ಬಳ್ಳಾರಿ ಜಿಲ್ಲೆ ವಿಭಜನೆ ಖಂಡಿಸಿ ಬಂದ್ ಗೆ ಕರೆ: ರಸ್ತೆ ತಡೆದು ಪ್ರತಿಭಟನೆ !
Team Udayavani, Nov 26, 2020, 8:23 AM IST
ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯ ವಿಭಜನೆ ಖಂಡಿಸಿ, ಅಖಂಡ ಬಳ್ಳಾರಿ ಜಿಲ್ಲೆಯಾಗಿ ಉಳಿಸುವಂತೆ ಆಗ್ರಹಿಸಿ ಬಳ್ಳಾರಿ ಬಂದ್ ಗೆ ಕರೆ ನೀಡಿದ್ದ ಅಖಂಡ ಬಳ್ಳಾರಿ ಜಿಲ್ಲೆ ಹೋರಾಟ ಸಮಿತಿ ಕಾರ್ಯಕರ್ತರು ನಗರದ ಗಡಗಿ ಚನ್ನಪ್ಪ ವೃತ್ತದಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ರಸ್ತೆ ತಡೆ ನಡೆಸಿದರು.
ನಗರದ ಗಡಗಿ ಚನ್ನಪ್ಪ ವೃತ್ತದಲ್ಲಿ ಜಮಾಯಿಸಿದ ವಿವಿಧ ಕನ್ನಡಪರ, ರೈತಪರ 15ಕ್ಕೂ ಹೆಚ್ಚು ಸಂಘಟನೆಗಳ ಕಾರ್ಯಕರ್ತರು ಟೈರ್ ಗೆ ಬೆಂಕಿ ಹಚ್ಚಿ ಬಂದ್ ಚಾಲನೆ ನೀಡಿದರು. ಬಳಿಕ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ವಾಹನ ತಡೆದರು.
ಬಳ್ಳಾರಿ ಬಂದ್ ಪೂರ್ವ ನಿಯೋಜಿತವಾಗಿದ್ದ ಹಿನ್ನೆಲೆಯಲ್ಲಿ ಬೆಳ್ಳಂಬೆಳಗ್ಗೆ ನಗರದ ಪ್ರಮುಖ ರಸ್ತೆಯಲ್ಲಿ ಔಷಧ ಮಳಿಗೆಯನ್ನು ಹೊರತುಪಡಿಸಿ ಯಾವುದೇ ವಾಣಿಜ್ಯ ಮಳಿಗೆಗಳು ತೆರೆದಿರಲಿಲ್ಲ. ಬಂದ್ ಆಟೋ ಚಾಲಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದರಿಂದ ಬಹುತೇಕ ಅಟೋಗಳು ಸ್ಥಗಿತಗೊಂಡಿದ್ದವು.
ಇದನ್ನೂ ಓದಿ: ನಿವಾರ್ ಅಬ್ಬರ-ಜನಜೀವನ ತತ್ತರ: ತ. ನಾಡು, ಪುದುಚೇರಿಯಲ್ಲಿ ಭಾರೀ ವರ್ಷಧಾರೆ !
ಬಂದ್ ವೇಳೆ ಯಾವುದೇ ಅಹಿತಕರ ಘಟನೆಗಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿರುವ ಪೊಲೀಸ್ ಇಲಾಖೆ ವೃತ್ತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಸಹ ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ.
ನಗರದ ಆಯಕಟ್ಟಿ ಸ್ಥಳದಲ್ಲಿ ಹದ್ದಿನ ಕಟ್ಟಿರುವ ಪೊಲೀಸ್ ಇಲಾಖೆ 3 ಡಿವೈಎಸ್ ಪಿ, 18 ಸಿಪಿಐ, 40 ಪಿಎಸ್ಐ, 200 ಪೊಲೀಸ್ ಪೇದೆ, 3 ಡಿಎಆರ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ.
ಇದನ್ನೂ ಓದಿ: ಮುಖ್ಯಮಂತ್ರಿಗಳೇ ಗಮನಿಸಿ: ಪ್ರಸಿದ್ಧ ಮಹದೇಶ್ವರ ಬೆಟ್ಟದಲ್ಲಿ ಸುಸಜ್ಜಿತ ಆಸ್ಪತ್ರೆಯೇ ಇಲ್ಲ !
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
GST ನೋಂದಣಿಗಾಗಿ ಲಂಚ ಸ್ವೀಕರಿಸುತ್ತಿದ್ದ ಡಾಟಾ ಎಂಟ್ರಿ ಆಪರೇಟರ್ ಎಸಿಬಿ ಬಲೆಗೆ
ಬೈಪಾಸ್ ರಸ್ತೆ ಅಗಲೀಕರಣಕ್ಕೆ ಒತ್ತಾಯಿಸಿ ಟೋಲ್ಗೇಟ್ಗೆ ಮುತ್ತಿಗೆ, ಪೊಲೀಸರ ಜತೆ ಚಕಮಕಿ
ಈಗಿರುವ ಎಲ್ಲಾ ಸಚಿವರನ್ನು ಕೈಬಿಟ್ಟು, ಹೊಸ ಸಂಪುಟ ರಚಿಸಿ: ಬಿಜೆಪಿ ಶಾಸಕ ಶಿವನಗೌಡ ನಾಯಕ್
ಮೈಸೂರಿಗೆ ಬಂದು ಪಕ್ಷದಿಂದ ಹೊರಗೆ ಹಾಕುತ್ತೇನೆಂದು ಕುಮಾರಸ್ವಾಮಿ ಹೇಳಿದ್ದರು: ಜಿ.ಟಿ.ದೇವೇಗೌಡ
ತುಮಕೂರು: ಹಣದ ಸಮೇತ ಎಟಿಎಂ ಯಂತ್ರವನ್ನೇ ಹೊತ್ತೊಯ್ದ ಕಳ್ಳರು ;ಪೊಲೀಸರಿಂದ ಕಾರ್ಯಾಚರಣೆ
MUST WATCH
ಹೊಸ ಸೇರ್ಪಡೆ
ಅನುದಾನ ಲ್ಯಾಪ್ಸ್ ಆಗದಂತೆ ಎಚ್ಚರ ವಹಿಸಿ: ಶಾಸಕ ಡಾ|ಅವಿನಾಶ
GST ನೋಂದಣಿಗಾಗಿ ಲಂಚ ಸ್ವೀಕರಿಸುತ್ತಿದ್ದ ಡಾಟಾ ಎಂಟ್ರಿ ಆಪರೇಟರ್ ಎಸಿಬಿ ಬಲೆಗೆ
ತಂತ್ರಾಂಶ ಬಳಸಿ ಭವಿಷ್ಯದ ಕನ್ನಡ ಕಟ್ಟಿ: ಟಿ.ಎಸ್.ನಾಗಾಭರಣ
ಬೈಪಾಸ್ ರಸ್ತೆ ಅಗಲೀಕರಣಕ್ಕೆ ಒತ್ತಾಯಿಸಿ ಟೋಲ್ಗೇಟ್ಗೆ ಮುತ್ತಿಗೆ, ಪೊಲೀಸರ ಜತೆ ಚಕಮಕಿ
ಜನರ ಮಧ್ಯೆ ತೆರಳಿ ಕಾಂಗ್ರೆಸ್ ಹೋರಾಟ; ವಿಭಾಗ ಮಟ್ಟದ ಸಂಕಲ್ಪ ಸಮಾವೇಶ