Bellary; ಎತ್ತಿನ ಬಂಡಿಗೆ ಬೈಕ್ ಡಿಕ್ಕಿ: ಮೂವರು ಸಾವು
ಇಬ್ಬರಿಗೆ ಗಾಯ, ಹೊಸ ದರೋಜಿ ಬಳಿ ನಡೆದ ಘಟನೆ
Team Udayavani, Feb 26, 2024, 10:19 PM IST
ಬಳ್ಳಾರಿ: ನಿಂತ ಎತ್ತಿನ ಬಂಡಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ, ಇಬ್ಬರು ಮಕ್ಕಳು ಮೃತ ಪಟ್ಟಿರುವ ಘಟನೆ ಜಿಲ್ಲೆಯ ಹೊಸ ದರೋಜಿ ಸಮೀಪ ನಡೆದಿದೆ.
ಮೃತನು ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಜಂಬುನಾಥ ಹಳ್ಳಿಯ ವೆಂಕಟೇಶ್(45), ಆಶಾ(8), ಅಖಿಲಾ(6) ಮೃತ ಪಟ್ಟಿದ್ದಾರೆ. ಜಂಬಕ್ಕ ಮತ್ತು ಸರಸ್ವತಿ ಗಾಯಗೊಂಡಿದ್ದಾರೆ.
ಜಂಬಕ್ಕ ಅವರು ತಮ್ಮ ಮಕ್ಕಳಾದ ಸರಸ್ವತಿ, ಆಶಾ ಮತ್ತು ಅಖಿಲಾಳೊಂದಿಗೆ ತಮ್ಮ ತವರೂರು ಆಂಧ್ರದ ಅರಿಕೇರಿಗೆ ಹೋಗಿ ಉಡಿತುಂಬಿಕೊಂಡು ಗಂಡನಮನೆ ಜಂಬುನಾಥನ ಹಳ್ಳಿಗೆ ಬಳ್ಳಾರಿವರೆಗೆ ಬಸ್ಸಿನಲ್ಲಿ ಬಂದಿದ್ದಾರೆ. ಜಂಬುನಾಥ ಹಳ್ಳಿಯ ಗ್ರಾಮದ ವೆಂಕಟೇಶ್ ಅವರು ಬಳ್ಳಾರಿಯಿಂದ ಬೈಕ್ ನಲ್ಲಿ ಊರಿಗೆ ಹೋಗುತ್ತಿದ್ದಾನೆ. ಇವರಿಗೆ ಊರಿಗೆ ಬಿಡುವುದಾಗಿ ಕರೆದುಕೊಂಡು ಹೋಗಿದ್ದಾನೆ.
ಬೈಕ್ ನಿಂತ ಎತ್ತಿನ ಬಂಡಿಗೆ ಡಿಕ್ಕಿ ಹೊಡೆದಿದ್ದರಿಂದ ಮೂವರು ಮೃತ ಪಟ್ಟಿದ್ದಾರೆ. ಜಂಬಕ್ಕ ಮತ್ತು ಸರಸ್ವತಿಗೆ ಗಾಯಗಳಾಗಿದ್ದು ವಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಕುಡತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ