ನಿಯಮ ಉಲಂಘಿಸಿದ್ರೆ ಪ್ರಕರಣ ದಾಖಲು
Team Udayavani, Jun 25, 2020, 1:40 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬಳ್ಳಾರಿ: ಉದ್ದೇಶ ಪೂರ್ವಕವಾಗಿ ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘಿಸಿದ್ದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಎ.ಮಂಜುನಾಥ ತಿಳಿಸಿದ್ದಾರೆ.
ಕೋವಿಡ್-19 ಹರಡಿರುವ ವ್ಯಕ್ತಿಗಳು ಹಾಗೂ ಅವರ ಸಂಪರ್ಕ ಹೊಂದಿದ ವ್ಯಕ್ತಿಗಳನ್ನು ಹೋಂ ಕ್ವಾರಂಟೈನ್ ಹಾಗೂ ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇರಿಸಲಾಗಿದೆ. ಆ ವ್ಯಕ್ತಿಗಳು ಯಾವುದೇ ಕಾರಣಕ್ಕೂ ಕ್ವಾರಂಟೈನ್ ಪ್ರದೇಶದಿಂದ ಬೇರೆ ಕಡೆಗೆ ಚಲನವಲನ ಮಾಡುವುದಾಗಲಿ ಅಥವಾ ಮೊಬೈಲ್ಗಳನ್ನು ಸ್ವಿಚ್ಆಫ್ ಮಾಡಬಾರದು ಎಂದು ಅವರು ತಿಳಿಸಿದ್ದಾರೆ.
ವಿಪತ್ತು ನಿರ್ವಹಣಾ ಕಾಯ್ದೆ-2005 ಹಾಗೂ ಐಪಿಸಿ ಸೆಕ್ಷನ್ 188ರ ಅನ್ವಯ ಎಫ್ ಐಆರ್ ದಾಖಲಿಸಲಾಗುವುದು ಎಂದು ಸ್ಪಷ್ಟಪಡಿಸಿರುವ ಅವರು, ಸಾಂಕ್ರಮಿಕ ಪಿಡುಗಾದ ಕೋವಿಡ್ ತಡೆಗಟ್ಟಲು ಸರ್ಕಾರ ಕೋವಿಡ್-19 ಕ್ವಾರಂಟೈನ್ ಅಲರ್ಟ್ ಸಿಸ್ಟಮ್ ಪ್ರಾರಂಭಿಸಿದ್ದು, ಈ ವ್ಯವಸ್ಥೆಯಡಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಹೋಂ ಕ್ವಾರಂಟೈನ್ಗೆ ಕಳುಹಿಸಲಾಗಿರುತ್ತದೆ. ಈ ವ್ಯಕ್ತಿಗಳ ಮೊಬೈಲ್ ನಂಬರ್ ನೆಟ್ ವರ್ಕ್ ಆಧಾರದ ಮೇಲೆ ಕ್ವಾರಂಟೈನ್ನಿಂದ ಹೊರಗೆ ಬರದಂತೆ ನಿಗಾವಹಿಸಲು ಅವರ ಚಲನವಲನಗಳನ್ನು ಗಮನಿಸಲಾಗುತ್ತದೆ ಎಂದಿದ್ದಾರೆ.
ಒಂದು ವೇಳೆ ಕ್ವಾರಂಟೈನ್ ಮಾಡಲಾಗಿರುವ ವ್ಯಕ್ತಿಗಳು ತಮ್ಮ ಕ್ವಾರಂಟೈನ್ ಪ್ರದೇಶ ವ್ಯಾಪ್ತಿಯನ್ನು ಮೀರಿದ್ದಲ್ಲಿ ಹಾಗೂ ತಮ್ಮ ಮೊಬೈಲ್ ಸ್ವಿಚ್ಆಫ್ ಮಾಡಿದಲ್ಲಿ ಎಚ್ಚರಿಕೆ ಸಂದೇಶವು ರಾಜ್ಯ ಸಮೀಕ್ಷಾ ಘಟಕದ ಮೂಲಕ ಸಂಬಂಧಿಸಿದ ಜಿಲ್ಲಾಧಿಕಾರಿಗಳಿಗೆ ಬರುತ್ತದೆ ಎಂದು ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಕ್ವಾರಂಟೈನ್ ಉಲ್ಲಂಘಿ ಸಿದ ಹಾಗೂ ಮೊಬೈಲ್ ಸ್ವಿಚ್ ಆಫ್ ಮಾಡಿದ ವ್ಯಕ್ತಿಗಳನ್ನು ಗುರುತಿಸಿ ಕ್ವಾರಂಟೈನ್ ನಲ್ಲಿರುವಂತೆ ನಿಯಂತ್ರಿಸಲಾಗುತ್ತದೆ. ಆದರೂ ಸಹ ಕ್ವಾರಂಟೈನ್ ಇದ್ದವರು ಮನೆಯಿಂದ ಬೇರೆ ಕಡೆಗೆ ಚಲನ ವಲನ ಮಾಡುತ್ತಿರುವುದನ್ನು ಗಮನಿಸಿ ಅವರಿಗೆ ನೋಟಿಸನ್ನು ನೀಡಲಾಗುವುದು, ಇದೇ ರೀತಿ ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?