ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ
ಉತ್ತರಾಖಂಡ್ದಿಂದ ವಾಪಸ್ ಬಂದವರಿಗೆ ಮಾಡಬೇಕಿತ್ತು ಸಾಂಸ್ಥಿಕ ಕ್ವಾರಂಟೈನ್
Team Udayavani, May 10, 2020, 2:43 PM IST
ಬಳ್ಳಾರಿ: ಬೊಮ್ಮನಹಾಳ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜಿ.ಸೋಮಶೇಖರ ರೆಡ್ಡಿ ಭೂಮಿಪೂಜೆ ನೆರವೇರಿಸಿದರು
ಬಳ್ಳಾರಿ: ಕಳೆದ ಒಂದು ದಶಕದಿಂದ ಹದಗೆಟ್ಟಿದ್ದ ನಗರದ ಬೊಮ್ಮನಹಾಳ್ ರಸ್ತೆಗೆ ಕೊನೆಗೂ ಅಭಿವೃದ್ಧಿ ಭಾಗ್ಯ ಕೂಡಿ ಬಂದಿದ್ದು, ನಗರ ಶಾಸಕ ಜಿ.ಸೋಮಶೇಖರರೆಡ್ಡಿ ಗುರುವಾರ ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದ ಬೊಮ್ಮನಹಾಳ್ ರಸ್ತೆಯು ಹದಗೆಟ್ಟಿದ್ದು, ಕಳೆದ ಹನ್ನೊಂದು ವರ್ಷಗಳಿಂದ ರಸ್ತೆ ಅಭಿವೃದ್ಧಿ ಕಾರ್ಯ ನಡೆಯದೆ ನನೆ ಗುದಿಗೆ ಬಿದ್ದಿತ್ತು. ಇದೀಗ ಅಭಿವೃದ್ಧಿ ಭಾಗ್ಯ ಕೂಡಿಬಂದಿದ್ದು, ಭೂಮಿಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಕೊರೊನಾ ಭೀತಿ ಇದೆಯಾದರೂ, ಅಭಿವೃದ್ಧಿ ಕಾರ್ಯಕ್ಕೆ ಯಾವುದೇ ಕುಂಠಿತವಾಗಲ್ಲ ಎಂದರು.
ಪ್ರವಾಸಕ್ಕೆಂದು ಉತ್ತರಾಖಂಡ್ಗೆ ತೆರಳಿ ವಾಪಸ್ ಬಂದವರನ್ನು ಜಿಲ್ಲಾಡಳಿತ ಎಚ್ಚರಿಕೆ ವಹಿಸಿ ಹೋಂ ಕ್ವಾರಂಟೈನ್ ಮಾಡುವ ಬದಲು ಸಾಂಸ್ಥಿಕ ಕ್ವಾರಂಟೈನ್ ಮಾಡಬೇಕಿತ್ತು. ಉತ್ತರಾಖಂಡ್ದಿಂದ ವಾಪಸ್ಬಂದ 18 ಜನರ ಪೈಕಿ ಒಬ್ಬನಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಅಲ್ಲದೇ, ಉತ್ತರಾಖಂಡ್ನಿಂದ ಪ್ರವಾಸಿಗರನ್ನು ವಾಪಸ್ ಕರೆತರಲು ಸಹಕರಿಸಿದವರನ್ನು ಸಹ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿದೆ. ಶೀಘ್ರದಲ್ಲೇ ಬಳ್ಳರಿ ಜಿಲ್ಲೆ ಕೊರೊನಾ ಮುಕ್ತವಾಗುವ ಸಾಧ್ಯತೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೇ ವೇಳೆ ಹೊರ ದೇಶಗಳಲ್ಲಿದ್ದ ಭಾರತೀಯರನ್ನು ದೇಶಕ್ಕೆ ವಾಪಸ್ ಕರೆತಂದಂತೆ ಹೊರ ರಾಜ್ಯದಲ್ಲಿರುವವರನ್ನು ಸಹ ಕರೆತರುವ ಪ್ರಯತ್ನ ಮಾಡುತ್ತೇವೆ. ಸಿಎಂ ಯಡಿಯೂರಪ್ಪನವರು ಆ ಕೆಲಸ ಮಾಡುತ್ತಾರೆ ಎಂದವರು ತಿಳಿಸಿದರು. ಪಾಲಿಕೆ ಸದಸ್ಯ ಮೋತ್ಕರ್ ಶ್ರೀನಿವಾಸ್, ಮಲ್ಲನಗೌಡ, ಮಾಜಿ ಮೇಯರ್ ಇಬ್ರಾಹಿಂ ಬಾಬು ಸೇರಿದಂತೆ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು