ಆನ್ಲೈನ್ನಲ್ಲಿ ಕಾರ್ಮಿಕ ದಿನ ಆಚರಣೆ
ಮನೆಯಲ್ಲೇ ಬೇಡಿಕೆಗಳ ಫಲಕ ಪ್ರದರ್ಶನ |ಜಿಲ್ಲಾದ್ಯಂತ ಸರಳ ಕಾರ್ಯಕ್ರಮ |ಮುಖಂಡರಿಂದ ಧ್ವಜಾರೋಹಣ
Team Udayavani, May 2, 2020, 3:12 PM IST
ಬಳ್ಳಾರಿ: ಎಐಯುಟಿಯುಸಿ ಸಂಘಟನೆಯಿಂದ ಆನ್ಲೈನ್ನಲ್ಲಿ ನಡೆದ ಕಾರ್ಮಿಕ ದಿನ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷ ಕೆ.ಸೋಮಶೇಖರ್ ಮಾತನಾಡಿದರು.
ಬಳ್ಳಾರಿ: ಲಾಕ್ಡೌನ್ ಹಿನ್ನೆಲೆಯಲ್ಲಿ ಎಐಯುಟಿಯುಸಿ ಸಂಘಟನೆಯು ದೇಶವ್ಯಾಪ್ತಿ ಕರೆಯ ಮೇರೆಗೆ ಜಿಲ್ಲೆಯಲ್ಲೂ ಕಾರ್ಮಿಕರು ಕಾರ್ಮಿಕ ದಿನಾಚರಣೆಯನ್ನು ಮನೆಯಲ್ಲೇ ಬೇಡಿಕೆಗಳ ಫಲಕಗಳನ್ನು ಪ್ರದರ್ಶಿಸಿ ಆನ್ಲೈನ್ನಲ್ಲಿ ಸರಳವಾಗಿ ಶುಕ್ರವಾರ ಆಚರಿಸುವ ಮೂಲಕ ಸರ್ಕಾರದ ಗಮನ ಸೆಳೆಯಲಾಯಿತು.
ಲಾಕ್ಡೌನ್ ನಿಮಿತ್ತ ಮೇ 1 ಕಾರ್ಮಿಕ ದಿನಾಚರಣೆಯನ್ನು ಮನೆ-ಮನೆಯಲ್ಲಿ ಆಚರಿಸುವಂತೆ ಎಐಯುಟಿಯುಸಿ ಸಂಘಟನೆಯು ದೇಶವ್ಯಾಪಿ ಕರೆ ನೀಡಿತ್ತು. ಇದಕ್ಕೆ ಸ್ಪಂದಿಸಿದ ಬಳ್ಳಾರಿ ಜಿಲ್ಲೆಯ ನೂರಾರು ಆಶಾ ಕಾರ್ಯಕರ್ತೆಯರು, ಕಟ್ಟಡ ಕಾರ್ಮಿಕರು, ಬಿಸಿಯೂಟ ನೌಕರರು, ಸ್ಪಾಂಜ್ ಐರನ್ ಕಾರ್ಮಿಕರು, ಗಣಿ ಕಾರ್ಮಿಕರು, ವಿಮ್ಸ್ ಗುತ್ತಿಗೆ ಕಾರ್ಮಿಕರು, ಹಮಾಲಿಗಳು, ಉದ್ಯೋಗ ಖಾತ್ರಿ ಯೋಜನೆ ಕಾರ್ಮಿಕರು ತಮ್ಮ ಮನೆಗಳಲ್ಲೇ ಕಾರ್ಮಿಕರ ಐಕ್ಯತೆ ಚಿರಾಯುವಾಲಿ, ದುಡಿಮೆ ಅವಧಿಯನ್ನು 8 ಗಂಟೆಯಿಂದ 12 ಗಂಟೆಗೆ ಏರಿಸಿರುವುದನ್ನು ಒಪ್ಪುವುದಿಲ್ಲ, ಆರೋಗ್ಯ ಸಿಬ್ಬಂದಿಯನ್ನು ರಕ್ಷಿಸಿ, ವಲಸೆ ಕಾರ್ಮಿಕರನ್ನು ರಕ್ಷಿಸಿ, ಸಂಕಷ್ಟದಲ್ಲಿರುವ ಜನರಿಗೆ ಆಹಾರ, ವಸತಿ ಒದಗಿಸಿ ಸೇರಿದಂತೆ ಇನ್ನಿತರೆ ಬೇಡಿಕೆಗಳ ಘೋಷವಾಕ್ಯಗಳುಳ್ಳ ಫಲಕಗಳನ್ನು ಹಿಡಿದು ತೆಗೆಸಿಕೊಂಡಿರುವ ಫೋಟೋವನ್ನು ವಾಟ್ಸ್ ಆ್ಯಪ್ನಲ್ಲಿ ಕಾರ್ಮಿಕ ಮುಖಂಡರಿಗೆ ಕಳುಹಿಸಿಕೊಡುವ ಮೂಲಕ ಆನ್ಲೈನ್ ನಲ್ಲಿ ಕಾರ್ಮಿಕ ದಿನವನ್ನು ಸರಳವಾಗಿ ಆಚರಿಸಿದ್ದಾರೆ.
ಈ ವೇಳೆ ಸಾಮಾಜಿಕ ಜಾಲತಾಣದಲ್ಲಿ ಎಐಯುಟಿಯುಸಿ ರಾಜ್ಯಾಧ್ಯಕ್ಷ ಕೆ. ಸೋಮಶೇಖರ್ ಲೈವ್ನಲ್ಲಿ ಮಾತನಾಡಿ ದರು. ಎಐಯುಟಿಯುಸಿ ರಾಜ್ಯ ಉಪಾಧ್ಯಕ್ಷ ಎ.ದೇವದಾಸ್, ಡಿ.ನಾಗಲಕ್ಷ್ಮೀ, ಸೋಮಶೇಖರ್ಗೌಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ