ಭತ್ತದನಾಡಿಗೆ ಬಂದು ಜಾನುವಾರು..!


Team Udayavani, Dec 15, 2018, 4:06 PM IST

bell-3.jpg

ಸಿರುಗುಪ್ಪ: ತಾಲೂಕಿಗೆ ನೀರು, ಮೇವು ಅರಸಿ ಕೊಪ್ಪಳ ಜಿಲ್ಲೆಯ ಕನಕಗಿರಿ ಕ್ಷೇತ್ರದ ವ್ಯಾಪ್ತಿಯ ಮಲ್ಲಾಪುರ, ಬಂಕಾಪುರ ಗ್ರಾಮಗಳ ಸಾವಿರಾರು ಜಾನುವಾರುಗಳು ವಲಸೆ ಬಂದಿದ್ದು, ಭತ್ತ ಕಟಾವು ಮಾಡಿದ ಗದ್ದೆಗಳಲ್ಲಿ ಬೀಡು ಬಿಟ್ಟಿವೆ. ಕೊಪ್ಪಳ ಜಿಲ್ಲೆಯ ಕೆಲವು ಭಾಗಗಳಲ್ಲಿ ಸರಿಯಾಗಿ ಮಳೆಯಾಗದೆ ಬರಪರಿಸ್ಥಿತಿ ಆವರಿಸಿರುವುದರಿಂದ ಜಾನುವಾರು ಹೊಂದಿರುವ ಮಾಲೀಕರು ಜಾನುವಾರುಗಳೊಂದಿಗೆ ತಾಲೂಕಿಗೆ ವಲಸೆ ಬಂದಿದ್ದಾರೆ.

ಸದ್ಯ ತಾಲೂಕಿನ ತುಂಗಭದ್ರಾ ಜಲಾಶಯದ ಎಲ್‌ಎಲ್‌ಸಿ ಕಾಲುವೆ ವ್ಯಾಪ್ತಿಯಲ್ಲಿ ಭತ್ತ ಕಟಾವು ಮಾಡಲಾಗಿದ್ದು, ಗದ್ದೆಯಲ್ಲಿ ಹಸಿ ಮೇವು, ಒಣ ಮೇವು ಸಿಗುತ್ತಿದೆ. ತಾಲೂಕಿನ ಸಿರಿಗೇರಿ ಕ್ರಾಸ್‌ ಸುತ್ತಮುತ್ತಲಿನ ಹೊಲ ಗದ್ದೆಗಳಲ್ಲಿ ವಲಸೆ ಬಂದಿರುವ ಜಾನುವಾರುಗಳು ಬೀಡು ಬಿಟ್ಟಿದ್ದು, ಕುರಿ ತರುಬುವಂತೆಯೇ ಗದ್ದೆಗಳಲ್ಲಿ ಜಾನುವಾರುಗಳನ್ನು ತರುಬಿ ಅವುಗಳಿಗೆ ಮೇವು, ನೀರಿನ ವ್ಯವಸ್ಥೆ ಮಾಡುತ್ತಿರುವ ಜಾನುವಾರು ಮಾಲೀಕರು ಹೇಗಾದರೂ ಮಾಡಿ ತಮ್ಮ ದನಕರುಗಳನ್ನು ಸಂರಕ್ಷಿಸಿಕೊಳ್ಳುವ ಪ್ರಯತ್ನದಲ್ಲಿ ತೊಡಗಿದ್ದಾರೆ.

ನೂರಾರು ದೇಸಿ ಹಸುಗಳನ್ನು ಸಾಕುತ್ತಿರುವ ಜಾನುವಾರುಗಳ ಮಾಲೀಕರು ಕೊಪ್ಪಳ ಜಿಲ್ಲೆಯಲ್ಲಿ ಈ ವರ್ಷ ಭೀಕರ ಬರಗಾಲ ಉಂಟಾಗಿರುವ ಕಾರಣ ಜಾನುವಾರುಗಳಿಗೆ ಮೇವು, ನೀರಿಗೆ ತೊಂದರೆಯಾಗಿದೆ. ಇದರಿಂದಾಗಿ ದೊಡ್ಡ ಸಂಖ್ಯೆಯಲ್ಲಿ ಆಕಳುಗಳನ್ನು ಸಾಕಿರುವ ಮಾಲೀಕರು ಈ ಭಾಗಕ್ಕೆ ವಲಸೆ ಬಂದಿದ್ದಾರೆ.

ಭೀಕರ ಬರಗಾಲದಿಂದ ಮೇವು, ನೀರು ಸಿಗದೆ ಕಂಗೆಟ್ಟು ಹೋಗಿದ್ದ ಜಾನುವಾರುಗಳಿಗೆ ಭತ್ತ ಕಟಾವು ಮಾಡಿದ ಗದ್ದೆಯಲ್ಲಿ ಹಸಿ ಮೇವು, ಒಣ ಮೇವು ಸಿಗುತ್ತಿದ್ದು, ಇದನ್ನು ತಿಂದು ಜಾನುವಾರುಗಳು ತಮ್ಮ ಹಸಿವು ನೀಗಿಸಿಕೊಳ್ಳುತ್ತಿವೆ. ಕಾಲುವೆಯಲ್ಲಿ ಹರಿಯುವ ನೀರನ್ನು ಕುಡಿದು ಹೊಟ್ಟೆ ತಂಪು ಮಾಡಿಕೊಳ್ಳುತ್ತಿವೆ. 

ಜಾನುವಾರುಗಳ ಮಾಲೀಕರು ತಮ್ಮ ಜಾನುವಾರುಗಳಿಗೆ ಮೇವು, ನೀರು ಸಿಗುವ ಸ್ಥಳಗಳನ್ನು ಹುಡುಕಿ ಅಲ್ಲೇ ತಮ್ಮ ವಾಸ್ತವ್ಯ ಹೂಡುತ್ತಿದ್ದಾರೆ. ಜಾನುವಾರು ಮೇಯಿಸಲು ಬಂದವರಿಗೆ ಊಟ, ಒಂದಿಷ್ಟು ಖರ್ಚಿಗೆ ಹಣ ಮಾತ್ರ ನೀಡಬೇಕಾಗಿದೆ.

ಜಾನುವಾರುಗಳ ಸಗಣಿ, ಗಂಜಲಿನಿಂದ ಭೂಮಿಯ ಫಲವತ್ತತೆ ಹೆಚ್ಚಾಗುವ ಕಾರಣ ಕೆಲವು ರೈತರು ತಮ್ಮ ಹೊಲಗಳಲ್ಲಿ ಜಾನುವಾರುಗಳನ್ನು ತರುಬುವಂತೆ ದುಂಬಾಲು ಬಿದ್ದಿದ್ದಾರೆ. ಈ ಬಾರಿ ನಮ್ಮ ಭಾಗದಲ್ಲಿ ಮಳೆ ಬೆಳೆ ಇಲ್ಲದೆ ಭೀಕರ ಬರ ಬಂದಿದೆ. ನಮ್ಮ ಊರಿನ ಸುತ್ತಮುತ್ತ ಜಾನುವಾರುಗಳಿಗೆ ಮೇವು, ನೀರು ಸಿಗದ ಪರಿಸ್ಥಿತಿ ಉಂಟಾಗಿದೆ. ಈ ಭಾಗದ ಗದ್ದೆಗಳಲ್ಲಿ ಒಣ ಮತ್ತು ಹಸಿ ಮೇವಿನೊಂದಿಗೆ ಕುಡಿಯಲು ನೀರು ದೊರೆಯುತ್ತಿದೆ. ಆದ್ದರಿಂದ ಈ ಕಡೆ ನಮ್ಮ ಜಾನುವಾರು ಹೊಡೆದುಕೊಂಡು ಬಂದಿದ್ದೇವೆ. 
 ಯಮುನೂರಪ್ಪ, ಮಲ್ಲಾಪುರ ಗ್ರಾಮ, ಕೊಪ್ಪಳ ಜಿಲ್ಲೆ.

ಹೇಗಾದರೂ ಮಾಡಿ ನಮ್ಮ ಜಾನುವಾರುಗಳನ್ನು ಉಳಿಸಿಕೊಳ್ಳಬೇಕು. ಅದಕ್ಕಾಗಿ ಊರೂರು ತಿರುಗುತ್ತಿದ್ದೇವೆ. ನಮ್ಮ ಜಾನುವಾರುಗಳ ಬಗ್ಗೆ ಜನ ಅನುಕಂಪ ತೋರಿಸುತ್ತಿದ್ದಾರೆ. ದನ ತರುಬಾಕ ನಾವು ಹೆಚ್ಚಿಗೆ ಹಣ ಕೇಳುವುದಿಲ್ಲ. ದನಕ್ಕೆ ಒಂದಷ್ಟು ಮೇವು, ನಮ್ಮ ಊಟ, ಬೇರೆ ಊರಿಗೆ ಹೋಗಲು ಒಂದಿಷ್ಟು ರೊಕ್ಕ ಕೊಡುತ್ತಿದ್ದಾರೆ.
 ಯಂಕಪ್ಪ, ಬಂಕಾಪುರ, ಕೊಪ್ಪಳ ಜಿಲ್ಲೆ. 

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.