ವಿಮ್ಸ್ ರೋಗಿಗಳಿಗೆ ಊಟ ಬಡಿಸಿದ ನ್ಯಾಯಾಧೀಶರು
Team Udayavani, Apr 24, 2020, 4:54 PM IST
ಬಳ್ಳಾರಿ: ವಿಮ್ಸ್ ಆಸ್ಪತ್ರೆ ಆವರಣದಲ್ಲಿ ರೋಗಿಗಳಿಗೆ ಜಿಲ್ಲಾ ನ್ಯಾ. ಕೃಷ್ಣ ಅಸೋಡೆ, ಹಿರಿಯ ಸಿವಿಲ್ ನ್ಯಾ. ಅರ್ಜುನ್ ಮಲ್ಲೂರ್ ಅವರು ಊಟ ಬಡಿಸಿದರು
ಬಳ್ಳಾರಿ: ನಗರದ ವಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಚಿಕಿತ್ಸೆಗೆ ದಾಖಲಾದ ರೋಗಿಗಳಿಗೆ ಹಾಗೂ ರೋಗಿಗಳೊಂದಿಗೆ ಬಂದಿರುವವರಿಗೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಕೃಷ್ಣ ಅಸೋಡೆ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಅರ್ಜುನ್ ಮಲ್ಲೂರ್ ಅವರು ಗುರುವಾರ ಊಟ ಬಡಿಸಿದರು.
ಕೋವಿಡ್-19 ಹಿನ್ನೆಲೆಯಲ್ಲಿ ನ್ಯಾಯವಾದಿ ಕೋಟೇಶ್ವರರಾವ್ ಎನ್ನುವವರು ತಮ್ಮ ಎನ್ಜಿಒ ಮೂಲಕ ವಿಮ್ಸ್ ಆಸ್ಪತ್ರೆ ಆವರಣದಲ್ಲಿ ರೋಗಿಗಳಿಗೆ ಊಟ ವಿತರಿಸುವುದನ್ನು ಪರಿಶೀಲಿಸಿ ಸ್ವತಃ ನ್ಯಾಯಾಧೀಶರೇ ಊಟ ಬಡಿಸಿದರು. ಇಂಥ ಸಂಕಷ್ಟದ ಸಂದರ್ಭದಲ್ಲಿ ರೋಗಿಗಳಿಗೆ ಊಟ ವಿತರಿಸುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಕೃಷ್ಣ ಅಸೋಡೆ ಅವರು ಕೋವಿಡ್ ಮುಗಿಯುವವರೆಗೆ ಇದನ್ನು ಮುಂದುವರಿಸಿಕೊಂಡು ಹೋಗುವಂತೆ ಅವರಿಗೆ ಸೂಚಿಸಿದರು ಮತ್ತು ಇದೇ ಸಂದರ್ಭದಲ್ಲಿ ಕೋವಿಡ್ ಕುರಿತು ಜಾಗೃತಿ ಮೂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ