ಕುಡಿವ ನೀರು ಯೋಜನೆಯಡಿ ತಪ್ಪೆಸಗಿದರೆ ಸೂಕ್ತ ಕ್ರಮ
ನೆಲ್ಲುಡಿ ಬಹುಗ್ರಾಮ ಕುಡಿವ ನೀರು ಸರಬರಾಜು ಯೋಜನೆ ಪೂರ್ಣಗೊಳಿಸಲು ಕ್ರಮ
Team Udayavani, Mar 2, 2020, 5:07 PM IST
ಬಳ್ಳಾರಿ: ತಾಲೂಕಿನ ನೆಲ್ಲುಡಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ವಿಷಯದಲ್ಲಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು. ಇದಕ್ಕೆ ಸಂಬಂಧಿಸಿದ ಸಮಗ್ರ ವರದಿಯನ್ನು ಸಲ್ಲಿಸುವಂತೆ ಜಿಪಂ ಸಿಇಒಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಸೂಚಿಸಿದರು.
ನಗರದ ಜಿಪಂ ಸಭಾಂಗಣದಲ್ಲಿ ಶನಿವಾರ ರಾತ್ರಿ ನಡೆದ ಗ್ರಾಮೀಣ ಕುಡಿಯುವ ನೀರು ಸರಬರಾಜು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನೆಲ್ಲುಡಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಪೂರ್ಣಗೊಳಿಸುವ ನಿಟ್ಟಿನಲ್ಲಿ ಖರ್ಚು ವೆಚ್ಚ ಕುರಿತ ವಿವರವಾದ ವರದಿ ಸಲ್ಲಿಸಿ, ಪರಿಶೀಲಿಸಿ ಶೀಘ್ರ ಈ ಸಮಸ್ಯೆ ಇತ್ಯರ್ಥಕ್ಕೆ ಪ್ರಯತ್ನಿಸಲಾಗುವುದು ಎಂದರು.
ನೆಲ್ಲುಡಿ ಪ್ರೊಜೆಕ್ಟ್ ಕುರಿತು ಆಕ್ಷೇಪಣೆ ವ್ಯಕ್ತವಾಗಿದೆ ಎಂಬುದನ್ನು ಜಿಪಂ ಸಿಇಒ ನಿತೀಶ್ ಅವರು ಸಭೆಯ ಗಮನಕ್ಕೆ ತಂದರು. ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವುದು ಗಮನಕ್ಕೆ ಬರುತ್ತಲೇ ತಕ್ಷಣ ಕಾರ್ಯಪ್ರವೃತ್ತರಾಗಿ ನೀರು ಒದಗಿಸಲು ಮುಂದಾಗಬೇಕು. ಈ ವಿಷಯದಲ್ಲಿ ಯಾವುದೇ ದೂರುಗಳು ಬರದಂತೆ ನೋಡಿಕೊಳ್ಳಬೇಕು. ಕುಡಿಯುವ ನೀರಿನ ವಿಷಯದಲ್ಲಿ ಯಾವುದೇ ರೀತಿಯ ಹಣದ ಕೊರತೆ ಇಲ್ಲ ಎಂದು ಸಚಿವ ಈಶ್ವರಪ್ಪ ಸ್ಪಷ್ಟಪಡಿಸಿದರು.
ಜಿಲ್ಲೆಯಲ್ಲಿ ಬಳ್ಳಾರಿ-9, ಹಡಗಲಿ-26, ಹರಪನಹಳ್ಳಿ-59, ಹಗರಿಬೊಮ್ಮನಹಳ್ಳಿ-20, ಹೊಸಪೇಟೆ-32,ಕೂಡ್ಲಿಗಿ-83, ಸಂಡೂರು -47, ಸಿರಗುಪ್ಪ-32 ಸೇರಿದಂತೆ ಒಟ್ಟು 308 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದ್ದು, ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಎಲ್ಲ ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದು ಜಿಪಂ ಸಿಇಒ ನಿತೀಶ್ ಸಚಿವರಿಗೆ ವಿವರಿಸಿದರು.
ಜಿಲ್ಲೆಯಲ್ಲಿ 1129 ಶುದ್ಧ ಕುಡಿಯುವ ನೀರಿನ ಘಟಕಗಳಿ (ಆರ್ ಒ ಪ್ಲಾಂಟ್)ದ್ದು ಅದರಲ್ಲಿ ಗ್ರಾಪಂ, ಕೆಕೆಆರ್ಡಿಬಿಗಳು 432 ಆರ್ಒ ಪ್ಲಾಂಟ್ಗಳು ನಿರ್ವಹಣೆ ಮಾಡುತ್ತಿವೆ. ಉಳಿದ 697 ಪ್ಲಾಂಟ್ಗಳ ನಿರ್ವಹಣೆಗೆ ಸಂಬಂಧಿಸಿದಂತೆ ಎರಡು ಏಜೆನ್ಸಿಗಳನ್ನುಫಿಕ್ಸ್
ಮಾಡಲಾಗಿದ್ದು, ಈಗಾಗಲೇ ಅವುಗಳಿಗೆ 587 ಹಸ್ತಾಂತರಿಸಲಾಗಿದೆ. ಉಳಿದವುಗಳನ್ನು ಈ ವಾರದಲ್ಲಿ ಹಸ್ತಾಂತರಿಸಲಾಗುವುದು ಎಂದರು.
ಈ ಏಜೆನ್ಸಿಗಳು ನಿರ್ವಹಣೆಗೆ ಪ್ರತಿ 20ಲೀಟರ್ಗೆ 5 ರೂ.ಪಡೆದುಕೊಳ್ಳುತ್ತಿವೆ. ಗ್ರಾಪಂ ಮತ್ತು ಕೆಕೆಆರ್ಡಿಬಿ ನಿರ್ವಹಣೆ ಮಾಡುತ್ತಿರುವ ಏಜೆನ್ಸಿಗಳು 2 ರೂ. ಪಡೆಯುತ್ತಿದ್ದು, ಈ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಅವರು ಹೇಳಿದರು. ಜಿಲ್ಲೆಯಲ್ಲಿ 73 ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿರುವುದನ್ನು ಸಚಿವರ ಗಮನಕ್ಕೆ ತಂದರು.
ನರೇಗಾದಲ್ಲಿ ಮಾನವ ದಿನಗಳ ಸೃಷ್ಟಿ ಮತ್ತು ಗುಣಮಟ್ಟದ ಕೆಲಸ ಹಾಗೂ ಬಳ್ಳಾರಿಗೆ ಪ್ರಶಸ್ತಿಗೆ ಸಂದಿರುವುದು, ಎಕೋಪಾರ್ಕ್ಗಳ ನಿರ್ಮಾಣದ ವಿವರವನ್ನು ಸಹ ಜಿಪಂ ಸಿಇಒ ನಿತೀಶ್ ಅವರು ಸಚಿವರಿಗೆ ವಿವರಿಸಿದರು. ಈ ಸಂದರ್ಭದಲ್ಲಿ ಸಂಸದ ವೈ. ದೇವೇಂದ್ರಪ್ಪ, ಶಾಸಕ ಸೋಮಲಿಂಗಪ್ಪ, ಸಚಿವರ ವಿಶೇಷ ಕರ್ತವ್ಯ ಅಧಿ ಕಾರಿಗಳು, ಜಿಪಂ ಉಪಕಾರ್ಯದರ್ಶಿಗಳು, ತಾಪಂ ಇಒಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ
MUST WATCH
ಹೊಸ ಸೇರ್ಪಡೆ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ