ಪುನಃ ಹೊರಗಿನವರಿಗೆ ಟಿಕೆಟ್‌ ನೀಡಿದ ಕಾಂಗ್ರೆಸ್‌ !


Team Udayavani, Oct 16, 2018, 6:20 AM IST

congress-700.jpg

ಬಳ್ಳಾರಿ: ಗಣಿ ನಾಡು ಬಳ್ಳಾರಿ ಲೋಕಸಭೆ ಕ್ಷೇತ್ರಕ್ಕೆ ನಡೆದ ಕಳೆದ ಎರಡು ಚುನಾವಣೆಗಳಲ್ಲೂ ಹೊರಗಿನವರನ್ನೇ ಕಣಕ್ಕಿಳಿಸಿ ಪರಾಭವಗೊಂಡಿದ್ದ ಕಾಂಗ್ರೆಸ್‌, ಈ ಬಾರಿಯೂ ಹೊರಗಿನವರಿಗೆ ಮಣೆ ಹಾಕಿದೆ. ಆದರೆ ವಾಲ್ಮೀಕಿ ಸಮುದಾಯವರಿಗೆ ಟಿಕೆಟ್‌ ನೀಡಿ ಬಿಜೆಪಿ ಮುಖಂಡ ಶ್ರೀರಾಮುಲು ಅವರಿಗೆ ಟಾಂಗ್‌ ನೀಡಲು ಮುಂದಾಗಿದೆ.

ವಿಧಾನ ಪರಿಷತ್‌ ಸದಸ್ಯ ವಿ.ಎಸ್‌.ಉಗ್ರಪ್ಪ ಅವರಿಗೆ ಪಕ್ಷ ಟಿಕೆಟ್‌ ಘೋಷಿಸಿದೆ. ಎಸ್‌ಟಿ ಮೀಸಲು ಕ್ಷೇತ್ರಕ್ಕೆ 2009 ಮತ್ತು 2014ರಲ್ಲಿ ನಡೆದ ಎರಡು ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ ನೆರೆಯ ಚಿತ್ರದುರ್ಗ ಜಿಲ್ಲೆಯ ಹೈಕೋರ್ಟ್‌ ವಿಶ್ರಾಂತ ನ್ಯಾಯಮೂರ್ತಿ ಎನ್‌.ವೈ. ಹನುಮಂತಪ್ಪರನ್ನು ಕರೆತಂದು ಕಣಕ್ಕಿಳಿಸಿತ್ತು. 2009ರಲ್ಲಿ ಅಂದಿನ ಬಿಜೆಪಿ ಅಭ್ಯರ್ಥಿ ಜೆ.ಶಾಂತಾ ವಿರುದ್ಧ ಕೇವಲ 2243 ಮತಗಳ ಅಂತರದಿಂದ ಪರಾಭವಗೊಂಡಿದ್ದ ಎನ್‌.ವೈ. ಹನುಮಂತಪ್ಪ, 2014ರ ಚುನಾವಣೆಯಲ್ಲಿ ಬಿಜೆಪಿಯ ಬಿ.ಶ್ರೀರಾಮುಲು ವಿರುದ್ಧ 85, 144 ಮತಗಳ ಅಂತರದಿಂದ ಸೋತಿದ್ದರು. ಈ ಎರಡು ಚುನಾವಣೆಗಳಲ್ಲೂ  ಸ್ಥಳೀಯರು, ಹೊರಗಿನವರು ಎಂಬುದೇ ಬಿಜೆಪಿಯ ಪ್ರಮುಖ ಅಸ್ತ್ರವಾಗಿದ್ದು, ಗೆಲುವಿಗೂ ಕಾರಣವಾಗಿತ್ತು. ಈ ಬಾರಿಯೂ ಬಿಜೆಪಿ ಇದೇ ಅಸ್ತ್ರ  ಬಳಸುತ್ತಾ ಎಂಬ ಮಾತು ಕೇಳಿಬರುತ್ತಿದೆ.

ಇನ್ನು ಉಗ್ರಪ್ಪ ಅವರು, ಅಕ್ರಮ ಗಣಿಗಾರಿಕೆ ವಿರುದ್ಧ ಜಿಲ್ಲೆಯಲ್ಲಿ ಹೋರಾಟ ನಡೆಸಿದ್ದಾರೆ. ಅದರ ಬಗ್ಗೆ ಅಧ್ಯಯನ ನಡೆಸಿ, ಪುಸ್ತಕವನ್ನೂ ಬಿಡುಗಡೆಗೊಳಿಸಿದ್ದಾರೆ. ಎಲ್ಲದಕ್ಕೂ ಮುಖ್ಯವಾಗಿ ವಾಲ್ಮೀಕಿ ಸಮುದಾಯದ ಪ್ರಭಾವಿ ಮುಖಂಡರೂ ಹೌದು. ಇಷ್ಟೆಲ್ಲ ಇದ್ದರೂ, ಸ್ಥಳೀಯರಲ್ಲ ಎಂಬುದು ಅವರಿಗೆ ಮೈನಸ್‌ ಪಾಯಿಂಟ್‌. ಈ ಉಪಚುನಾವಣೆಯಲ್ಲಿ ಸ್ಪ ರ್ಧಿಸಲು ಟಿಕೆಟ್‌ಗಾಗಿ ಕಾಂಗ್ರೆಸ್‌ನ ಸ್ಥಳೀಯ ನಾಯಕರಲ್ಲೇ ಪೈಪೋಟಿ ಏರ್ಪಟ್ಟಿತ್ತು. ಅಂಥದ್ದರಲ್ಲಿ ಹೊರಗಿನವರನ್ನು ಕರೆತಂದು ಕಣಕ್ಕಿಳಿಸಿದರೆ ಪಕ್ಷದ ಸ್ಥಳೀಯ 6 ಶಾಸಕರು, ಮುಖಂಡರು ಎಷ್ಟರ ಮಟ್ಟಿಗೆ ಒಗ್ಗೂಡಿ ಗೆಲುವಿಗೆ ಶ್ರಮಿಸುತ್ತಾರೆ ಎಂಬುದು ಕಾದುನೋಡಬೇಕಾಗಿದೆ.

ಬಿಜೆಪಿ ಅಭ್ಯರ್ಥಿ  ಜೆ.ಶಾಂತಾ, ಮೂಲತಃ ಬಳ್ಳಾರಿಯವರು. ಅದಕ್ಕೂ ಮುಖ್ಯವಾಗಿ ವಾಲ್ಮೀಕಿ ಸಮುದಾಯದ ಪ್ರಭಾವಿ ಮುಖಂಡರಾದ ಶ್ರೀರಾಮುಲು ಅವರ ಸಹೋದರಿ. ಶ್ರೀರಾಮುಲು ತಮ್ಮ ಸಮುದಾಯದ ಜತೆಗೆ ಇತರೆ ಸಮುದಾಯಗಳ  ಬೆಂಬಲವನ್ನೂ ಪಡೆದು ಪ್ರತಿ ಚುನಾವಣೆಯಲ್ಲೂ ಅತ್ಯ ಧಿಕ ಮತಗಳಿಂದ ಜಯಗಳಿಸಿದ್ದಾರೆ. ಇದು ಶಾಂತಾ ಅವರಿಗೂ ಅನುಕೂಲವಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಬಳ್ಳಾರಿ ಲೋಕಸಭೆ ಕ್ಷೇತ್ರ 1952ರಿಂದ 1999 ಮತ್ತು 2000 ಉಪಚುನಾವಣೆ ತನಕ ಕಾಂಗ್ರೆಸ್‌ ಭದ್ರಕೋಟೆಯಾಗಿತ್ತು. 2004ರಲ್ಲಿ ಇದಕ್ಕೆ ಮೊದಲ ಬಾರಿಗೆ ಬ್ರೇಕ್‌ ಹಾಕಿದ ಬಿಜೆಪಿ ನಂತರ 2009, 2014 ಸೇರಿ ಒಟ್ಟು 3 ಚುನಾವಣೆಗಳಲ್ಲೂ ಗೆಲುವು ದಾಖಲಿಸಿತ್ತು. ಈ ಬಾರಿ ವಾಲ್ಮೀಕಿ ಸಮುದಾಯದ ಇಬ್ಬರು ಅಭ್ಯರ್ಥಿಗಳ ನಡುವಿನ  ಫೈಟ್‌ ಕುತೂಹಲ ಕೆರಳಿಸಿದೆ.

ಉತ್ತಮ ಸಂಸದೀಯ ಪಟು ಉಗ್ರಪ್ಪ ಅವರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಲಾಗಿದೆ. ಬಿಜೆಪಿಯ ಶ್ರೀರಾಮುಲು ಅವರ ಗಣಿ ಹಗರಣ ವಿರುದ್ಧ ಉಗ್ರಪ್ಪ  ಹೋರಾಟ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಮಾಜಕ್ಕೆ ಒಳ್ಳೆಯ ಸಂದೇಶ ರವಾನಿಸುವ ಸಲುವಾಗಿ ಹೈಕಮಾಂಡ್‌ ಅವರನ್ನು ಆಯ್ಕೆ ಮಾಡಿದೆ.
– ಬಿ.ವಿ.ಶಿವಯೋಗಿ, ಅಧ್ಯಕ್ಷರು ಕಾಂಗ್ರೆಸ್‌ ಜಿಲ್ಲಾ ಗ್ರಾಮೀಣ, ಬಳ್ಳಾರಿ

– ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.