ಮೆಣಸಿನಕಾಯಿಗೆ ಬೂದಿ ರೋಗದ ಕಾಟ!

ಮಳೆ ಅಭಾವದಿಂದ ಶೇ. 90ರಷ್ಟು ಬೆಳೆ ಹಾನಿ,ಇಳುವರಿ ಕುಸಿತ,ಆತಂಕದಲ್ಲಿ ಅನ್ನದಾತ

Team Udayavani, Dec 3, 2020, 5:23 PM IST

ಮೆಣಸಿನಕಾಯಿಗೆ ಬೂದಿ ರೋಗದ ಕಾಟ!

ಕೊಟ್ಟೂರು: ತಾಲೂಕಿನ ಹುಣಸಿಕಟ್ಟೆ ಗ್ರಾಮದಲ್ಲಿ ಮೆಣಸಿನಕಾಯಿ ಬೆಳೆಗೆ ಬೂದಿ ರೋಗ, ಎಲೆ ಮುಟುರು ರೋಗ ಕಾಣಿಸಿಕೊಂಡಿದ್ದು ರೈತರಿಗೆ ನಷ್ಟದ ಭೀತಿ ಎದುರಾಗಿದೆ.

ನೀರಾವರಿ ಜಮೀನುಗಳಲ್ಲಿ ಮೆಣಸಿನಕಾಯಿ ಗಿಡಗಳು ಸಮೃದ್ಧವಾಗಿ ಬೆಳೆದಿವೆ. ಎಲೆಯ ಮೇಲೆ ಬೂದಿ ಚೆಲ್ಲಿದಂತಹ ರೋಗ ಲಕ್ಷಣ ಕಂಡೊಡನೆ ಎಲೆ, ಹೂ ಉದುರಲು ಆರಂಭಿಸಿ ಗಿಡಗಳು ಬರಡಾಗುತ್ತಿವೆ. ಈ ವಿಚಿತ್ರ ರೋಗದಿಂದ ಇಳುವರಿಗಣನೀಯವಾಗಿ ಕುಸಿತಗೊಳ್ಳುವುದರಿಂದ ರೈತರು ಆತಂಕಕ್ಕೆ ಒಳಗಾಗಿದ್ದಾರೆ.

ತಾಲೂಕಿನಲ್ಲಿ ಈ ವರ್ಷ 1000 ಹೆಕ್ಟೇರ್‌ ಪ್ರದೇಶದಲ್ಲಿ ಮೆಣಸಿನಕಾಯಿ ಬಿತ್ತನೆಯಾಗಿದ್ದು ಮಳೆ ಅಭಾವದಿಂದ ಖುಷ್ಕಿ ಜಮೀನಿನಲ್ಲಿ ಶೇ. 90 ರಷ್ಟು ಬೆಳೆ ಹಾನಿಗೀಡಾಗಿದೆ. ನೀರಾವರಿಪ್ರದೇಶದಲ್ಲಿನ ಬೆಳೆ ರೋಗಬಾಧೆಗೆ ತುತ್ತಾಗಿದೆ. ಮೆಣಸಿನಕಾಯಿ ಬೆಳೆಗೆ ಹಿಂದಿನ ವರ್ಷ ಸೊರಗು ರೋಗ ಮತ್ತು ಮಚ್ಚೆ ರೋಗ ಕಾಣಿಸಿಕೊಂಡು ರೈತರು ನಷ್ಟ ಅನುಭವಿಸಿದ್ದರು. ಈ ಬಾರಿಬೂದಿ ರೋಗ ಬೆನ್ನತ್ತಿರುವುದರಿಂದ ರೈತರು ಚಿಂತೆಗೀಡಾಗಿದ್ದಾರೆ.

ಬೂದಿರೋಗ ಹತೋಟಿಗಾಗಿ ವಾರಕ್ಕೆ ಎರಡು ಬಾರಿಗಿಂತ ಅಧಿಕವಾಗಿ ಕೀಟನಾಶಕ ಸಿಂಪಡಿಸಿದರೂ ರೋಗ ನಿಯಂತ್ರಣಕ್ಕೆ ಬಂದಿಲ್ಲ. 2 ಎಕರೆ ಮೆಣಸಿನಕಾಯಿ ಕೃಷಿಗೆ ಈಗಾಗಲೇರೂ. 1.60 ಲಕ್ಷ ಖರ್ಚು ಮಾಡಿದ್ದೇವೆ.ರೋಗಬಾಧೆಯಿಂದ ಇಳುವರಿ ಅರ್ಧದಷ್ಟು ಕುಸಿಯುವ ಲಕ್ಷಣಗಳಿರುವುದರಿಂದ ದಿಕ್ಕುತೋಚದಂತಾಗಿದೆ ಎಂದು ರೈತ ಬಿ.ಎಸ್‌. ಆರ್‌. ಮೂಗಣ್ಣ ಅಳಲು ತೋಡಿಕೊಂಡರು.ಮೆಣಸಿನಕಾಯಿ ಕೃಷಿಗೆ ಹೆಚ್ಚು ರಸಗೊಬ್ಬರ, ಕ್ರಿಮಿನಾಶ ಬಳಸುವುದರಿಂದ ಭೂಮಿ ಸತ್ವ ಕಳೆದುಕೊಳ್ಳುತ್ತದೆ. ಈ ಸತ್ಯ ಗೊತ್ತಿದ್ದರೂ ಹೆಚ್ಚಿನ ಇಳುವರಿ ಪಡೆದು ಸಾಲದ ಹೊರೆ ಕಡಿಮೆ ಮಾಡಿಕೊಳ್ಳಲು ಅದರ ಬಳಕೆ ಮಾಡುವುದು ಅನಿವಾರ್ಯವಾಗಿದೆ ಎಂದರು.

ಹಿಂದಿನ ವರ್ಷ ಎಕರೆಗೆ 15ರಿಂದ 20 ಕ್ವಿಂಟಲ್‌ ಇಳುವರಿ ಬಂದಿತ್ತು. ಬೆಳೆದಿದ್ದ ಬ್ಯಾಡಗಿ ತಳಿಯ ಮೆಣಸಿನಕಾಯಿ ಪ್ರತಿ ಕ್ವಿಂಟಲ್‌ಗೆ ರೂ. 15ರಿಂದರೂ. 20 ಸಾವಿರ ಬೆಲೆ ಸಿಕ್ಕಿತ್ತು. ಆದರೆ ಈ ವರ್ಷ 20 ರಿಂದ 30 ಸಾವಿರಕ್ಕೇರಿದೆ. ಮೆಣಸಿನಕಾಯಿಕೃಷಿ ಕೈಹಿಡಿದ್ದಿದರಿಂದ ಈ ವರ್ಷ 2 ಎಕರೆಯಲ್ಲಿಮೆಣಸಿನಕಾಯಿ ಬಿತ್ತನೆ ಮಾಡಿದ್ದೆ. ಆದರೆ, ಇಡೀ ಹೊಲ ರೋಗಕ್ಕೆ ತುತ್ತಾಗಿದೆ. ಬೆಳೆಯನ್ನುನಂಬಿಕೊಂಡು ಸಾಲ ಪಡೆದಿದ್ದೆ. ಈಗ ಏನುಮಾಡಬೇಕೆಂಬುದೇ ತಿಳಿಯುತ್ತಿಲ್ಲ ಎನ್ನುತ್ತಾರೆ ಉಳಿದ ರೈತರು.

ಕಷ್ಟಪಟ್ಟು ಬೆಳೆದ ಮೆಣಸಿನಕಾಯಿ ರೋಗಬಾಧೆಯಿಂದನೆಲಪಾಲಾಯಿತು. ಸರ್ಕಾರ ಇಂಥ ನಷ್ಟಗಳ ಪಟ್ಟಿ ಮಾಡಿ ಕಷ್ಟದಲ್ಲಿರುವ ನಮ್ಮ ಸಹಾಯಕ್ಕೆ ಬರಬೇಕು. ಬಿ.ಎಸ್‌.ಆರ್‌. ಮೂಗಣ್ಣ, ರೈತ, ಕೊಟ್ಟೂರು

ಮೆಣಸಿನಕಾಯಿಗೆ ಬೂದಿ ರೋಗ ಬಂದಿರುವುದು ಗಮನಕ್ಕೆ ಬಂದಿದೆ. ಇದಕ್ಕೆ ಸಂಬಂಧಿ ಸಿದಂತೆ ಔಷಧ ಸಿಂಪಡಣೆಗೆಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ಬೆಳೆ ನಾಶವಾಗಿರುವ ರೈತರು ಕಂಗಲಾಗದೆ ಇದಕ್ಕೆ ಸಂಬಂಧಪಟ್ಟವರಿಗೆ ಮಾಹಿತಿ ನೀಡಿ ಮತ್ತುಬೆಳೆ ಸಮೀಕ್ಷೆ ನಂತರ ಪರಿಹಾರ ಒದಗಿಸಲು ಮುಂದಾಗುತ್ತೇವೆ. ನೀಲಪ್ಪ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಕೂಡ್ಲಿಗಿ

-ರವಿಕುಮಾರ ಎಂ

ಟಾಪ್ ನ್ಯೂಸ್

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.