ಕಗತ್ತೂರು ದಲಿತ ಕಾಲೋನಿಯಲ್ಲಿ ಸ್ವಚ್ಛತೆ ಮರೀಚಿಕೆ

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕಾಲೋನಿ ನಿವಾಸಿಗಳ ಆಕ್ರೋಶ

Team Udayavani, Feb 20, 2020, 6:22 PM IST

20-February-30

ಚನ್ನಗಿರಿ: ತಿಂಗಳುಗಳೇ ಕಳೆದರೂ ಸ್ವಚ್ಛತೆ ಭಾಗ್ಯ ಕಾಣದ ಗಬ್ಬು ನಾರುವ ಚರಂಡಿಗಳು, ನಿಂತ ನೀರಿನಿಂದಾಗಿ ನೋಡಿದಲ್ಲೆಲ್ಲ ಸೊಳ್ಳೆಗಳು. ಸಂಜೆಯಾದರೆ ಸಾಕು ಸೊಳ್ಳೆಗಳ ಕಾಟಕ್ಕೆ ಮನೆಯಿಂದ ಹೊರಗಡೆ ಬರುವುದಕ್ಕೂ ಹಿಂಜರಿಯುವ ಸ್ಥಿತಿ. ಇದು ಕಗತ್ತೂರು ಗ್ರಾಮದ ದಲಿತ ಕಾಲೋನಿ ಜನರ ನಿತ್ಯ ಗೋಳಾಟ.

ಹೌದು.. ಸ್ವಚ್ಛ ಭಾರತ ನಿರ್ಮಾಣಕ್ಕಾಗಿ ದೇಶದಲ್ಲಿಯೇ ದೊಡ್ಡಮಟ್ಟದ ಅಭಿಯಾನ ನಡೆಯುತ್ತಿದೆ. ಅದರೆ ತಾಲೂಕಿನ ಕಗತ್ತೂರು ಗ್ರಾಪಂ ವ್ಯಾಪ್ತಿಯಲ್ಲಿ ಮಾತ್ರ ಸ್ವತ್ಛತೆ ಎನ್ನುವುದು ಕಡತದಲ್ಲಿ ಮಾತ್ರ ಎನ್ನುವಂತಾಗಿದೆ. ಗ್ರಾಮದಲ್ಲಿ ದಲಿತರ ಕಾಲೋನಿ ಹೊರತುಪಡಿಸಿ ಬೇರೆ ಕಾಲೋನಿಗಳ ರಸ್ತೆಗಳು, ಚರಂಡಿ ಸ್ವಚ್ಛವಾಗಿವೆ. ದಲಿತ ಕಾಲೋನಿಗಳತ್ತ ಮಾತ್ರ ಅಧಿಕಾರಿಗಳು ತಲೆ ಹಾಕದೇ ಇರುವುದಕ್ಕೆ ಕಾಲೋನಿ ಜನ ಹಿಡಿ ಶಾಪ ಹಾಕುತ್ತಿದ್ದಾರೆ.

ಗಬ್ಬು ನಾರುವ ಚರಂಡಿಗಳು; ಕಳಪೆ ಗುಣಮಟ್ಟದ ಚರಂಡಿಗಳಲ್ಲಿ ನೀರು ಹರಿಯುವುದೇ ಇಲ್ಲ. ಕಸ ಕಟ್ಟಿಕೊಂಡು ರಸ್ತೆಮೇಲೆಲ್ಲ ನೀರು ಹರಿಯುತ್ತದೆ. ಇದರಿಂದ ಶಾಲೆಗೆ ಹೋಗುವ ಮಕ್ಕಳೂ ಕೊಳಚೆ ನೀರನ್ನು ತುಳಿದುಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಂಜೆಯಾದರೆ ಸಾಕು ಸೊಳ್ಳೆಗಳ ಕಾಟ ಶುರುವಾಗುತ್ತದೆ.

ಸಾಂಕ್ರಾಮಿಕ ರೋಗಗಳ ಭೀತಿ: ಸ್ವಚ್ಛತೆಯಿಲ್ಲದೆ ನಿಂತ ನೀರಿನಿಂದ ಡೆಂಘೀ, ಚಿಕೂನ್‌ ಗುನ್ಯಾ, ಕಾಲರಾ, ಮಲೇರಿಯಾ ಸೇರಿದಂತೆ ಅನೇಕ ರೋಗ ಹರಡುವ ಭೀತಿ ಶುರುವಾಗಿದೆ. ಈಗಾಗಲೇ ಸಣ್ಣಪುಟ್ಟ ಜ್ವರಗಳಿಂದ ಬಳಲುತ್ತಿರುವವರು ತಾಲೂಕು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಕೂಡ ಪಡೆದುಕೊಂಡಿದ್ದಾರೆ. ಬೀದಿ ನಲ್ಲಿಯಲ್ಲಿ ಬೀಡುವ ನೀರು ಹಿಡಿಯಲು ಕೂಡ ಚರಂಡಿಯಲ್ಲಿಯೇ ಕೊಡಪಾನಗಳನ್ನು ಇಟ್ಟು ತುಂಬಿಕೊಳ್ಳುವ ಪರಿಸ್ಥಿತಿ ಇದೆ. ಇಂತಹ ಶೋಚನೀಯ ಪರಿಸ್ಥಿತಿಯಲ್ಲಿ ಜೀವನ ಸಾಗಿಸುತ್ತಿರುವವರ ಸಮಸ್ಯೆಯನ್ನು ಹೇಳ್ಳೋರಿಲ್ಲ-ಕೇಳ್ಳೋರಿಲ್ಲ ಎನ್ನುವಂತಾಗಿದೆ.

ಪ್ರತಿ ವಾರಕ್ಕೊಮ್ಮೆಯಾದರೂ ಚರಂಡಿಗಳನ್ನು ಸ್ವಚ್ಛಗೊಳಿಸಿ ಬ್ಲೀಚಿಂಗ್‌ ಪೌಡರ್‌ ಹಾಕಬೇಕು ಎಂಬ ನಿಯಮವಿದೆ. ಆದರೆ ಇಲ್ಲಿಯವರೆಗೂ ಗ್ರಾಮದಲ್ಲಿ ಬ್ಲೀಚಿಂಗ್‌ ಪೌಡರ್‌ನ್ನು ಚರಂಡಿಗಳು ಕಂಡೇ ಇಲ್ಲ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತು ಗಮನಹರಿಸಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ.

ಟಾಪ್ ನ್ಯೂಸ್

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.