Bellary; ಕಾಂಗ್ರೆಸ್ ಗ್ಯಾರಂಟಿ ಬಳಿಕ ಮೋದಿ ಗ್ಯಾರಂಟಿ ಬಂದಿದೆ: ಸಚಿವ ನಾಗೇಂದ್ರ ವಾಗ್ದಾಳಿ
Team Udayavani, Mar 11, 2024, 1:32 PM IST
ಬಳ್ಳಾರಿ: ಕಾಂಗ್ರೆಸ್ ಗ್ಯಾರಂಟಿ ಬಂದ ಬಳಿಕ ಮೋದಿ ಗ್ಯಾರಂಟಿ ಬಂದಿದೆ. ಕಾಂಗ್ರೆಸ್ ಗ್ಯಾರಂಟಿ ಟೀಕೆ ಮಾಡಿದವರು ಈಗ ಗ್ಯಾರಂಟಿ ಹೆಸರಿನಲ್ಲಿ ಚುನಾವಣೆಗೆ ಮುಂದಾಗಿದ್ದಾರೆ ಎಂದು ಸಚಿವ ನಾಗೇಂದ್ರ ವಾಗ್ದಾಳಿ ನಡೆಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚ ಗ್ಯಾರಂಟಿ ಯಶಸ್ವಿಯಾಗಿದೆ. ಕರ್ನಾಟಕದ ಗ್ಯಾರಂಟಿಯೇ ದೇಶದಲ್ಲಿ ಮಾಡೆಲ್ ಆಗಿದೆ. ಗ್ಯಾರಂಟಿಯೇ ರಾಜ್ಯದ 28 ಕ್ಷೇತ್ರದಲ್ಲಿ ಗೆಲ್ಲವಂತೆ ಮಾಡುವುದು ಗ್ಯಾರಂಟಿ. ಗೆಲ್ಲುವದೊಂದೇ ಮಾನದಂಡವನ್ನು ಇಟ್ಟುಕೊಂಡು ಟಿಕೆಟ್ ನೀಡಲಾಗುತ್ತಿದೆ ಎಂದರು.
ಸಚಿವರು ಸ್ಪರ್ಧೆ ಮಾಡುವ ವಿಚಾರ ಸಿಇಸಿ ಸಭೆಯಲ್ಲಿ ಚರ್ಚೆಯಾಗಿಲ್ಲ. ಸಿಇಸಿ ಸಭೆಯಲ್ಲಿ ತೀರ್ಮಾನ ಮಾಡಿ ಸಮರ್ಥಗೆ ಅಭ್ಯರ್ಥಿ ಟಿಕೆಟ್ ನೀಡುತ್ತಾರೆ. ರಾಜ್ಯದ ಮೇಲೆ ಕೇಂದ್ರ ನಾಯಕರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಬಳ್ಳಾರಿಯಲ್ಲಿ ನಮ್ಮ ಸಹೋದರ ಕೂಡ ಆಕಾಂಕ್ಷಿ. ಆದರೆ ಗೆಲ್ಲುವ ಅಭ್ಯರ್ಥಿಯೇ ಮಾನದಂಡ ಎಂದರು.
ಶ್ರೀರಾಮುಲು ಸೋಲುತ್ತಾರೆ ಎನ್ನುವ ಜನಾರ್ದನ ರೆಡ್ಡಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಜನಾರ್ದನ ರೆಡ್ಡಿ ಒಂದು ಪಕ್ಷದ ನಾಯಕ. ಅದು ಅವರ ಅಭಿಪ್ರಾಯ. ಆದರೆ ಬಳ್ಳಾರಿಯಲ್ಲಿ ಯಾರೆ ಅಭ್ಯರ್ಥಿಯಾದರೂ ಕಾಂಗ್ರೆಸ್ ಗೆಲ್ಲುವುದು ಗ್ಯಾರಂಟಿ.ಪಕ್ಷ ಹದಿನೈದು ದಿನಕ್ಕೊಮ್ಮೆ ಸರ್ವೇ ಮಾಡಿ ಟಿಕೆಟ್ ನೀಡುತ್ತಾರೆ. ಸೂರ್ಯಚಂದ್ರ ಇರುವುದು ಎಷ್ಟು ಸತ್ಯವೋ ಬಳ್ಳಾರಿಯಲ್ಲಿ ಕಾಂಗ್ರೆಸ್ ಗೆಲ್ಲುವುದು ಅಷ್ಟೇ ಸತ್ಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?