ಎಲ್ಲರೂ ಒಟ್ಟುಗೂಡಿದರೆ, ಎಲ್ಲೆಡೆಯೂ ಸ್ವಚ್ಛತೆ ಸಾಧ್ಯ : ಸಚಿವ ಬಿ.ಶ್ರೀರಾಮುಲು
Team Udayavani, Sep 16, 2019, 12:53 PM IST
ಬಳ್ಳಾರಿ: ಇದೇ ಸೆ.17ರಂದು ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ನಗರದ ವಿಮ್ಸ್ ಆವರಣದಲ್ಲಿ ಆರೋಗ್ಯ ಸಚಿವ ಬಿ.ಶ್ರೀರಾಮುಲು ಸ್ವಚ್ಛತಾ ಕಾರ್ಯ ನಡೆಸುವ ಮೂಲಕ ಸ್ವಚ್ಛ ಸೇವಾ ಸಪ್ತಾಹವನ್ನು ಸೋಮವಾರ ನಡೆಸಿದರು.
ವಿಮ್ಸ್ ನಿರ್ದೇಶಕರ ಹಳೆಯ ಕಚೇರಿ ಆವರಣದಲ್ಲಿ ಪೌರ ಕಾರ್ಮಿಕರೊಂದಿಗೆ ಕೆಲ ಹೊತ್ತು ಪೊರಕೆ ಹಿಡಿದು ಕಸಗುಡಿಸಿದ ಸಚಿವ ರಾಮುಲು, ಬಳಿಕ ತ್ಯಾಜ್ಯವನ್ನು ಬುಟ್ಟಿಯಲ್ಲಿ ತುಂಬಿ ಬೇರೆಡೆ ಸಾಗಿಸಿ ಸ್ವಚ್ಚತಾ ಕಾರ್ಯ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಮುಲು, ಇದೇ ಸೆ.17 ರಂದು ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನಾಚರಣೆಯಿದೆ. ಪ್ರಧಾನಿ ನರೇಂದ್ರ ಮೋದಿಯವರು ಸಹ ತಮ್ಮ ಜೀವನವನ್ನೇ ದೇಶ ಸೇವೆಗಾಗಿ ಮುಡುಪಾಗಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಬಿಜೆಪಿ ಪಕ್ಷದ ಕಾರ್ಯಕರ್ತರು, ಮುಖಂಡರು ಸೆ.14 ರಿಂದ 21 ರವರೆಗೆ ದೇಶಾದ್ಯಂತ ಸ್ವಚ್ಛ ಸೇವಾ ಸಪ್ತಾಹವನ್ನಾಗಿ ಆಚರಿಸುತ್ತಿದ್ದಾರೆ.
ಪ್ರಧಾನಿ ಮೋದಿ ಹೆಸರಲ್ಲಿ ಕೇಕ್ ಕತ್ತರಿಸಿ ಜನ್ಮದಿನ ಆಚರಿಸಿ ದುಂದುವೆಚ್ಚ ಮಾಡುವ ಬದಲಿಗೆ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳುವ ಮೂಲಕ ಮೋದಿಯವರ ಜನ್ಮದಿನವನ್ನು ನಗರದ ವಿಮ್ಸ್ ಆವರಣದಲ್ಲಿ ಸರಳವಾಗಿ ಸ್ವಚ್ಛತಾ ಕಾರ್ಯವನ್ನು ಕೈಗೊಂಡಿದ್ದು, ಸಂಸದ ವೈ.ದೇವೇಂದ್ರಪ್ಪ, ಮಾಜಿ ಸಂಸದ ಸಣ್ಣ ಪಕ್ಕೀರಪ್ಪ, ಮಾಜಿ ಶಾಸಕ ಟಿ.ಎಚ್.ಸುರೇಶ್ ಬಾಬು, ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ ಎಂದರು.
ಸೆ.17ರಂದು ಹೈಕ ವಿಮೋಚನಾ ದಿನಾಚರಣೆಯಂದು ಯಾದಗಿರಿ ಜಿಲ್ಲೆಯಲ್ಲಿ ಧ್ವಜಾರೋಹಣ ನೆರವೇರಿಸುವಂತೆ ಪಕ್ಷ ನಿರ್ಣಯ ಕೈಗೊಂಡಿದೆ. ಭವಿಷ್ಯದ ಹಿತದೃಷ್ಟಿಯಿಂದ ಸಿಎಂ ಯಡಿಯೂರಪ್ಪ ಈ ನಿರ್ಣಯ ಕೈಗೊಂಡಿದ್ದಾರೆ. ನಾನು ಬಳ್ಳಾರಿಯಿಂದ ದೂರವಾಗುವ ಪ್ರಶ್ನೆಯೇ ಇಲ್ಲ. ಇಲ್ಲಿನ ಜನರಿಗೆ ರಾಮುಲು ಎಂದರೆ ಏನು ಎಂಬುದು ಗೊತ್ತಾಗಿದೆ. ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಬಳ್ಳಾರಿಗೆ ನಿಯೋಜಿಸಲಾಗಿದೆ. ಯಾದಗಿರಿ ಸಹ ನಮ್ಮ ರಾಜ್ಯದ ಒಂದು ಜಿಲ್ಲೆ. ಅದು ಬೇರೆಯಲ್ಲ ಎಂದು ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಈಗಾಗಲೇ ಸಿದ್ದಗೊಂಡಿದೆ ಎಂದು ನನಗೆ ಅನ್ನಿಸುತ್ತದೆ ಎಂದ ಸಚಿವ ರಾಮುಲು, ಸಿಎಂ ಯಡಿಯೂರಪ್ಪ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಸಿದ್ದಪಡಿಸಿ ರಾಜ್ಯಪಾಲರಿಗೆ ಕಳುಹಿಸಿಕೊಟ್ಟಿದ್ದಾರೆ. ರಾಜ್ಯಪಾಲರ ಅವಧಿ ಮುಗಿದ ಹಿನ್ನೆಲೆಯಲ್ಲಿ ಅದು ವಿಳಂಬವಾಗಬಹುದು. ಹೊಸ ರಾಜ್ಯಪಾಲರು ಬಂದಾಕ್ಷಣ ಜಿಲ್ಲಾ ಉಸ್ತುವಾರಿ ಸಚಿವರ ನೇಮಕವಾಗಲಿದೆ. ಬಳ್ಳಾರಿ ಜಿಲ್ಲೆಯ ಉಸ್ತುವಾರಿ ನನಗೆ ಸಿಗುವುದು ಬಿಡುವುದು ಪಕ್ಷದ ನಿರ್ಣಯಕ್ಕೆ ಬಿಟ್ಟ ವಿಚಾರ. ಪಕ್ಷದ ನಿರ್ಣಯದಂತೆ ನಾನು ಕೆಲಸ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.
ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕುಂಠಿತವಾಗಿಲ್ಲ. ಇತ್ತೀಚೆಗಷ್ಟೇ ಜಿಲ್ಲೆಯಲ್ಲಿ ಬರ, ನೆರೆ ಹಾವಳಿ ಪ್ರದೇಶಕ್ಕೆ ಭೇಟಿ ನೀಡಿ ಸಮಗ್ರ ವರದಿಯನ್ನು ಸರ್ಕಾರಕ್ಕೆ ಕಳುಹಿಸಲಾಗಿದೆ. ಜಿಲ್ಲಾಧಿಕಾರಿಗಳೊಂದಿಗೂ ಚರ್ಚಿಸಿದ್ದೇವೆ. ಅಭಿವೃದ್ಧಿ ಕುಂಠಿತವಾಗಿಲ್ಲ ಎಂದರು.
ಹೊಸಪೇಟೆಯನ್ನು ವಿಜಯನಗರ ಜಿಲ್ಲೆಯನ್ನಾಗಿಸುವ ಸಲುವಾಗಿ ಹೋರಾಟಕ್ಕೆ ಸಿದ್ಧವಾಗುತ್ತಿದೆ ಎಂಬುದು ನನ್ನ ಗಮನಕ್ಕಿದೆ. ಆದರೆ ಈ ಬಗ್ಗೆ ನಾನು ವೈಯಕ್ತಿಕ ಅಭಿಪ್ರಾಯ ಕೊಡುವುದಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಚರ್ಚಿಸುತ್ತೇನೆ. ಇನ್ನು ವಿಮ್ಸ್ ನಲ್ಲಿ ಸಾಕಷ್ಟು ಸಮಸ್ಯೆಗಳು ಇವೆ. ಮುಖ್ಯವಾಗಿ ತುರ್ತು ನಿಗಾ ಘಟಕದಲ್ಲಿ ಸಿಬ್ಬಂದಿ ಕೊರತೆ ಇದೆ. ಸ್ಕ್ಯಾನಿಂಗ್, ಎಕ್ಸ್ ರೇ ಸಮಸ್ಯೆಗಳು ಇವೆ. ಈ ಎಲ್ಲವೂ ಸರಿಯಾಗಲಿವೆ. ಎಂಆರ್ ಐ ಸ್ಕ್ಯಾನ ಉಪಕರಣಗಳು ಇದ್ದರೂ ಅದನ್ನು ಬಳಕೆ ಮಾಡಲಾಗುತ್ತಿಲ್ಲ. ಈ ಎಲ್ಲದರ ಬಗ್ಗೆ ನಿರ್ದೇಶಕರನ್ನು ಸೇರಿಸಿಕೊಂಡು ನಾಲ್ಕೈದು ದಿನಗಳಲ್ಲಿ ಸಭೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಈ ವೇಳೆ ವಿಮ್ಸ್ ನಿರ್ದೇಶಕ ಲಕ್ಷ್ಮಿನಾರಾಯಣ ರೆಡ್ಡಿ, ಅಧೀಕ್ಷ ಮರಿರಾಜ್ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?