತ ಮತಗಳು ನಿರ್ಣಾಯಕ ಪಾತ್ರ ವಹಿಸಲಿವೆ. ಈ ಕ್ಷೇತ್ರ ಪರಿಶಿಷ್ಟ ಪಂಗಡಕ್ಕೆ  ಮೀಸಲಾಗಿದ್ದರಿಂದ ಆ ಸಮುದಾಯದ ಮತಗಳು ಹಂಚಿ ಹೋಗುವ ಸಾಧ್ಯತೆಯಿದೆ. ಕಾಂಗ್ರೆಸ್‌ನ ಸಾಂಪ್ರದಾಯಿಕ ಎನ್ನಲಾಗುವ ಮುಸ್ಲಿಂ, ಪರಿಶಿಷ್ಟ ಜಾತಿ, ಕುರುಬ ಮತಗಳು ಕಳೆದ ವಿಧಾನಸಭೆ ಚುನಾವಣೆಯಂತೆ ಈ ಬಾರಿಯೂ ಆ ಪಕ್ಷದತ್ತ ವಾಲುವ ಸಾಧ್ಯತೆಯಿದೆ. ವೀರಶೈವ ಲಿಂಗಾಯತರು ಬಿಜೆಪಿಯತ್ತ ಒಲವು ತೋರಬಹುದೆಂದು ಅಂದಾಜಿಸಲಾಗಿದೆ. ಇನ್ನುಳಿದ ಎಲ್ಲ ಸಮುದಾಯಗಳ ಮತಗಳ ಮೇಲೆ ಎರಡೂ ಪಕ್ಷಗಳೂ ಕಣ್ಣಿಟ್ಟಿವೆ.

ಅಭ್ಯರ್ಥಿಗಳು 
ಬಿಜೆಪಿ: ಜೆ.ಶಾಂತಾ
ಕಾಂಗ್ರೆಸ್‌: ವಿ.ಎಸ್‌.ಉಗ್ರಪ್ಪ 
ಪಕ್ಷೇತರ: ಡಾ| ಟಿ.ಆರ್‌.ಶ್ರೀನಿವಾಸ್‌, ಪಂಪಾಪತಿ 

ಪ್ರತಿ ಹಳ್ಳಿಗೂ ಭೇಟಿ ನೀಡಿ ಮತಯಾಚನೆ ಮಾಡುತ್ತಿದ್ದೇನೆ. ಚುನಾವಣೆ ಯಲ್ಲಿ ಜಿಲ್ಲೆಯ ಮಗಳು ನಿಂತಿದ್ದಾರೆ ಎಂಬುದನ್ನು 
ಅರಿತು ನನ್ನ ಪರ ಮತದಾನ ಮಾಡಿ, ಆಶೀರ್ವಾದ ಮಾಡಲಿದ್ದಾರೆ. 
 
● ಜೆ.ಶಾಂತಾ, ಬಿಜೆಪಿ ಅಭ್ಯರ್ಥಿ.

ಬಳ್ಳಾರಿ ಲೋಕಸಭಾ ಕ್ಷೇತ್ರಾದ್ಯಂತ ಪ್ರವಾಸ ಕೈಗೊಂಡಿದ್ದೇನೆ. ಎಲ್ಲೆಡೆ ಉತ್ತಮ ಸ್ಪಂದನೆ ದೊರೆತಿದೆ. ಜನರು ಆಶೀರ್ವಾದ ಮಾಡಲಿದ್ದು, ಗೆಲ್ಲುವುದು ಖಚಿತ.
● ಉಗ್ರಪ್ಪ, ಕಾಂಗ್ರೆಸ್‌ ಅಭ್ಯರ್ಥಿ

Ad

ಟಾಪ್ ನ್ಯೂಸ್

Rekha-Gupta-CM

ದಿಲ್ಲಿ ಸಿಎಂ ಅಧಿಕೃತ ನಿವಾಸ ನವೀಕರಣ ಟೆಂಡರ್‌ ರದ್ದುಗೊಳಿಸಿದ ಸರಕಾರ

ಸಿಎಂ ನೇತೃತ್ವದ ನಿಯೋಗದಿಂದ ರಕ್ಷಣಾ ಸಚಿವರ ಭೇಟಿ, 2 ಡಿಫೆನ್ಸ್‌ ಕಾರಿಡಾರ್‌ಗೆ ಮನವಿ

ಸಿಎಂ ನೇತೃತ್ವದ ನಿಯೋಗದಿಂದ ರಕ್ಷಣಾ ಸಚಿವರ ಭೇಟಿ, 2 ಡಿಫೆನ್ಸ್‌ ಕಾರಿಡಾರ್‌ಗೆ ಮನವಿ

ರಾಜ್ಯದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರ ಸಕಾರಾತ್ಮಕ ಸ್ಪಂದನೆ: ಸಿದ್ದರಾಮಯ್ಯ

ರಾಜ್ಯದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರ ಸಕಾರಾತ್ಮಕ ಸ್ಪಂದನೆ: ಸಿದ್ದರಾಮಯ್ಯ

Aranthodu: ಆಕಸ್ಮಿಕ ಬೆಂಕಿ… ಹೊತ್ತಿ ಉರಿದ ಗ್ರಾಮ ಪಂಚಾಯತ್‌ನ ಘನತ್ಯಾಜ್ಯ ಘಟಕ

Aranthodu: ಆಕಸ್ಮಿಕ ಬೆಂಕಿ… ಹೊತ್ತಿ ಉರಿದ ಗ್ರಾಮ ಪಂಚಾಯತ್‌ನ ಘನತ್ಯಾಜ್ಯ ಘಟಕ

Shivasene–MLA–Assult

ಹಳಸಿದ ಆಹಾರ ಕೊಟ್ಟಿದ್ದಕ್ಕೆ ಕ್ಯಾಂಟೀನ್‌ ಸಿಬ್ಬಂದಿ ಮುಖಕ್ಕೆ ಗುದ್ದಿದ ಶಿವಸೇನೆ ಶಾಸಕ!

Dharwad: ಆಂಗ್ಲ ಮಾದ್ಯಮ ಶಾಲೆ ಆರಂಭಿಸುವುದು ಕೈಬಿಡಿ… ಸರ್ಕಾರಕ್ಕೆ ಕವಿಸಂ ಆಗ್ರಹ

Dharwad: ಆಂಗ್ಲ ಮಾದ್ಯಮ ಶಾಲೆ ಆರಂಭಿಸುವುದು ಕೈಬಿಡಿ… ಸರ್ಕಾರಕ್ಕೆ ಕವಿಸಂ ಆಗ್ರಹ

ENG vs IND: 3ನೇ ಟೆಸ್ಟ್‌ಗೆ ಇಂಗ್ಲೆಂಡ್‌ ತಂಡ ಪ್ರಕಟ; 4 ವರ್ಷದ ಬಳಿಕ ಮರಳಿದ ಘಾತಕ ವೇಗಿ

ENG vs IND: 3ನೇ ಟೆಸ್ಟ್‌ಗೆ ಇಂಗ್ಲೆಂಡ್‌ ತಂಡ ಪ್ರಕಟ; 4 ವರ್ಷದ ಬಳಿಕ ಮರಳಿದ ಘಾತಕ ವೇಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಆಂಗ್ಲ ಮಾದ್ಯಮ ಶಾಲೆ ಆರಂಭಿಸುವುದು ಕೈಬಿಡಿ… ಸರ್ಕಾರಕ್ಕೆ ಕವಿಸಂ ಆಗ್ರಹ

Dharwad: ಆಂಗ್ಲ ಮಾದ್ಯಮ ಶಾಲೆ ಆರಂಭಿಸುವುದು ಕೈಬಿಡಿ… ಸರ್ಕಾರಕ್ಕೆ ಕವಿಸಂ ಆಗ್ರಹ

Dharawad: ಕಾಂಗ್ರೆಸ್-ಬಿಜೆಪಿಯಿಂದ ಹಿಂದಿ ಹೇರಿಕೆ ತಡೆ ಅಸಾಧ್ಯ: ಪ್ರೊ.ಬಿಳಿಮಲೆ

Dharawad: ಕಾಂಗ್ರೆಸ್-ಬಿಜೆಪಿಯಿಂದ ಹಿಂದಿ ಹೇರಿಕೆ ತಡೆ ಅಸಾಧ್ಯ: ಪ್ರೊ.ಬಿಳಿಮಲೆ

Kalaburagi: ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

Kalaburagi: ರಸ್ತೆ ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು… ಬಾಲಕಿ ಸಾ*ವು, ಯುವಕನ ಸ್ಥಿತಿ ಗಂಭೀರ

Gadag: ವಿಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಜೋಡಿ… ಬಾಲಕಿ ಸಾ*ವು, ಯುವಕನ ಸ್ಥಿತಿ ಗಂಭೀರ

15-sri-ramulu

ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಆರಂಭವಾಗಿದ್ದು, ಬದಲಾವಣೆ ಸನಿಹವಿದೆ: ಬಿ.ಶ್ರೀರಾಮುಲು

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Rekha-Gupta-CM

ದಿಲ್ಲಿ ಸಿಎಂ ಅಧಿಕೃತ ನಿವಾಸ ನವೀಕರಣ ಟೆಂಡರ್‌ ರದ್ದುಗೊಳಿಸಿದ ಸರಕಾರ

22

Bantwal: ಹಿಂಸಾತ್ಮಕವಾಗಿ ದನಗಳ ಸಾಗಾಟ; ಒಂದು ಸಾವು

ಸಿಎಂ ನೇತೃತ್ವದ ನಿಯೋಗದಿಂದ ರಕ್ಷಣಾ ಸಚಿವರ ಭೇಟಿ, 2 ಡಿಫೆನ್ಸ್‌ ಕಾರಿಡಾರ್‌ಗೆ ಮನವಿ

ಸಿಎಂ ನೇತೃತ್ವದ ನಿಯೋಗದಿಂದ ರಕ್ಷಣಾ ಸಚಿವರ ಭೇಟಿ, 2 ಡಿಫೆನ್ಸ್‌ ಕಾರಿಡಾರ್‌ಗೆ ಮನವಿ

ರಾಜ್ಯದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರ ಸಕಾರಾತ್ಮಕ ಸ್ಪಂದನೆ: ಸಿದ್ದರಾಮಯ್ಯ

ರಾಜ್ಯದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರ ಸಕಾರಾತ್ಮಕ ಸ್ಪಂದನೆ: ಸಿದ್ದರಾಮಯ್ಯ

Aranthodu: ಆಕಸ್ಮಿಕ ಬೆಂಕಿ… ಹೊತ್ತಿ ಉರಿದ ಗ್ರಾಮ ಪಂಚಾಯತ್‌ನ ಘನತ್ಯಾಜ್ಯ ಘಟಕ

Aranthodu: ಆಕಸ್ಮಿಕ ಬೆಂಕಿ… ಹೊತ್ತಿ ಉರಿದ ಗ್ರಾಮ ಪಂಚಾಯತ್‌ನ ಘನತ್ಯಾಜ್ಯ ಘಟಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.