Ballary: ತಹಶೀಲ್ದಾರ್ ಕಚೇರಿಯ ಕಂದಾಯ ನಿರೀಕ್ಷಕರ ಮನೆ-ಕಚೇರಿಯ ಮೇಲೆ ಲೋಕಾಯುಕ್ತ ದಾಳಿ
Team Udayavani, Oct 30, 2023, 3:25 PM IST
ಬಳ್ಳಾರಿ: ನಗರದ ತಹಶೀಲ್ದಾರ್ ಕಚೇರಿಯ ಕಂದಾಯ ನಿರೀಕ್ಷಕ ಮಂಜುನಾಥ್ ಅವರ ಮನೆ ಮತ್ತು ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಬಳ್ಳಾರಿ ನಗರದ ಗುಗ್ಗರಹಟ್ಟಿಯಲ್ಲಿರುವ ಮಂಜುನಾಥ್ ಮನೆ ಮತ್ತು ತಹಸೀಲ್ದಾರ್ ಕಚೇರಿಯಲ್ಲಿರುವ ಕಂದಾಯ ನಿರೀಕ್ಷಕರ ಕಚೇರಿಯ ಮೇಲೆ ದಾಳಿ ಮಾಡಿದ್ದಾರೆ. ಈ ಮೊದಲು ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲಿನಲ್ಲಿ ಆರ್ ಐ ಕೆಲಸ ಮಾಡುತ್ತಿದ್ದ ಮಂಜುನಾಥ್ ಅವರು, ಕಳೆದ ಕೆಲ ತಿಂಗಳಿಂದ ಬಳ್ಳಾರಿಯ ತಹಸೀಲ್ದಾರ್ ಕಚೇರಿಯಲ್ಲಿ ಕಂದಾಯ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಚಿಕ್ಕಬಳ್ಳಾಪುರ ಮತ್ತು ಬಳ್ಳಾರಿ, ಹೊಸಪೇಟೆ, ಅಧಿಕಾರಿಗಳಿಂದ ದಾಳಿ ನಡೆದಿದೆ. ಎಸ್ ಪಿ ಎಂ.ಎನ್. ಶಶಿಧರ್ ಮತ್ತು ಹೊಸಪೇಟೆ ಸಿಪಿಐ ಸುರೇಶ್ ಬಾಬು ನೇತೃತ್ವದಲ್ಲಿ ದಾಳಿ ನಡೆದಿದೆ. ಅಕ್ರಮ ಆಸ್ತಿಗಳಿಗೆ ಸಂಬಂಧಪಟ್ಟಂತೆ ಲೋಕಾಯುಕ್ತ ಅಧಿಕಾರಿಗಳು ಈ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ