ಮಾಸ್ಕ್ ಇಲ್ಲದೆ ಸಂಚಾರ; ದಂಡ ವಸೂಲಿ

ಲಾಕ್‌ಡೌನ್‌ ಎಫೆಕ್ಟ್: ಪಾಲಿಕೆಯಿಂದ 10 ದಿನಗಳಲ್ಲಿ ಲಕ್ಷ ರೂ. ಸಂಗ್ರಹ

Team Udayavani, May 15, 2020, 5:20 PM IST

15-May-17

ಸಾಂದರ್ಭಿಕ ಚಿತ್ರ

ಬಳ್ಳಾರಿ: ಕೋವಿಡ್ ವೈರಸ್‌ ತಡೆಯುವ ಸಲುವಾಗಿ ರಾಜ್ಯ ಸರ್ಕಾರದ ಆದೇಶದಂತೆ ಬಳ್ಳಾರಿ ಮಹಾನಗರ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದೆ ಹೊರಗಡೆ ಸಂಚರಿಸುತ್ತಿರುವವರಿಂದ ಪಾಲಿಕೆ ಸಂಗ್ರಹಿಸಿದ ದಂಡದ ಮೊತ್ತ 10 ದಿನಗಳಲ್ಲಿ ಬರೋಬ್ಬರಿ 1.26 ಲಕ್ಷ ರೂ.ಗಳಾಗಿವೆ.

ಹೌದು…! ಕೋವಿಡ್ ತಡೆಗೆ ಕೇಂದ್ರ ಸರ್ಕಾರ ಘೋಷಿಸಿದ ಲಾಕ್‌ಡೌನ್‌-3 ಅನ್ವಯ ಮನೆಯಿಂದ ಅಗತ್ಯ ಕೆಲಸಕ್ಕೆ ಹೊರಬರುವ ಪ್ರತಿಯೊಬ್ಬರು ಮಾಸ್ಕ್ ಧರಿಸಬೇಕು. ಒಂದು ವೇಳೆ ಮಾಸ್ಕ್ ಧರಿಸದೇ ಇದ್ದರೆ ಅವರಿಗೆ ದಂಡ ವಿಧಿಸಲಾಗುತ್ತದೆ. 100 ರೂ.ನಿಂದ 200 ರೂ.ವರೆಗೆ ದಂಡ ವಿಧಿಸಲು ಅವಕಾಶ ಇದೆ. ಸಾರ್ವಜನಿಕರು ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವುದನ್ನು ಮನದಟ್ಟು ಮಾಡಿಕೊಳ್ಳಲು ರಸ್ತೆಗೆ ಇಳಿದ ಮಹಾನಗರ ಪಾಲಿಕೆ ಅಧಿಕಾರಿಗಳು ಕಳೆದ 10 ದಿನಗಳಿಂದ ವಸೂಲಿ ಮಾಡಿದ ದಂಡದ ಮೊತ್ತ ಒಂದು ಲಕ್ಷ ರೂ. ದಾಟಿದೆ.

ಮೇ 14ರ ಅಂತ್ಯಕ್ಕೆ ಪಾಲಿಕೆ ಪರಿಸರ ವಿಭಾಗದ ಅಧಿಕಾರಿಗಳು ಒಟ್ಟಾರೆ 1,21,600 ರೂ. ದಂಡವನ್ನು ಸಾರ್ವಜನಿಕರಿಗೆ ವಿಧಿಸಿದ್ದಾರೆ. ಒಟ್ಟಾರೆ 1216 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಮಾಸ್ಕ್ ಹಾಕಿಕೊಳ್ಳದೇ ಓಡಾಡುವವರಿಗೆ ಜಾಗೃತಿ ಮೂಡಿಸುತ್ತಿರುವ ಪಾಲಿಕೆ ಅಧಿಕಾರಿಗಳು ಜೊತೆ ಜೊತೆಗೆ ದಂಡ ಸಹ ವಿಧಿಸುವ ಮೂಲಕ ಮತ್ತೂಮ್ಮೆ ಈ ರೀತಿ ತಪ್ಪು ಮಾಡದಂತೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.

ಕೋವಿಡ್ ಎಂಬ ಮಹಾಮಾರಿ ಅತಿ ವೇಗವಾಗಿ ಹರಡುತ್ತದೆ. ಇದು ಮನುಷ್ಯನ ಗಂಟಲು, ಶ್ವಾಸಕೋಶವನ್ನು ತನ್ನ ಆಶ್ರಯ ತಾಣ ಮಾಡಿಕೊಳ್ಳುತ್ತದೆ. ಸಾಮಾನ್ಯವಾಗಿ ಮನುಷ್ಯರಿಂದ ಮನುಷ್ಯರಿಗೆ ಹರಡುವ ಈ ವೈರಸ್‌ ಕೈ ಮೂಲಕ ನೇರ ಮೂಗು, ಬಾಯಿ ತಲುಪುವ ಪ್ರಮಾಣ ಹೆಚ್ಚಿದೆ. ಇದೇ ಕಾರಣಕ್ಕೆ ಮಾಸ್ಕ್ ಧರಿಸುವುದು ಅತ್ಯಾವಶ್ಯವಾಗಿರುತ್ತದೆ. ಇದನ್ನೇ ಜನರಿಗೆ ತಿಳಿಹೇಳುವ ಪಾಲಿಕೆ ಅಧಿಕಾರಿಗಳು ಬಡವರು, ಕೂಲಿ ಕಾರ್ಮಿಕರು, ಗ್ರಾಮೀಣ ಭಾಗದ ಜನರಿಗೆ ಉಚಿತ ಮಾಸ್ಕ್ ಸಹ ಹಂಚುತ್ತಿರುವುದು ವಿಶೇಷ.

ಮೇ 7 ರಂದು ಒಂದೇ ದಿನ 16,100 ರೂ. ದಂಡ ವಸೂಲಾತಿ ಆಗಿವುದು ದೊಡ್ಡ ಮೊತ್ತವಾದರೆ ಪ್ರತಿದಿನ ಸರಾಸರಿ 10 ಸಾವಿರ ರೂ. ದಂಡ ವಸೂಲಾಗಿದೆ. ನಗರದ ಪ್ರಮುಖ ವೃತ್ತ, ಅತ್ಯಂತ ಜನನಿಬಿಡ ಪ್ರದೇಶದಲ್ಲಿ ಠಿಕಾಣಿ ಹೂಡುವ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಬೆಳಗ್ಗೆ 10 ರಿಂದ ಸಂಜೆ ತನಕ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.

ಟಾಪ್ ನ್ಯೂಸ್

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.