ಭತ್ತ ಕಟಾವು ಮಾಡಲು ಬಿಡಿ ಸರ್‌

ನಮಗಾರಿಗೂ ರೋಗವಿಲ್ಲವಲಸೆ ನಿರಾಶ್ರಿತರ ಕೇಂದ್ರದ ಕಾರ್ಮಿಕರ ಅಳಲು

Team Udayavani, Apr 13, 2020, 4:19 PM IST

13-April-25

ಬಳ್ಳಾರಿ: ಎಸ್‌ಸಿ-ಎಸ್‌ಟಿ ವಸತಿ ನಿಲಯದಲ್ಲಿ ಜಿಲ್ಲಾಡಳಿತ ವ್ಯವಸ್ಥೆ ಮಾಡಿರುವ ತಾತ್ಕಾಲಿಕ ವಲಸೆ ನಿರಾಶ್ರಿತರ ಕೇಂದ್ರದಲ್ಲಿರುವ ಕೂಲಿ ಕಾರ್ಮಿಕರು.

ಬಳ್ಳಾರಿ: ನಮ್ಮನ್ನು ಬಿಟ್ಟುಬಿಡಿ ಸರ್‌… ಹೊಲದಲ್ಲಿ ಭತ್ತ ಬೆಳೆದು ನಿಂತಿದೆ…. ಕಟಾವು ಮಾಡಬೇಕು… ಮೊದಲೇ ಕೃಷಿ ಕಾರ್ಮಿಕರು ಸಿಗುತ್ತಿಲ್ಲ… ಈಚೆಗೆ ಮಳೆ ಬಂದು ಬೇರೆ ಅವಾಂತರ ಸೃಷ್ಟಿಸಿದೆ…. ಮೇಲಾಗಿ ನಮಗ್ಯಾರಿಗೂ ರೋಗದ ಲಕ್ಷಣಗಳಿಲ್ಲ ಎಂದೂ ದೃಢಪಟ್ಟಿದೆ…! ನಗರದ ಎಸ್‌ಸಿ, ಎಸ್‌ಟಿ ವಸತಿ ನಿಲಯದಲ್ಲಿ ಜಿಲ್ಲಾಡಳಿತ ವ್ಯವಸ್ಥೆ ಮಾಡಿರುವ ತಾತ್ಕಾಲಿಕ ವಲಸೆ ನಿರಾಶ್ರಿತರ ಕೇಂದ್ರದಲ್ಲಿ ಕಳೆದ 14 ದಿನಗಳಿಂದ ಕೂಡಿಹಾಕಿರುವ 44 ಕೂಲಿಕಾರ್ಮಿಕರು ತೋಡಿಕೊಳ್ಳುತ್ತಿರುವ ಅಳಲಿದು.

ನೆರೆಯ ರಾಯಚೂರು ಜಿಲ್ಲೆ ಸಿಂಧನೂರು, ಮಾನ್ವಿ, ಮಸ್ಕಿ, ಲಿಂಗಸೂಗೂರು, ದೇವದುರ್ಗ ತಾಲೂಕುಗಳ ವಿವಿಧ ಗ್ರಾಮಗಳಿಂದ ದುಡಿಯಲೆಂದು ಬೆಂಗಳೂರಿಗೆ ಹೋದ ಕೂಲಿಗಳು ಲಾಕ್‌ ಡೌನ್‌ನಿಂದಾಗಿ ವಾಪಸ್ಸಾಗಿದ್ದಾರೆ. ಟ್ರ್ಯಾಕ್ಟರ್‌ನಲ್ಲಿ ಬೆಂಗಳೂರಿನಿಂದ ಹಲವು ಚೆಕ್‌ಪೋಸ್ಟ್‌ಗಳನ್ನು ದಾಟಿ ಬಂದಿದ್ದ ಇವರನ್ನು ಬಳ್ಳಾರಿಯಲ್ಲಿ ಜಿಲ್ಲಾಡಳಿತ ವಶಕ್ಕೆ ಪಡೆದು ನಗರದ ಎಸ್‌ಸಿ, ಎಸ್‌ಟಿ ನಿಲಯದಲ್ಲಿ ವ್ಯವಸ್ಥೆ ಮಾಡಿರುವ ತಾತ್ಕಾಲಿಕ ಕೇಂದ್ರದಲ್ಲಿ ಇರಿಸಿದೆ.

ಕಳೆದ 14 ದಿನಗಳಿಂದ ನಿರಾಶ್ರಿತರ ಕೇಂದ್ರದಲ್ಲಿರುವ ಇವರಿಗೆ ಜಿಲ್ಲಾಡಳಿತ ದಿನಕ್ಕೆ ಮೂರು ಹೊತ್ತು ಬೆಳಗ್ಗೆ ಉಪಾಹಾರ, ಮಧ್ಯಾಹ್ನ, ರಾತ್ರಿ ಊಟದ ವ್ಯವಸ್ಥೆ ಮಾಡಿದೆ. ಒಟ್ಟು 44 ಜನರ ಪೈಕಿ 26 ಪುರುಷರು, 18 ಮಹಿಳೆಯರನ್ನು ಪ್ರತ್ಯೇಕವಾಗಿ ಇರಿಸಲಾಗಿದ್ದು, ಸೂಕ್ತ ಭದ್ರತೆಯನ್ನೂ ಒದಗಿಸಿದೆ. ಜತೆಗೆ ಕೇಂದ್ರದಲ್ಲಿರುವ ಎಲ್ಲರ ಆರೋಗ್ಯವನ್ನೂ ಪರೀಕ್ಷಿಸಲಾಗಿದ್ದು, ಯಾರಲ್ಲೂ ರೋಗದ ಲಕ್ಷಣಗಳಿಲ್ಲ ಎಂದು ದೃಢಪಟ್ಟಿದೆ. ಆದರೂ, ನಮ್ಮನ್ನು ತಾತ್ಕಾಲಿಕ ವಲಸೆ ನಿರಾಶ್ರಿತರ ಕೇಂದ್ರದಲ್ಲಿ ಉಳಿಸಿದ್ದಾರೆ. ಏ.14ರ ನಂತರ ಬಿಡುವುದಾಗಿ ಅಧಿಕಾರಿಗಳು ತಿಳಿಸಿದ್ದರಾದರೂ, ಲಾಕ್‌ ಡೌನ್‌ ಅವಧಿಯನ್ನು ತಿಂಗಳ ಕೊನೆವರೆಗೆ ಮುಂದುವರೆಸಿದ್ದರಿಂದ ನಮ್ಮನ್ನು ಊರಿಗೆ ಕಳುಹಿಸುತ್ತಾರೋ ಇಲ್ಲ ಎಂಬ ಆತಂಕ ಕಾಡುತ್ತಿದೆ ಎಂದು ರಾಮಣ್ಣ ಬೇಸರ ವ್ಯಕ್ತಪಡಿಸುತ್ತಾರೆ.

ಭತ್ತ ಕಟಾವು ಮಾಡಬೇಕು: ನೆರೆಯ ಸಿಂಧನೂರಿನಲ್ಲಿ 6 ಎಕರೆಯಲ್ಲಿ ಭತ್ತ ಬೆಳೆದಿದ್ದು, ಕಟಾವು ಮಾಡಬೇಕಾಗಿದೆ. ಮನೆಯಲ್ಲಿ ವಯಸ್ಸಾದ ಅಪ್ಪ-ಅಮ್ಮ ಮಾತ್ರ ಇದ್ದಾರೆ. ಮಳೆಯಿಂದಾಗಿ ಕಟಾವಿಗೆ ಬಂದಿದ್ದ ಭತ್ತ ನೆಲಕ್ಕೆ ಬಾಗಿದೆ. ಹೊಲದಲ್ಲಿ ಸಾಕಷ್ಟು ಕೆಲಸವಿದೆ. ಹಾಗಾಗಿ ನಮ್ಮನ್ನು ಬಿಟ್ಟರೆ ಭತ್ತ ಕಟಾವಿಗೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಶಿವನಗೌಡ, ದುರುಗಣ್ಣ ಅಧಿಕಾರಿಗಳಲ್ಲಿ ಅಂಗಾಲಾಚಿದರು.

ರೋಗದ ಲಕ್ಷಣಗಳಿಲ್ಲ: ತಾತ್ಕಾಲಿಕ ವಸತೆ ನಿರಾಶ್ರಿತರ ಕೇಂದ್ರದಲ್ಲಿರುವ ಕಾರ್ಮಿಕರನ್ನು ಈಗಾಗಲೇ ಎರಡು ಬಾರಿ ಆರೋಗ್ಯ ತಪಾಸಣೆ ಮಾಡಲಾಗಿದೆ. ಯಾವುದೇ ರೋಗದ ಲಕ್ಷಣಗಳಿಲ್ಲ ಎಂದು ಬಂದಿದೆ. ಜತೆಗೆ ಕೇಂದ್ರಕ್ಕೆ ಬಂದು ನಾಳೆಗೆ 14 ದಿನಗಳು ಮುಗಿಯುತ್ತವೆ. ಈ ಅವಧಿಯಲ್ಲಿ ಕೇಂದ್ರದಲ್ಲಿರುವ ಯಾರಿಗೂ ಯಾವುದೇ ಕಾಯಿಲೆಗಳು ಕಾಣಿಸಿಕೊಂಡಿಲ್ಲ. ಆದರೂ, ನಮ್ಮನ್ನು ಇಲ್ಲಿಂದ ಕಳುಹಿಸುತ್ತಿಲ್ಲ. ಅಧಿಕಾರಿಗಳು ನಮ್ಮನ್ನು ಬಿಟ್ಟರೆ, ನಮ್ಮದೇ ಟ್ರ್ಯಾಕ್ಟರ್‌ನಲ್ಲಿ ನಮ್ಮೂರಿಗೆ ತೆರಳುತ್ತೇವೆ ಅವರು ಮನವಿ ಮಾಡಿದ್ದಾರೆ.

ಡ್ರೆಸ್ಸಿಂಗ್‌ ಮಾಡಬೇಕು: ತಾತ್ಕಾಲಿಕ ವಲಸೆ ನಿರಾಶ್ರಿತರ ಕೇಂದ್ರದಲ್ಲಿರುವ ಕೂಲಿ ಕಾರ್ಮಿಕರಲ್ಲಿ ಗಂಗಾವತಿ ಶಿವಣ್ಣ ಎನ್ನುವವರು ಕಾಲಿಗೆ ಗಂಭೀರ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಪ್ರತಿ 2 ದಿನಕ್ಕೊಮ್ಮೆ ಗಾಯಕ್ಕೆ ಔಷಧ ಹಚ್ಚಿ, ಬ್ಯಾಂಡೇಜ್‌ ಬದಲಾಯಿಸಬೇಕು. ಕೇಂದ್ರದಲ್ಲಿ ಇರುವುದರಿಂದ ಅದು ಸಾಧ್ಯವಾಗುತ್ತಿಲ್ಲ. ಅಧಿಕಾರಿಗಳನ್ನು ಕಾಡಿ ಬೇಡಿದ ಹಿನ್ನೆಲೆಯಲ್ಲಿ ಈಚೆಗೆ ವಿಮ್ಸ್ ನಲ್ಲಿ ಬದಲಾಯಿಸಿಕೊಂಡು ಬರಲಾಗಿದೆ. ಅಲ್ಲದೇ, ವಾಸಿಯಾಗಿದ್ದ ಗಾಯ, ಕೇಂದ್ರದಲ್ಲಿ ನೀಡುವ ಕೇವಲ ಅನ್ನವನ್ನು ತಿಂದು ಪುನಃ ನೊವು ಕಾಣಿಸಿಕೊಳ್ಳುತ್ತಿದೆ. ಆದ್ದರಿಂದ ನಮ್ಮನ್ನು ಬಿಟ್ಟರೆ ನಾವು ಹೋಗುತ್ತೇವೆ ಎಂದು ಅವರು ಅಳಲು ತೋಡಿಕೊಳ್ಳುತ್ತಿದ್ದಾರೆ. ಆದರೆ, ಏ.14ರ ನಂತರ ಇವರಿಗೆ ಕೇಂದ್ರದಿಂದ ಮುಕ್ತಿ ದೊರೆಯುತ್ತೋ ಅಥವಾ ಮುಂದುವರೆಯುತ್ತೋ ಎಂಬುದಕ್ಕೆ ಜಿಲ್ಲಾಡಳಿತವೇ ಸ್ಪಷ್ಟನೆ ನೀಡಬೇಕಾಗಿದೆ.

ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.