ಗಾಂಧೀಜಿಗೆ ಅವಮಾನಿಸಿದವರನ್ನು ಬಂಧಿಸಿ


Team Udayavani, Feb 5, 2019, 11:02 AM IST

bell-2.jpg

ಬಳ್ಳಾರಿ: ಉತ್ತರ ಪ್ರದೇಶದಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಭಾವಚಿತ್ರಕ್ಕೆ ಪಿಸ್ತೂಲ್‌ನಿಂದ ಶೂಟ್ಮಾಡಿ ಅಪಮಾನ ಮಾಡಿದ ಹಿಂದೂ ಮಹಾಸಭಾ ಕಾರ್ಯಕರ್ತರನ್ನು ಕೂಡಲೇ ಬಂಧಿಸಿ, ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್‌ಕಾರ್ಯಕರ್ತರು ನಗರದ ಗಡಗಿ ಚನ್ನಪ್ಪ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಗಡಗಿ ಚನ್ನಪ್ಪ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್‌ ಕಾರ್ಯಕರ್ತರು ಕಿಡಿಗೇಡಿಗಳ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮಹಾತ್ಮಗಾಂಧೀಜಿ ಭಾವಚಿತ್ರಕ್ಕೆ ಪಿಸ್ತೂಲ್‌ನಿಂದ ಶೂಟ್ ಮಾಡಿ ಅಪಮಾನ ಮಾಡಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.

ಕಳೆದ ಜ.30 ರಂದು ಹುತಾತ್ಮರ ದಿನಾಚರಣೆ ನಿಮಿತ್ತ ಉತ್ತರ ಪ್ರದೇಶದಲ್ಲಿ ಹಿಂದೂ ಮಹಾಸಭಾದಿಂದ ಅಪಮಾನ ನಡೆದಿದೆ. ಹುತಾತ್ಮರ ಜಯಂತಿಯನ್ನು ಆಚರಿಸಿದ ಹಿಂದೂ ಮಹಾಸಭಾದ ಕಾರ್ಯಕರ್ತರು ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಭಾವಚಿತ್ರಕ್ಕೆ ಪಿಸ್ತೂಲ್‌ನಿಂದ ಶೂಟ್ ಮಾಡಿದ್ದಾರೆ. ಜತೆಗೆ ಭಾವಚಿತ್ರಕ್ಕೆ ಪೆಟ್ರೋಲ್‌ ಸುರಿದು ಬೆಂಕಿಹಚ್ಚಿ ಅಮಾನವೀಯವಾಗಿ ಅಪಮಾನ ಮಾಡಿರುವುದು ಖಂಡನೀಯವಾಗಿದೆ. ಅಲ್ಲದೇ, ಮಹಾತ್ಮಗಾಂಧೀಜಿಯವರನ್ನು ಕೊಲೆ ಮಾಡಿದ್ದ ನಾಥುರಾಮ್‌ ಗೋಡ್ಸೆಯನ್ನು ಮಹಾತ್ಮ ಎಂದು ಜೈಕಾರ ಘೋಷಿಸುವ ಮೂಲಕ ದೇಶದ್ರೋಹಿಗಳಂತೆ ವರ್ತಿಸಿದ್ದಾರೆ. ಇದು ಅತ್ಯಂತ ಖಂಡನೀಯವಾಗಿದ್ದು, ಕೂಡಲೇ ಅಲ್ಲಿನ ಸ್ಥಳೀಯ ಬಿಜೆಪಿ ಸರ್ಕಾರ ತಪ್ಪಿತಸ್ಥರನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮಾಜಿ ಶಾಸಕ ನಾರಾ ಸೂರ್ಯನಾರಾಯಣರೆಡ್ಡಿ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮಗಾಂಧೀಜಿಯವರ ಭಾವಚಿತ್ರಕ್ಕೆ ಈ ರೀತಿ ಅಪಮಾನ ಮಾಡುವುದು ನಾಚಿಕೆಗೇಡಿನ ಸಂಗತಿ. ಹಿಂದೂ ಮಹಾಸಭಾದವರ ಉಪಟಳ ಹೀಗೆ ಮುಂದುವರಿದರೆ ಮುಂದಿನ ದಿನಗಳಲ್ಲಿ ರೌಡಿಗಳೇ ರಾಜ್ಯವನ್ನು ಆಳಲಿದ್ದಾರೆ. ಹಿಂದೂ ಮಹಾಸಭಾದ ಉಪಟಳಕ್ಕೆ ಈಗಲೇ ಕಡಿವಾಣ ಬೀಳಬೇಕು. ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್‌ ಹಿರಿಯ ಮುಖಂಡ ಕಲ್ಲುಕಂಬ ಪಂಪಾಪತಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್‌ ನಗರಾಧ್ಯಕ್ಷ ಮಹ್ಮದ್‌ ರಫೀಕ್‌, ಕಾರ್ಯಕರ್ತರಾದ ವೆಂಕಟೇಶ್‌, ಅರುಣ್‌ಕುಮಾರ್‌, ರವಿ, ಎಲ್‌.ಮಾರೆಣ್ಣ, ಪದ್ಮಾ, ಸಂಗನಕಲ್ಲು ವಿಜಯಕುಮಾರ್‌, ಎಂ.ಪ್ರಭಂಜನ್‌ಕುಮಾರ್‌ ಸೇರಿದಂತೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.