ಸಿಎಂ ಆಡಿಯೋ ಪ್ರಕರಣ ಮುಗಿದ ಅಧ್ಯಾಯ: ಶ್ರೀನಿವಾಸ ಪೂಜಾರಿ
Team Udayavani, Nov 6, 2019, 3:14 PM IST
ಬಳ್ಳಾರಿ: ಸಿಎಂ ಆಡಿಯೋ ಬಗ್ಗೆ ನಾನು ಹೇಳುವಂಥದ್ದು ಏನೂ ಇಲ್ಲ. ಅದು ಮುಗಿದ ಅಧ್ಯಾಯ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ನಗರದ ಡಿಸಿ ಕಚೇರಿ ಆವರಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಅನರ್ಹ ಶಾಸಕರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಆಡಿಯೋ ಪ್ರಕರಣ ಮುಗಿದ ಅಧ್ಯಾಯ. ಅದರ ಬಗ್ಗೆ ನಾನು ಹೇಳುವುದು ಏನೂ ಇಲ್ಲ ಎಂದು ಸ್ಪಷ್ಟಪಡಿಸಿದರು.
ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮಾತನಾಡುವುದು ಸಹಜ. ಅದಕ್ಕೆ ನಾವು ಪ್ರತಿಕ್ರಿಯಿಸುತ್ತೇವೆ ಎಂದು ತಿಳಿಸಿದರು.
ಪಕ್ಷದಲ್ಲಿ ನಾವೆಲ್ಲ ಒಗ್ಗಟ್ಟಾಗಿ ಇದ್ದೇವೆ. ಬಿಜೆಪಿಯಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಮಾಜಿ ಪ್ರಧಾನಿ ದೇವೇಗೌಡರು ಹಿರಿಯ ನಾಯಕರು. ಸಿಎಂ ಜೊತೆ ಔಪಚಾರಿಕವಾಗಿ ಮಾತಾಡಿರಬಹುದು. ಅದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ. ನಮ್ಮ ಸರ್ಕಾರಕ್ಕೆ ಸಲಹೆ ನೀಡಬಹುದು ಎಂದು ತಿಳಿಸಿದರು.
ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಆದಾಯ ಹೆಚ್ಚಿರುವ 190 ಎ ಗ್ರೇಡ್ ದೇವಸ್ಥಾನಗಳು ಇವೆ. ಈ ದೇವಸ್ಥಾನಗಳಲ್ಕಿ ಸಾಮೂಹಿಕ ವಿವಾಹ ಮಾಡುವ ಕುರಿತು ಚಿಂತನೆ ಇದ್ದು, ಕೆಲವೇ ದಿನಗಳಲ್ಲಿ ಆದೇಶ ಹೊರಡಿಸಲಾಗುತ್ತದೆ. ಕನಿಷ್ಠ 1000 ಸಾವಿರ ಮದುವೆ ಮಾಡುವ ಕಕುರಿತು ಚಿಂತನೆ ಇದೆ. ಒಂದು ಮದುವೆಗೆ ಕನಿಷ್ಠ 45 ಸಾವಿರ ರೂಪಾಯಿ ವೆಚ್ಚ ಮಾಡಲಿದ್ದೇವೆ. ಜನರ ಧಾರ್ಮಿಕ ವಿಚಾರಗಳಿಗೆ ಸಂಬಂಧಿಸಿದಂತೆ. ಕೆಲಸ ಮಾಡುವುದು ನಮ್ಮ ಇಲಾಖೆ ಕೆಲಸವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ