ಉದ್ಯಾನವನಗಳಲ್ಲೂ ಸ್ವಚ್ಛತಾ ಅಭಿಯಾನ
Team Udayavani, Jun 14, 2020, 8:40 AM IST
ಬಳ್ಳಾರಿ: ನಗರದ ಬುಡಾ ಕಚೇರಿ ಆವರಣದಲ್ಲಿ ಬಿಜೆಪಿ ಜಿಲ್ಲಾ ಯುವಮೋರ್ಚಾ ಮತ್ತು ಮಹಿಳಾ ಮೋರ್ಚಾ ವತಿಯಿಂದ ಸ್ವಚ್ಛ ಭಾರತ್ ಅಭಿಯಾನ ಶನಿವಾರ ನಡೆಯಿತು.
ಶಾಸಕ ಜಿ.ಸೋಮಶೇಖರ ರೆಡ್ಡಿ, ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ಅವರು ಅಭಿಯಾನಕ್ಕೆ ಚಾಲನೆ ನೀಡಿದರು. ಆವರಣದ ವಿವಿಧೆಡೆ ಸಂಗ್ರಹವಾಗಿದ್ದ ತ್ಯಾಜ್ಯ ತೆರವುಗೊಳಿಸುವ ಮೂಲಕ ಸ್ವಚ್ಛತೆ ಕಾಪಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಜಿ.ಸೋಮಶೇಖರರೆಡ್ಡಿ, ನಗರದ ಬೇರೆ-ಬೇರೆ ಸ್ಥಳಗಳಲ್ಲಿ ನಿರಂತರವಾಗಿ ಸ್ವಚ್ಛತಾ ಕಾರ್ಯ ಮಾಡುತ್ತೇವೆ. ಬುಡಾ ಆವರಣದಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ. ಅದಕ್ಕೆ ಕಡಿವಾಣ ಇಲ್ಲವೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಜೆಸಿಬಿಗಳನ್ನು ತರಸಿ ಸ್ವಚ್ಛತೆ ಮಾಡಿಸಿದ್ದೇವೆ ಎಂದರು. ಪಾರ್ಕ್ ಅಭಿವೃದ್ಧಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವೆ ಎಂದು ಭರವಸೆ ನೀಡಿದರು.
ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ಮಾತನಾಡಿ, ಜನರ ಉಪಯೋಗಕ್ಕೆ ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್