ಬ್ರಹ್ಮರ್ಷಿ ನಾರಾಯಣ ಗುರು ಆದರ್ಶ ದಾರಿದೀಪವಾಗಲಿ
Team Udayavani, Sep 4, 2020, 7:11 PM IST
ಕಂಪ್ಲಿ: ಬ್ರಹ್ಮರ್ಷಿ ನಾರಾಯಣ ಗುರುಗಳು 19ನೇ ಶತಮಾನದ ಕೇರಳದ ಮಹಾನ್ ಸಂತ ಹಾಗೂ ಸಮಾಜ ಸುಧಾರಕರಾಗಿದ್ದು, ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು, ಅವರ ಆದರ್ಶಗಳು ಪ್ರತಿಯೊಬ್ಬರಿಗೂ ದಾರಿದೀಪವಾಗಿವೆ ಎಂದು ತಹಶೀಲ್ದಾರ್ ಗೌಸಿಯಾಬೇಗಂ ತಿಳಿಸಿದರು.
ಅವರು ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕೋವಿಡ್ ಹಿನ್ನೆಲೆ ಶ್ರೀ ನಾರಾಯಣ ಗುರು ಅವರ ಜಯಂತಿಯನ್ನು ಬುಧವಾರ ಸರಳವಾಗಿ ಆಚರಿಸಿ ಮಾತನಾಡಿ, ಕೋವಿಡ್ ಹಿನ್ನೆಲೆ ಶ್ರೀ ನಾರಾಯಣ ಗುರುಗಳ ಜಯಂತ್ಯುತ್ಸವ ಅತ್ಯಂತ ಸರಳ ಹಾಗೂ ಅರ್ಥಪೂರ್ಣವಾಗಿ ಸರ್ಕಾರದ ಆದೇಶದಂತೆ ಆಚರಿಸಲಾಯಿತು. ನಾರಾಯಣಗುರು ಅವರು ನೀಡಿದ ಕೊಡುಗೆ ಅಪಾರವಾಗಿದ್ದು, ಅವರ ಆದರ್ಶ ತತ್ವಗಳೊದಿಗೆ ಉತ್ತಮ ಜೀವನ ನಡೆಸಬೇಕು. ನಾರಾಯಣಗುರು ಪ್ರತಿಯೊಬ್ಬರಿಗೂ ದಾರಿ ದೀಪವಾಗಿದ್ದಾರೆ ಎಂದರು.
ತದನಂತರ ಆರ್ಯ ಈಡಿಗರ ಸಮಾಜದ ಅಧ್ಯಕ್ಷ ಈ. ನರಸಪ್ಪ ಮಾತನಾಡಿ, ನಾರಾಯಣ ಗುರುಗಳು ಸಮಾಜದಲ್ಲಿ ಮೇಲು-ಕೀಳು ಬಿಟ್ಟು ಒಂದೇ ಜಾತಿ, ಒಂದೇ ಮತ, ಒಂದೇ ದೈವ ಎಂಬ ಸಂದೇಶವನ್ನು ನಾಡಿಗೆ ಸಾರಿದ್ದಾರೆ. ಎಲ್ಲ ರಂಗಗಳಲ್ಲಿ ಹಿಂದುಳಿದ ಆರ್ಯ ಈಡಿಗರ ಸಮಾಜಕ್ಕೆ ಸರ್ಕಾರದ ಸೌಲಭ್ಯಗಳು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ವಿಶೇಷ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಸಮಾಜದ ಅಭಿವೃದ್ಧಿಗೆ ಮುಂದಾಗಬೇಕು. ಸಮಾಜದ ಹಿತದೃಷ್ಟಿಯಿಂದ ಸರ್ಕಾರ ಮುತುವರ್ಜಿವಹಿಸಿ ಕೂಡಲೇ ವಿದ್ಯಾರ್ಥಿ ನಿಲಯ ಸ್ಥಾಪಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಶ್ರೀನಾರಾಯಣ ಗುರು ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ನಂತರ ಪುಷ್ಪ ನಮನ ಸಲ್ಲಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಿರಸ್ತೇದಾರ ಪಂಪಾಪತಿ, ಕಂದಾಯ ಅಧಿಕಾರಿ ಗಣೇಶ್, ಗ್ರಾಮಲೆಕ್ಕಾ ಧಿಕಾರಿಗಳ ಸಂಘದ ತಾಲೂಕು ಅಧ್ಯಕ್ಷ ಮಹ್ಮದ್ ಶರೀಫ್, ಆರ್ಯ ಈಡಿಗರ ಸಂಘದ ಕಾರ್ಯದರ್ಶಿ ಈ. ಬಸವರಾಜ, ಖಜಾಂಚಿ ಶ್ರೀನಿವಾಸ ಹಾಗೂ ಈ.ಕೆ. ಗುರುರಾಜ, ಪ್ರಥಮ ದರ್ಜೆ ಸಹಾಯಕರಾದ ಮಾಲತೇಶ್ ದೇಶಪಾಂಡೆ, ಭೂಮಾಪನಾ ಇಲಾಖೆಯ ಮಹಾಂತೇಶ್, ಮೌನೇಶ್, ವಿಎಗಳಾದ ಲಕ್ಷ್ಮಣನಾಯ್ಕ, ವಿಜಯಕುಮಾರ ಹಾಗೂ ಸಿಬ್ಬಂದಿಗಳು ಸೇರಿದಂತೆ ಆರ್ಯ ಈಡಿಗರ ಸಮಾಜದವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?