ಬಿಜೆಪಿ ನನಗೆ ತಾಯಿ ಇದ್ದಂತೆ ; ಪಕ್ಷದ ನಿರ್ಧಾರಕ್ಕೆ ನಾನು ಬದ್ಧ: ಶ್ರೀರಾಮುಲು ಸ್ಪಷ್ಟನೆ
Team Udayavani, Aug 28, 2019, 12:02 PM IST
ಬಳ್ಳಾರಿ: ಭಾರತೀಯ ಜನತಾ ಪಕ್ಷ ನನಗೆ ತಾಯಿಯ ಸಮಾನ ಇದ್ದಂತೆ. ಪಕ್ಷದ ನಿರ್ಣಯಕ್ಕೆ ನಾನು ಬದ್ಧನಾಗಿದ್ದು, ವೈಯಕ್ತಿಕ ಅಭಿಪ್ರಾಯವನ್ನು ಬದಿಗಿರಿಸಿ ನಾವೆಲ್ಲರೂ ಪಕ್ಷಕ್ಕಾಗಿ ದುಡಿಯಬೇಕು ಎಂದು ತಮ್ಮ ಅಭಿಮಾನಿಗಳು ಹಾಗೂ ಬೆಂಬಲಿಗರಲ್ಲಿ ಆರೋಗ್ಯ ಸಚಿವ ಬಿ.ಶ್ರೀರಾಮುಲು ಮನವಿ ಮಾಡಿಕೊಂಡಿದ್ದಾರೆ.
ನಗರದಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಶ್ರೀರಾಮುಲು ಅವರು, ತಮ್ಮ ಪರವಾಗಿ ಯಾರೂ ಯಾವುದೇ ರೀತಿಯ ಪ್ರತಿಭಟನೆಯನ್ನು ಮಾಡದಿರುವಂತೆ ರಾಜ್ಯದ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಎಲ್ಲರಿಗೂ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಪಕ್ಷದೊಂದಿಗೆ ನಾನು ಸಹ ಕೈ ಜೋಡಿಸುತ್ತೇನೆ ಎಂದು ಅವರು ಭರವಸೆ ನೀಡಿದರು.
ರಾಜ್ಯದಲ್ಲಿರುವ ವಾಲ್ಮೀಕಿ ಸಮುದಾಯಕ್ಕೆ 7.5% ಮೀಸಲಾತಿ ಒದಗಿಸುವ ಕೆಲಸ ಆಗಬೇಕಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರು ಈ ಬಗ್ಗೆ ಅಶ್ವಾಸನೆ ನೀಡಿದ್ದಾರೆ.. ಅದು ದೊರೆತರೆ ವಾಲ್ಮೀಕಿ ಸಮುದಾಯಕ್ಕೆ ಸಂಪೂರ್ಣ ಮೀಸಲಾತಿ ಸೌಲಭ್ಯ ಸಿಕ್ಕಂತಾಗುತ್ತದೆ. ಈ ವಿಚಾರದಲ್ಲಿ ಸಮುದಾಯದ ಪ್ರಭಾವಿ ಮುಖಂಡರಾದ ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಶಿವನಗೌಡ ನಾಯಕ, ರಾಜುಗೌಡ ಎಲ್ಲರೂ ಒಂದಾಗಿದ್ದೇವೆ ಎಂದು ಶ್ರೀರಾಮುಲು ಇದೇ ಸಂದರ್ಭದಲ್ಲಿ ಹೇಳಿದರು.
ಬಳ್ಳಾರಿ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಯಾವುದೇ ಬೇಡಿಕೆ ಇಟ್ಟಿಲ್ಲ. ಸದ್ಯಕ್ಕೆ ನಾನು ನೆರೆ ಪೀಡಿತ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳ ಉಸ್ತುವಾರಿಯಾಗಿದ್ದೇನೆ ಅಷ್ಟೇ ಎಂದು ಶ್ರೀರಾಮುಲು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ