27ರಿಂದ ಬಾಹುಬಲಿ ಮೂರ್ತಿ ಪ್ರತಿಷ್ಠಾಪನೆ -ಮಸ್ತಕಾಭಿಷೇಕ

ಜೈನ ಪರಂಪರೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಒಟ್ಟು 4 ದಿನಗಳ ಕಾರ್ಯಕ್ರಮ

Team Udayavani, Jan 25, 2020, 4:10 PM IST

25-January-18

ಚಳ್ಳಕೆರೆ: ನಗರದ ಮಹದೇವಿ ರಸ್ತೆಯ ಪುಣ್ಯನಗರಿಯಲ್ಲಿ ತಾಲೂಕು ಜೈನ ಸಮುದಾಯದ ವತಿಯಿಂದ ಭಗವಾನ್‌ 1008 ಶ್ರೀಪಾಶ್ವನಾಥ ಜಿನಮಂದಿರದ ಸ್ವರ್ಣಮಹೋತ್ಸವದ ನಿಮಿತ್ತ ಶ್ರೀಮದ್‌ ಜಿನೇಂದ್ರ ಪಂಚಕಲ್ಯಾಣ ನೂತನ ಏಕಶಿಲಾ ಭಗವಾನ್‌ 1008 ಶ್ರೀಬಾಹುಬಲಿ ಸ್ವಾಮಿಯ ಮೂರ್ತಿ ಪ್ರತಿಷ್ಠಾಪನೆ ಮತ್ತು ಮಸ್ತಕಾಭಿಷೇಕ ಮಹೋತ್ಸವನ್ನು ಜ.27ರಿಂದ 30ರ ತನಕ ಜೈನಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಜೈನ ಸಮಾಜದ ಹಿರಿಯ ಮುಖಂಡ, ಮಾಜಿ ಸಚಿವ ಡಿ.ಸುಧಾಕರ್‌ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಅವರು, ಚಳ್ಳಕೆರೆ ನಗರದಲ್ಲಿ ಇದೇ ಮೊದಲ ಬಾರಿಗೆ ಬಾಹುಬಲಿ ಸ್ವಾಮಿಯ ಪ್ರತಿಷ್ಠಾಪನೆ, ಮಸ್ತಕಾಭಿಷೇಕ ಮತ್ತು ತಾಲೂಕು ಜೈನ ಸಮಾಜದ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜೈನ ಪರಂಪರೆ ಬಗ್ಗೆ ಸಾರ್ವಜನಿಕರಲ್ಲಿ ಮತ್ತಷ್ಟು ಜಾಗೃತಿ ಮೂಡಿಸಲು
ಒಟ್ಟು 4 ದಿನಗಳ ಕಾಲ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸರ್ವರೂ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಿಕೊಡುವಂತೆ ಮನವಿ ಮಾಡಿದ್ಧಾರೆ.

ಈ ಪುಣ್ಯ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡಿ, ಭಕ್ತರಿಗೆ ಆಶೀರ್ವಾದ ನೀಡಲು ನಾಡಿನ ವಿವಿಧೆಡೆಯಲ್ಲಿರುವ ಜೈನಮುನಿಗಳು ಹಾಗೂ ಜೈನ ಸಮುದಾಯದ ಎಲ್ಲಾ ಹಿರಿಯರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಸಹಕಾರ ನೀಡುತ್ತಿದ್ದಾರೆ. ತಾಲೂಕು ಜೈನ ಸಮಾಜದ ವತಿಯಿಂದ ಕಾರ್ಯಕ್ರಮದ ಯಶಸ್ವಿಗೆ ಎಲ್ಲಾ ರೀತಿಯ ಸಹಕಾರಗಳನ್ನು ನೀಡಲು ಸಮುದಾಯ ಮುಂದೆ ಬಂದಿದೆ. ಜೈನ ಸಮುದಾಯದ ಈ ಮಹತ್ವಪೂರ್ಣ ಕಾರ್ಯಕ್ರಮಕ್ಕೆ ಮುನಿಶ್ರೀ108 ಅಮೋಘಕೀರ್ತಿಜೀ ಮಹಾರಾಜರು ಮತ್ತು ಮುನಿಶ್ರೀ108 ಅಮರಕೀರ್ತಿ ಶ್ರೀಮಹಾರಾಜರು ಜ.23ರಂದು ಚಳ್ಳಕೆರೆಗೆ ಆಗಮಿಸಿದ್ದು, ಅವರನ್ನು ಬೆಂಗಳೂರು ರಸ್ತೆಯ ಪದ್ಮಚಿತ್ರಮಂದಿರದ ಬಳಿ ಸಮುದಾಯದ ಪರವಾಗಿ ಮಂಗಳ
ವಾದ್ಯಗಳೊಂದಿಗೆ ಸ್ವಾಗತಿಸಿ ಮೆರವಣಿಗೆ ಮೂಲಕ ಪುರಪ್ರವೇಶ ಮಾಡಿಸಲಾಯಿತು ಎಂದರು.

ಕಾರ್ಯಕ್ರಮಕ್ಕೆ 108 ಪುಣ್ಯಸಾಗರಮುನಿ ಮಹಾರಾಜರು ಜ.25ರ ಶನಿವಾರ ಬೆಳಗ್ಗೆ ಚಳ್ಳಕೆರೆ ನಗರಕ್ಕೆ ಆಗಮಿಸಲಿದ್ದು, ಅವರನ್ನು ಬೆಂಗಳೂರು ರಸ್ತೆಯ ಮಾರುಕಟ್ಟೆ ಆವರಣದಿಂದ ಸಮಸ್ತ ಜೈನಸಮುದಾಯದ ಪರವಾಗಿ ಸ್ವಾಗತಿಸಲಾಗುವುದು ಎಂದರು.

ಜ.27ರ ಸೋಮವಾರ ಸಂಜೆ 7ಕ್ಕೆ ಜೈನಮಂದಿರದಲ್ಲಿ ನಡೆಯುವ ಧಾರ್ಮಿಕ ಸಭೆಗೆ ಮುಖ್ಯ ಅತಿಥಿಗಳಾಗಿ ಶಾಸಕ ಟಿ.ರಘುಮೂರ್ತಿ, ಬೆಳಗಾವಿ ಶಾಸಕ ಅಭಯ್‌ಕುಮಾರ್‌ ಪಾಟೀಲ್‌, ಮಾಜಿ ಶಾಸಕರಾದ ಇಳ್ಕಲ್‌ ವಿಜಯಕುಮಾರ್‌, ಸಂಜಯ ಪಾಟೀಲ, ತಹಶೀಲ್ದಾರ್‌
ಎಂ.ಮಲ್ಲಿಕಾರ್ಜುನ್‌, ವೀರಶೈವ ಸಮಾಜ ಅಧ್ಯಕ್ಷ ಎಚ್‌.ಗಂಗಣ್ಣ, ಆರ್ಯವೈಶ್ಯ ಸಮಾಜದ ಅಧ್ಯಕ್ಷ ರಾಮಮೋಹನ್‌, ವಾಲ್ಮೀಕಿ ಸಮಾಜದ ಅಧ್ಯಕ್ಷ ಬಂಗೆಪ್ಪಮಾಸ್ಟರ್‌ ಆಗಮಿಸುವರು.
ಜೈನ ಸಮುದಾಯದ ಧಾರ್ಮಿಕ ಕಾರ್ಯಕ್ರಮಗಳಿಗೆ ಸರ್ವರೂ ಆಗಮಿಸಿ ಯಶಸ್ವಿಗೊಳಿಸುವಂತೆ ಬಾಹುಬಲಿ ದಿಗಂಬರ ಜೈನಟ್ರಸ್ಟ್‌ ಅಧ್ಯಕ್ಷ ಡಿ.ಭರತ್‌ರಾಜ್‌, ಡಿ.ಅಂಬಣ್ಣ, ಡಿ.ಪ್ರಭಾರಕ್‌, ಡಾ.ವಿಜಯೇಂದ್ರ, ಗೌರಿಪುರ ಪಾಶ್ವನಾಥ, ಎನ್‌.ಜೆ. ವೆಂಕಟೇಶ್‌, ಸಚಿನ್‌, ದರ್ಶನ್‌, ನಾಗರಾಜು, ಕೋರಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.