BSY, ಸಿದ್ದು ನನಗಿಂತಲೂ ಜೂನಿಯರ್ಸ್, ಅವರು ಸಿಎಂ ಆದರು; ನಮ್ಮ ಹಣೆಬರಹ ಇಷ್ಟೇ !: ಹೊರಟ್ಟಿ


Team Udayavani, Oct 22, 2020, 11:50 AM IST

basavarj-horatti

ಬಳ್ಳಾರಿ: ಜೆಡಿಎಸ್ ಅಭ್ಯರ್ಥಿ ಶಿಕ್ಷಕರಾಗಿದ್ದಾರೆ. ಪ್ರಜ್ಞಾವಂತರೆಲ್ಲರೂ ಅವರಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಶಿಕ್ಷಣ ವ್ಯವಸ್ಥೆ ಅವ್ಯವಸ್ಥೆಗೊಂಡಿದೆ. ಸರಕಾರದಲ್ಲಿ ಬೇಡವಾದವರಿಗೆ ಶಿಕ್ಷಣ ಇಲಾಖೆ ಸಚಿವ ಮಾಡ್ತಾರೆ. ಈ ಇಲಾಖೆ ಎಂದರೆ ಎಲ್ಲರಿಗೂ ಬೇಡವಾಗಿದ್ದಾಗಿದೆ. ಆದರೆ, ರಾಜ್ಯಕ್ಕೆ ಏನಾದರೂ ಕೊಡುಗೆ ಕೊಡಲು ಈ ಇಲಾಖೆಯಿಂದಲೇ ಸಾಧ್ಯ. ಹಾಗಾಗಿ ಈ ಕ್ಷೇತ್ರಕ್ಕೆ ಜ್ಞಾನ ಇರುವವರೇ ಬರಬೇಕು ಎಂದರು.

ವಠಾರ ಶಾಲೆ ಶಿಕ್ಷಣ ಶೇ.5 ಮಂದಿಗೆ ಸಿಕ್ಕಿಲ್ಲ. ಅಷ್ಟೇ ಪ್ರಮಾಣ ಕೋವಿಡ್ ದಕ್ಕಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಮೂಲೆಗಟ್ಟಲಾಗಿದೆ. ನೇಮಕಾತಿಯ ಮಾಡಿಲ್ಲ. ನಮ್ಮ ಕಾಲದಲ್ಲಿ ಒಂದೂ ಶಾಲೆಯನ್ನು ಮುಚ್ಚಿರಲಿಲ್ಲ‌. ಈಗ ನೂರಾರು ಶಾಲೆಗಳನ್ನು ಮುಚ್ಚಲಾಗಿದೆ. ಶಾಸನಸಭೆಗಳೂ ಸಹಿತ, ವಿಧಾನಪರಿಷತ್ ಘನತೆ ಕಳೆಯುತ್ತಿದ್ದಾರೆ‌. ಸುಧಾರಣೆಗೆ ಪ್ರಯತ್ನಸುತ್ತಿದ್ದೆವೆ. ಸರಕಾರಗಳು ಮಾತು ಕೇಳುವುದಿಲ್ಲ ಎಂದು ಕಿಡಿಕಾರಿದರು.

ಶಿಕ್ಷಕರ ವರ್ಗಾವಣೆ ಅವಶ್ಯಕತೆ ಇದೆ‌‌. ಈ ಸಮಯದಲ್ಲಿ ಇಂತಹ ನಿರ್ಧಾರ ಮಾಡುವುದು ಸರಿಯಲ್ಲ. ನೀತಿ ಸಂಹಿತೆ ಉಲ್ಲಂಘನೆಯಾಗಬಹುದು. ರಾಜಕೀಯದಲ್ಲಿ ಪ್ರಾಮಾಣಿಕರು, ಸಚ್ಚಾರಿತ್ರರು ಇರಬೇಕು ಎಂದು ಜನ ಮಾತಾಡುತ್ತಿದ್ದಾರೆ‌. ಶಿಕ್ಷಣ ಮಂತ್ರಿಯಾಗಿ ಇನ್ನೊಂದಿಷ್ಟು ಕೆಲಸಗಳನ್ನು ಮುಂದುವರೆಸಬಹುದಿತ್ತು. ರಾಜಕೀಯದಲ್ಲಿ ನೈತಿಕತೆ ಪಾಲಿಸುತ್ತಿದ್ದೆವೆ. ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದೇನೆ ಎಂದರು.

ದೇವೇಗೌಡರ ಮೇಲೆ ವಿಶ್ವಾಸವಿದೆ. ತಪ್ಪಿದ್ದರೆ ತಪ್ಪೆನ್ನುತ್ತಾರೆ. ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಸುಧಾರಣೆ ಕಂಡಿದೆ. ಆದರೆ, ರಾಜ್ಯದಲ್ಲಿ ಸರಕಾರ ಮಾಡಲು ಸಾಧ್ಯ ಎಂದು ಅವರಿಗೆ ಹೇಳಿದ್ದೇನೆ. ಹಿಂದಿನ ಜನತಾ ಪರಿವಾರದಂತೆ ಆಗಬೇಕಿದೆ. ಅಂದಿನ ರಾಜಕೀಯ ಇಲ್ಲ. ಇಂದಿನ ಕಾಲದಲ್ಲಿ ದುಡ್ಡು ಕೊಟ್ಟು ಜನರನ್ನು ಸೇರಿಸುತ್ತಾರೆ. ಯಡಿಯೂರಪ್ಪ, ಸಿದ್ದರಾಮಯ್ಯ ನನಗಿಂತಲೂ ಜೂನಿಯರ್ಸ್, ಅವರ ಅದೃಷ್ಟಕ್ಕೆ ಮುಖ್ಯಮಂತ್ರಿ ಆದರು. ನಮ್ಮ ಹಣೆಬರಹ ಇಷ್ಟಿದೆ.

ವಿಧಾನಪರಿಷತ್ ಸದಸ್ಯ ಶ್ರೀಕಂಠೇಗೌಡ ಮಾತನಾಡಿ, ಈಶಾನ್ಯ ಭಾಗದ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ತಿಮ್ಮಯ್ಯ ಪುರ್ಲೆ ಅವರು ಅಭ್ಯರ್ಥಿಯಾಗಿದ್ದಾರೆ. ಜೆಡಿಎಸ್ ಅಧಿಕಾರಕ್ಕೆ ಬಂದಾಗ ಶಿಕ್ಷಕರ ಕ್ಷೇತ್ರಕ್ಕೆ ಉತ್ತಮ ಸೇವೆ ಸಲ್ಲಿಸಲಾಗಿದೆ. ಬಿಜೆಪಿ ಹೇಳಿಕೊಳ್ಳುವ ಕೆಲಸಗಳನ್ನು ಶಿಕ್ಷಕರ ಕ್ಷೇತ್ರ ಮತ್ತು ಪದವೀಧರರಿಗೆ ಮಾಡಿಲ್ಲ‌ ಎಂದರು.

ಲಂಚವಿಲ್ಲದೆ ಪಾರದರ್ಶಕವಗಿ ನೇಮಕಾತಿ ನಡೆಸಿದ ಸಾಧನೆ ಮಾಡಿದ್ದೇವೆ. ಶಿಕ್ಷಕರ ಮೀಸಲಾತಿಯಲ್ಲಿ ಮಹಿಳೆಯರಿಗೆ ಶೆ.50ರಷ್ಟು ಮೀಸಲು ನೀಡಲಾಗಿದೆ. ಮೊರಾರ್ಜಿ ದೇಸಾಯಿ ಶಾಲೆ ಆರಂಭ ಮಾಡಿದ್ದೇವೆ. ವರ್ಗಾವಣೆಗೆ ಕೌನ್ಸೆಲಿಂಗ್ ಮೂಲಕ ಮಾಡಲು ಆದೇಶ ತರಲಾಗಿತ್ತು. ಸರಕಾರಿ ಶಾಲಾ ಕಾಲೇಜುಗಳನ್ನು ಆರಂಭಿಸಲಾಯಿತು. ಖಾಸಗಿ ಶಾಲೆಗಳ ಅನುದಾನ ವಿಸ್ತರಿಸಲಾಯಿತು. ಇದು 36 ಸಾವಿರ ಜನರಿಗೆ ನೆರವಾಯಿತು.

ಮುಖ್ಯಮಂತ್ರಿಗಳು ಈವರೆಗೆ ಅನುದಾನಿತ ಶಾಲೆಗಳ ಶಿಕ್ಷಕರಿಗೆ ವೇತನ ನೀಡಲಿಲ್ಲ‌. ಇದರಿಂದ ಶಿಕ್ಷಕರು ಆತ್ಮಹತ್ಯೆಯೂ ಮಾಡಿಕೊಂಡರು. ಕೋವಿಡ್ ಗೂ ಬಲಿಯಾದರು‌. ಶಿಕ್ಷಕರ ಕ್ಷೇತ್ರಕ್ಕೂ ರಾಜಕಾರಣಿಗಳು ಯಾಕೆ ಬರಬೇಕು ?. ಇದನ್ನಾದರೂ ಶಿಕ್ಷಕರಿಗೆ ಬಿಟ್ಟು ಬಿಡಿ. ಶಿಕ್ಷಕರಾಗಿರುವ ನಮ್ಮ ಅಭ್ಯರ್ಥಿಗೆ ಮತ ನೀಡಬೇಕು‌‌ ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.