ನಕಲಿ ವೈದ್ಯೆ ವಿರುದ್ಧ ಪ್ರಕರಣ ದಾಖಲು


Team Udayavani, Sep 5, 2020, 6:23 PM IST

ನಕಲಿ ವೈದ್ಯೆ ವಿರುದ್ಧ ಪ್ರಕರಣ ದಾಖಲು

ಬಳ್ಳಾರಿ: ನಗರದ ರೂಪನಗುಡಿ ರಸ್ತೆಯ ಮನೆಯೊಂದರಲ್ಲಿ ಕ್ಲಿನಿಕ್‌ ನಡೆಸುತ್ತಿದ್ದ ನಕಲಿ ವೈದ್ಯರೊಬ್ಬರನ್ನು ನೆರೆಹೊರೆಯವರ ಸಹಕಾರದಿಂದ ಪತ್ತೆಹಚ್ಚಿದ್ದ ಆರೋಗ್ಯ ಇಲಾಖೆ ಅಧಿಕಾರಿಗಳು ಕ್ಲಿನಿಕ್‌ನ್ನು ಬಂದ್‌ ಮಾಡಿ, ನಕಲಿ ವೈದ್ಯರ ವಿರುದ್ಧ ನಗರದ ಬ್ರೂಸ್‌ ಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದೆ.

ನಾಜೀನ್‌ ನಕಲಿ ವೈದ್ಯೆ. ನೆರೆಯ ಆಂಧ್ರ ಪ್ರದೇಶದಲ್ಲಿ ಪ್ಯಾರಾಮೆಡಿಕಲ್‌ ವ್ಯಾಸಂಗ ಮಾಡಿರುವ ಪ್ರಮಾಣ ಪತ್ರವನ್ನು ಹೊಂದಿರುವ ನಾಜೀನ್‌ ಎನ್ನುವವರು ನಗರದ ರೂಪನಗುಡಿ ರಸ್ತೆಯಲ್ಲಿ ಮನೆಯೊಂದರಲ್ಲಿ ಕಳೆದ ಹಲವು ವರ್ಷಗಳಿಂದ ವೈದ್ಯರೆಂದು ಹೇಳಿಕೊಂಡು ಕ್ಲಿನಿಕ್‌ ತೆರೆದು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಚಿಕಿತ್ಸೆಗಾಗಿ ಬಂದ ರೋಗಿಗಳು ನೆರೆಹೊರೆಯ ಮನೆಗಳ ಮುಂದೆಯೇ ವಾಂತಿ ಮಾಡಿಕೊಳ್ಳುವುದು, ವಯೋವೃದ್ಧ ರೋಗಿಗಳು ಸಮೀಪದಲ್ಲೇ ಮೂತ್ರ ವಿಸರ್ಜನೆ ಮಾಡಿಸುವುದು, ಬಳಸಿದ ವಸ್ತುಗಳನ್ನು ಪಕ್ಕದ ತಿಪ್ಪೆಗುಂಡಿಯಲ್ಲೇ ಎಸೆಯುವುದು ಸೇರಿ ಇನ್ನಿತರೆ ಸಮಸ್ಯೆಗಳು ನೆರೆಹೊರೆಯವರಿಗೆ ಕಿರಿಕಿರಿ ಉಂಟು ಮಾಡಿದೆ. ಈ ಕುರಿತು ನಾಜೀನ್‌ ಅವರಿಗೆ ಮನವರಿಕೆ ಮಾಡಿದರೂ ಕೇಳಿಲ್ಲ. ಇದರಿಂದ ಬೇಸತ್ತ ನೆರೆಹೊರೆಯವರು ಆರೋಗ್ಯ ಇಲಾಖೆಯ ಗಮನ ಸೆಳೆದಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ್ದ ಆರೋಗ್ಯ ಇಲಾಖೆ ಅಧಿಕಾರಿಗಳು ನಾಜೀನ್‌ ಅವರ ಪ್ರಮಾಣ ಪತ್ರಗಳನ್ನು ಪರಿಶೀಲಿಸಿ ನಕಲಿ ವೈದ್ಯೆ ಎಂದು ಖಚಿತಪಡಿಸಿದ್ದಾರೆ.

ಆಂಧ್ರ ಪ್ರದೇಶದಲ್ಲಿ ಪ್ಯಾರಾಮೆಡಿಕಲ್‌ ವ್ಯಾಸಂಗದ ಪ್ರಮಾಣ ಪತ್ರದಿಂದ ಬಳ್ಳಾರಿಯಲ್ಲಿ ಕ್ಲಿನಿಕ್‌ ತೆರೆದು ಚಿಕಿತ್ಸೆ ನೀಡಲು ಅನುಮತಿ ನೀಡುವಂತೆ ಅನುಮತಿ ನೀಡಿದವರು ಯಾರು ಎಂದು ಪ್ರಶ್ನಿಸಿದರೆ, ಅದಕ್ಕೆ ನಾಜೀನ್‌ ಅವರು ನನಗೆ ಕ್ಲಿನಿಕ್‌ ನಡೆಸಲು ಅನುಮತಿ ಇದೆ ಎಂದು ಡ್ರಗ್‌ ಕಂಟ್ರೋಲ್‌ನವರು ದಾಳಿ ನಡೆಸಿ ಔಷಧ ಬಳಕೆಗೆ ನಿರ್ಬಂಧ ಹೇರಿ ನೀಡಿದ್ದ ದಾಖಲೆಗಳನ್ನು ತೋರಿಸಿದ್ದಾರೆ. ಮೇಲಾಗಿ ವೈದ್ಯಾಧಿಕಾರಿಗಳ ಜತೆಗೂ ವಾಗ್ವಾದ ನಡೆಸಿದ ಅವರು, ಎಲ್ಲ ಆರ್‌ ಎಂಪಿ ಕ್ಲಿನಿಕ್‌ಗಳನ್ನು ಬಂದ್‌ ಮಾಡಿದರೆ ಮಾತ್ರ ನನ್ನ ಕ್ಲಿನಿಕ್‌ನ್ನು ಬಂದ್‌ ಮಾಡುತ್ತೇನೆ ಎಂದು ದಬಾಯಿಸಿದರು.

ಬಳಿಕ ಕ್ಲಿನಿಕ್‌ನ್ನು ಪರಿಶೀಲಿಸಿದ ವೈದ್ಯಾಧಿಕಾರಿ ಡಾ| ರವಿಚಂದ್ರ ಅವರು, ಅಲ್ಲಿದ್ದ ಗ್ಲೂಕೊಸ್‌ ಬಾಟಲ್‌ ಸೇರಿ ಇನ್ನಿತರೆ ಔಷಧ, ಮಾತ್ರೆಗಳನ್ನು ಸೀಜ್‌ ಮಾಡಿ ಕೊಂಡೊಯ್ದರು. ಬಳಿಕ ಬ್ರೂಸ್‌ ಪೇಟೆ ಪೊಲೀಸ್‌ ಠಾಣೆಯಲ್ಲಿ ನೀಡಿದ ದೂರಿನ ಮೇರೆಗೆ ನಕಲಿ ವೈದ್ಯೆ ನಾಜೀನ್‌ ವಿರುದ್ಧ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.