ಉದ್ಯೋಗ ಖಾತ್ರಿ ಮೇಲೆ ಅಭ್ಯರ್ಥಿಗಳ ಕಣ್ಣು!
ಕಾಮಗಾರಿ ಅನುಮೋದನೆ ನೀಡುವಲ್ಲಿ ಗ್ರಾಪಂ ಸದಸ್ಯರ ಪಾತ್ರ ಪ್ರಮುಖ,ರಂಗೇರಿದ ಚುನಾವಣೆ ಕಾವು
Team Udayavani, Dec 16, 2020, 6:57 PM IST
ಸಿರುಗುಪ್ಪ: ತಾಲೂಕಿನಲ್ಲಿ ನರೇಗಾ (ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ) ಕಾಮಗಾರಿಗಳಿಗೆ ಮಂಜೂರಾಗುವ ಅನುದಾನದ ಮೇಲೆ ಕಣ್ಣಿಟ್ಟಿರುವ ರಾಜಕೀಯ ಮುಖಂಡರು ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ. ಇದರಿಂದಾಗಿ ಈ ಬಾರಿಯ ಗ್ರಾಪಂ ಚುನಾವಣೆಯಲ್ಲಿ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ.
ತಾಲೂಕಿನ 27 ಗ್ರಾಮ ಪಂಚಾಯಿತಿಗಳ 489 ಸ್ಥಾನಗಳಿಗೆ ಡಿ. 22ರಂದು ಚುನಾವಣೆನಡೆಯಲಿದೆ. ಮಾಜಿ ಸದಸ್ಯರ ಜತೆಗೆ ಹೊಸಬರು ಹೆಚ್ಚಾಗಿ ಸ್ಪರ್ಧಿಸುತ್ತಿರುವುದು ಕಂಡುಬರುತ್ತಿದೆ.ಹಳ್ಳಿ ರಾಜಕಾರಣ ದಿನದಿಂದ ದಿನಕ್ಕೆ ರಂಗೇರುತ್ತಿದೆ.ಅನೇಕ ಹಳ್ಳಿಗಳಲ್ಲಿ ಜಾತಿ ಮತ್ತು ಕೋಮು ಆಧಾರಿತಗೆಲುವಿನ ಲೆಕ್ಕಾಚಾರ ಶುರುವಾಗಿದೆ. ಕೆಲವು ಗ್ರಾಮಗಳಲ್ಲಿ ಸ್ಪರ್ಧಾಕಾಂಕ್ಷಿಗಳು ಅವಿರೋಧ ಆಯ್ಕೆಗೆ ಕಸರತ್ತು ನಡೆಸಿದ್ದರು. ದೇವಸ್ಥಾನ ಅಭಿವೃದ್ಧಿ ಸಮಿತಿಗೆಲಕ್ಷಾಂತರ ರೂ. ಹಣ ನೀಡಲು ಮುಂದಾಗಿದ್ದಾರೆ. ಹಳ್ಳಿಗಳ ಅಭಿವೃದ್ಧಿಯ ಹಿತದೃಷ್ಟಿಯಿಂದ ನರೇಗಾ ಯೋಜನೆಯಲ್ಲಿ ಕೃಷಿ ಜಮೀನು ಬದು ನಿರ್ಮಾಣ, ಕೃಷಿ ಹೊಂಡ, ಎರೆಹುಳು ತೊಟ್ಟಿ, ಬಚ್ಚಲುಗುಂಡಿ,ಪೌಷ್ಠಿಕ ಕೈತೋಟ, ತೆಂಗುಪುನಶ್ಚೇತನ, ತೆಂಗು ಪ್ರದೇಶವಿಸ್ತರಣೆ, ಬಾಳೆ, ಮಾವು, ಸಪೋಟ, ಸೀಬೆ, ನುಗ್ಗೆ, ಹುಣಸೆ, ಡ್ರ್ಯಾಗನ್ ಫ್ರೊಟ್, ದಾಳಿಂಬೆ, ಪಪ್ಪಾಯ ಬೆಳೆಯಲು, ರೇಷ್ಮೆಹುಳು ಸಾಕಾಣಿಕೆ, ದನದ ಕೊಟ್ಟಿಗೆ, ಕುರಿಶೆಡ್ ನಿರ್ಮಾಣ ಮತ್ತು ಕಲ್ಯಾಣಿ ಪುನಶ್ಚೇತನ, ಆಟದ ಮೈದಾನ ನಿರ್ಮಾಣ, ಕೆರೆ ಹೂಳೆತ್ತುವುದು, ರಾಜಕಾಲುವೆ ಅಭಿವೃದ್ಧಿ ಕೆಲಸಕ್ಕೆ ಅವಕಾಶ ನೀಡಲಾಗುತ್ತಿದೆ. ನರೇಗಾ ಯೋಜನೆಗೆ ಗ್ರಾಮ ಪಂಚಾಯಿತಿಗಳಿಗೆ ದೊಡ್ಡಮಟ್ಟದ ಅನುದಾನ ಮಂಜೂರಾಗುತ್ತಿದೆ. ಇಂಥ ಕಾಮಗಾರಿಗಳ ಅನುಮೋದನೆ ನೀಡುವಲ್ಲಿ ಗ್ರಾಪಂ ಸದಸ್ಯರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.
ಜನಸೇವೆ ಹೆಸರಿನಲ್ಲಿ ಗ್ರಾಮದಲ್ಲಿ ಪ್ರಭಾವ ಬೀರುವ ಅವಕಾಶವು ಸದಸ್ಯರಿಗೆ ಸಿಕ್ಕಿದೆ. ಇದರಿಂದಾಗಿ ಸದಸ್ಯರಾಗಲು ಅನೇಕರು ಆಸೆಪಡುತ್ತಿದ್ದಾರೆ. ನರೇಗಾ ಯೋಜನೆಯ ಜಾಬ್ಕಾರ್ಡ್ ಗಳು ಫಲಾನುಭವಿಗಳಿಗಿಂತ ಹೆಚ್ಚಾಗಿ ಗ್ರಾಮ ಪಂಚಾಯಿತಿ ಸದಸ್ಯರ ಬಳಿ ಇವೆ. ಗುತ್ತಿಗೆದಾರರ ಜತೆಗಿನ ಜನಪ್ರತಿನಿಧಿ ಗಳ ಹೊಂದಾಣಿಕೆ ಗ್ರಾಮೀಣ ಪ್ರದೇಶಗಳಲ್ಲಿ ಗುಟ್ಟಾಗಿ ಉಳಿದಿಲ್ಲ, ಗ್ರಾಮ ಪಂಚಾಯಿತಿಗೆ ಮಂಜೂರಾಗುವ ಅನುದಾನದಲ್ಲಿ ಬಹುತೇಕ ಖರ್ಚಾಗುತ್ತಿದೆ, ಆದರೆ ಅಭಿವೃದ್ಧಿ ಮಾತ್ರ ಕಣ್ಣಿಗೆ ಕಾಣುತ್ತಿಲ್ಲ.
ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೋಟ್ಯಾಂತರ ರೂ. ಹಣ ಗ್ರಾಪಂಗಳಿಗೆ ಹರಿದು ಬರುತ್ತಿದೆ. ಆದರೆ ಆ ಹಣವು ವೆಚ್ಚ ವಾದರೂ ಅಭಿವೃದ್ಧಿ ಮಾತ್ರ ಹಳ್ಳಿಗಳಲ್ಲಿ ಮರೀಚಿಕೆಯಾಗಿದೆ ಎಂದು ಬಗ್ಗೂರು ಗ್ರಾಮಸ್ಥ ವಾ. ಹುಲುಗಯ್ಯ ಆರೋಪಿಸಿದ್ದಾರೆ.
-ಆರ್.ಬಸವರೆಡ್ಡಿ ಕರೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ