ಕಾಣೆಯಾಗಿದ್ದ ಬಾಲಕ ಶವವಾಗಿ ಪತ್ತೆ; ಸಾವಿನ ಸುತ್ತ ಅನುಮಾನದ ಹುತ್ತ!
Team Udayavani, Dec 5, 2019, 12:19 PM IST
ಬಳ್ಳಾರಿ: ನಗರದ 12ನೇ ವಾರ್ಡ್ ನ ಮಿಲ್ಲರ ಪೇಟೆಯಲ್ಲಿ ಕಾಣೆಯಾಗಿದ್ದ ಬಾಲಕ ಗುರುವಾರ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾನೆ. ಮಿಲ್ಲರ ಪೇಟೆಯ ಕಲ್ಯಾಣ ಸ್ವಾಮಿ ಮಠದ ಮುಂಭಾಗದ ಬಳಿಯಿರುವ ವಿದ್ಯುತ್ ಪರಿವರ್ತಕದ ಸಮೀಪ ಬಾಲಕನ ಶವ ಪತ್ತೆಯಾಗಿದ್ದು, ಬಾಲಕ ಕೇಶವ (12 ) ಸಾವಿನ ಸುತ್ತ ನಾನಾ ಅನುಮಾನಗಳು ಸೃಷ್ಟಿಯಾಗಿವೆ.
ಬುಧವಾರ ಬೆಳಗ್ಗೆ ಏಕಾಏಕಿ ಕಾಣೆಯಾಗಿದ್ದ ಬಾಲಕನ ಕುರಿತು ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಜೆಸ್ಕಾಂ ಸಿಬ್ಬಂದಿ ಬಾಲಕನಿಗೆ ವಿದ್ಯುತ್ ಸ್ಪರ್ಶವಾಗಿಲ್ಲ ಎಂದು ಸ್ಪಷ್ಟ ಪಡಿಸಿರುವುದರಿಂದ ಬೆಳಗ್ಗೆಯಾಗುವಷ್ಟರಲ್ಲಿ ವಿದ್ಯುತ್ ಪರಿವರ್ತಕದ ಸಮೀಪ ಬಾಲಕ ಮೃತಪಟ್ಟಿದ್ದು ಹೇಗೆ ಎಂಬ ಪ್ರಶ್ನೆ ಎದ್ದಿದೆ.
ಬಾಲಕನನ್ನು ಕೊಲೆ ಮಾಡಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಕೊಲೆ ಮಾಡಿದ ನಂತರ ಅನುಮಾನ ಬರಬಾರದು ಎಂದು ವಿದ್ಯುತ್ ಪರಿವರ್ತಕದ ಬಳಿ ಬಿಸಾಕಿದ್ದಾರೆ ಎಂದು ಆರೋಪಿಸಿದ್ದಾರೆ.
ಸ್ಥಳಕ್ಕೆ ಬ್ರೂಸಪೇಟೆ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದು, ತನಿಖೆ ನಂತರ ಸತ್ಯಾಸತ್ಯತೆ ತಿಳಿಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್