ಬಳ್ಳಾರಿ: ಆಫ್ರಿಕಾದಿಂದ ಬಂದ ಇಬ್ಬರು ಕ್ವಾರಂಟೈನ್ ಗೆ: ಡಾ. ಜನಾರ್ಧನ್
Team Udayavani, Nov 30, 2021, 11:31 AM IST
ಬಳ್ಳಾರಿ: ನೆರೆಯ ವಿಜಯನಗರ ಜಿಲ್ಲೆಯ ಹೊಸಪೇಟೆ ನಗರಕ್ಕೆ ಆಫ್ರಿಕಾದಿಂದ ಇಬ್ಬರು ಬಂದಿದ್ದು, ಅವರ ರಕ್ತದ ಮಾದರಿಯನ್ನು ಪರೀಕ್ಷಿಸಿ ಕ್ವಾರಂಟೈನ್ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಎಲ್. ಜನಾರ್ಧನ್ ಹೇಳಿದರು.
ಆಫ್ರಿಕಾದಲ್ಲಿ ಪತ್ತೆಯಾಗಿರುವ ಒಮೈಕ್ರಾನ್ ಸೋಂಕು ಎಲ್ಲೆಡೆ ಆತಂಕ ಮೂಡಿಸುತ್ತಿದೆ. ದಕ್ಷಿಣಾಫ್ರಿಕಾ, ಆಸ್ಟ್ರೇಲಿಯಾ, ಹಾಂಕಾಂಗ್ ಸೇರಿ ವಿಶ್ವದ ಒಟ್ಟು 13 ದೇಶಗಳಲ್ಲಿ ಒಮೈಕ್ರಾನ್ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲೂ ತೀವ್ರ ನಿಗಾ ವಹಿಸಲಾಗುತ್ತಿದೆ. ಆಫ್ರಿಕಾ ದೇಶಕ್ಕೆ ಕೆಲಸದ ನಿಮಿತ್ತ ಹೋಗಿದ್ದ ಇಬ್ಬರು ವ್ಯಕ್ತಿಗಳು ವಿಮಾನದಲ್ಲಿ ಮುಂಬೈಗೆ ಆಗಮಿಸಿ ಅಲ್ಲಿಂದ ಖಾಸಗಿ ವಾಹನದಲ್ಲಿ ಹೊಸಪೇಟೆಗೆ ಬಂದಿದ್ದು, ಮಾಹಿತಿ ಪಡೆದು ಕೂಡಲೇ ಅವರಿಗೆ ತಪಾಸಣೆ ಮಾಡಲಾಗಿದೆ. ಆರ್ ಟಿಪಿಸಿಆರ್ ಪಡೆದು ಪರೀಕ್ಷೆಗೆ ಒಳಪಡಿಸಲಾಗಿದ್ದು, ನೆಗೆಟಿವ್ ಬಂದಿದೆ. ಆದರೂ, ಇಬ್ಬರನ್ನು ಕ್ವಾರೈಂಟೈನ್ ಮಾಡಲಾಗಿದೆ. ಏಳು ದಿನಗಳ ನಂತರ ಮತ್ತೊಮ್ಮೆ ಪರೀಕ್ಷಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು. ರಾಜ್ಯ ಸರ್ಕಾದರಿಂದಲೂ ಯಾವುದೇ ಮಾರ್ಗಸೂಚಿಗಳು ಬಂದಿಲ್ಲ. ಮೇಲಾಗಿ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.
ಡಾ. ಇಂದ್ರಾಣಿ, ಮಕ್ಕಳ ರಕ್ಷಣಾಧಿಕಾರಿ ರಾಜಾನಾಯ್ಕ್, ಸೇರಿ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು
ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು
Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು
Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು
Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ