ವೇಮನರ ವಿಚಾರಧಾರೆ-ತತ್ವಾದರ್ಶ ಅಳವಡಿಸಿಕೊಳ್ಳಿ

ವೇಮನರ ವಚನಗಳು ಇಡೀ ಮನುಕುಲಕ್ಕೆಕೈಗನ್ನಡಿ: ರೆಡ್ಡಿ

Team Udayavani, Jan 20, 2020, 12:50 PM IST

20-January-23

ಬಳ್ಳಾರಿ: ತೆಲುಗಿನ ಸರ್ವಜ್ಞನೆಂದು ಖ್ಯಾತಿ ಪಡೆದಿರುವ ಮಹಾಯೋಗಿ ವೇಮನ ಅವರ ವಿಚಾರಧಾರೆ, ತತ್ವಾದರ್ಶಗಳು ಹಾಗೂ ಅವರ ಜೀವನಶೈಲಿಯೂ ಇಂದಿಗೂ ಅಮರವಾಗಿವೆ. ಅವರ ತತ್ವಾದರ್ಶಗಳನ್ನು ಯುವಕರು ಪಾಲನೆ ಮಾಡಬೇಕು ಎಂದು ನಗರ ಶಾಸಕ ಜಿ. ಸೋಮಶೇಖ ರೆಡ್ಡಿ ಹೇಳಿದರು.

ನಗರದ ಡಾ| ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಸಹಯೋಗದಲ್ಲಿ ಭಾನುವಾರ ನಡೆದ ಮಹಾಯೋಗಿ ವೇಮನ ಜಯಂತಿ ಉದ್ಘಾಟಿಸಿ ಮಾತನಾಡಿದರು.

ಕನ್ನಡದ ಸರ್ವಜ್ಞ, ತಮಿಳಿನ ತಿರುವಳ್ಳರ್‌ ಹಾಗೆಯೇ ತೆಲುಗಿನ ವೇಮನಂತಹ ದಾರ್ಶನಿಕರ ವಚನಗಳು ಇಡೀ ಮನುಕುಲಕ್ಕೆ ಕೈಗನ್ನಡಿಯಾಗಿವೆ. ಹಾಗಾಗಿ ಅವರ ಆದರ್ಶಗಳು ಇಂದಿನ ಯುವಕರು, ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇಂಥ ಮಹನೀಯರ ಜಯಂತಿಗಳು ಕೇವಲ ಜಯಂತಿಗಳಿಗಷ್ಟೇ ಸೀಮಿತವಾಗದೆ, ಅವರ ಮಾನವೀಯ ಮೌಲ್ಯಗಳು ಹಾಗೂ ಸಾಮರಸ್ಯ ಉಂಟು ಮಾಡುವ ನಿಟ್ಟಿನಲ್ಲಿ ಆಚರಣೆಗಳು ಅವಶ್ಯಕವಾಗಿರುತ್ತವೆ. ಯುವಕರು ಕೂಡ ಗುಣಮಟ್ಟದ ಶಿಕ್ಷಣ ಪಡೆದು ಇಂಥ ದಾರ್ಶನಿಕರ ಆದರ್ಶಗಳನ್ನು ಮುಂದಿಟ್ಟುಕೊಂಡು ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಅವರು ಹೇಳಿದರು.

ಸಹಾಯಕ ಆಯುಕ್ತ ರಮೇಶ ಕೋನರೆಡ್ಡಿ ಮಾತನಾಡಿದರು. ಸಿರುಗುಪ್ಪ ತಾಲೂಕಿನ ಪ್ರೌಢಶಾಲಾ ಶಿಕ್ಷಕ ಬಿ.ವಿಜಯರಂಗಾರೆಡ್ಡಿ ವಿಶೇಷ ಉಪನ್ಯಾಸ ನೀಡಿದರು. ಕೆ.ದೊಡ್ಡಬಸಪ್ಪ ಅವರು ವೇಮನ ಪದ್ಯಗಳ ಗಾಯನ ಪ್ರಸ್ತುತಪಡಿಸಿದರು.

ಅದ್ಧೂರಿ ಮೆರವಣಿಗೆ: ಮಹಾಯೋಗಿ ವೇಮನ ಜಯಂತಿ ನಿಮಿತ್ತ ನಗರದ ಮುನಿಸಿಪಲ್‌ ಕಾಲೇಜು ಮೈದಾನದಲ್ಲಿ ಮಹಾಯೋಗಿ ವೇಮನ ಅವರ ಭಾವಚಿತ್ರದ ಮೆರವಣಿಗೆಗೆ ನಗರ ಶಾಸಕರಾದ ಸೋಮಶೇಖರೆಡ್ಡಿ ಚಾಲನೆ ನೀಡಿದರು. ಮೆರವಣಿಗೆಯು ಮುನ್ಸಿಪಲ್‌ ಕಾಲೇಜು ಮೈದಾನದಿಂದ ಪ್ರಾರಂಭವಾಗಿ ಗಡಗಿ ಚೆನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ಹಳೇ ಬ್ರೂಸ್‌ಪೇಟೆ ಪೊಲೀಸ್‌ ಠಾಣೆ, ಹೆಚ್‌. ಆರ್‌.ಗವಿಯಪ್ಪ ವೃತ್ತ ಮಾರ್ಗವಾಗಿ ಡಾ| ಜೋಳದರಾಶಿ ದೊಡ್ಡನಗೌಡ ರಂಗಮಂದಿರಕ್ಕೆ ತಲುಪಿತು.

ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ನೃತ್ಯ ಕಲಾ ಪ್ರಕಾರ ತಂಡಗಳು, ವೀರಗಾಸೆ ಹಾಗೂ ಹಲವು ಜಾನಪದ ಕಲಾತಂಡಗಳು ಭಾಗವಹಿಸಿ ಮೆರವಣಿಗೆಯನ್ನು ಆಕರ್ಷಕಗೊಳಿಸಿದವು. ಈ ವೇಳೆ ಸಮುದಾಯದ ಮುಖಂಡರುಗಳಾದ ಕೋಟೇಶ್ವರ ರೆಡ್ಡಿ, ನಾರಾ ಪ್ರತಾಪ್‌ ರೆಡ್ಡಿ, ಐನಾತರೆಡ್ಡಿ, ಬಸವರಾಜ ರೆಡ್ಡಿ, ಹೇಮಚಂದ್ರ ರೆಡ್ಡಿ, ಡಾ| ಮಹಿಪಾಲ್‌ ರೆಡ್ಡಿ, ಲೇಪಾಕ್ಷಿ ಸೇರಿದಂತೆ ಸಮಾಜದ ಮುಖಂಡರು ಇತರರು ಇದ್ದರು.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.