Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು
Team Udayavani, Mar 14, 2024, 12:50 PM IST
ಬಳ್ಳಾರಿ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತ ಬಳಿಕ ನನ್ನನ್ನು ಅಜ್ಞಾತವಾಸಕ್ಕೆ ಕಳುಹಿಸಿದಂತಾಗಿತ್ತು. ಇದೀಗ ಲೋಕಸಭೆ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಿಂದ ಪುನಃ ನನಗೆ ಬಿಜೆಪಿ ಟಿಕೆಟ್ ನೀಡುವ ಮೂಲಕ ಅಜ್ಞಾತವಾಸದಿಂದ ಹೊರಬಂದಂತಾಗಿದೆ ಎಂದು ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಬಿ.ಶ್ರೀರಾಮುಲು ತಿಳಿಸಿದರು.
ನಗರದ ತಮ್ಮ ನಿವಾಸದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 35-40 ವರ್ಷಗಳಿಂದ ಜನಸೇವೆ ಮಾಡುತ್ತಾ ಬಂದಿದ್ದೇನೆ. ಅದನ್ನು ಪರಿಗಣಿಸಿ ಬಿಜೆಪಿ ವರಿಷ್ಠರು ಲೋಕಸಭೆ ಚುನಾವಣೆಯ ಟಿಕೆಟ್ ನೀಡಿದ್ದಾರೆ. ಇದು ಕಳೆದ ವಿಧಾನಸಭೆ ಚುನಾವಣೆ ಸೋಲಿನ ಅಜ್ಞಾತವಾಸದಿಂದ ಮುಕ್ತವಾದಂತಾಗಿದೆ ಎಂದು ತಿಳಿಸಿದರು.
ನಾನು ಏನೂ ಇಲ್ಲದ ದಿನಗಳಲ್ಲಿ ಮಾಜಿ ಸಂಸದೆ ಬಸವರಾಜೇಶ್ವರಿ ಅವರು ನನ್ನನ್ನು ನಗರಸಭೆ ಸದಸ್ಯರನ್ನಾಗಿ ಮಾಡಿದರು. ಅಂದಿನಿಂದ ಅಜಾತಶತ್ರುವಾಗಿ ಕೆಲಸ ಮಾಡಿದ್ದೇನೆ. ಇದು ಶ್ರೀರಕ್ಷೆಯಾಗಿ ನನ್ನನ್ನು ಕಾಪಾಡಲಿದೆ ಎಂದ ರಾಮುಲು, ಪ್ರಧಾನಿ ನರೇಂದ್ರ ಮೋದಿ ಈ ಬಾರಿ 400ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಿಸಬೇಕು ಎಂದು ಸಂಕಲ್ಪತೊಟ್ಟಿದ್ದಾರೆ. ಕಾಶ್ಮೀರದಲ್ಲಿ 370 ರದ್ದಾದ ಹಿನ್ನೆಲೆಯಲ್ಲಿ ಬಿಜೆಪಿ 370, ಎನ್ ಡಿಎ ಒಕ್ಕೂಟಕ್ಕೆ 400ರ ಗುರಿ ನೀಡಿದ್ದಾರೆ. ಹಾಗಾಗಿ ಇದು ಶ್ರೀರಾಮುಲು ಚುನಾವಣೆಯಲ್ಲ. ಭಾರತ ದೇಶದ ಚುನಾವಣೆ. ದೇಶದ ಪ್ರತಿಯೊಬ್ಬರೂ ನಮ್ಮ ಚುನಾವಣೆ ಎಂದು ಭಾವಿಸಿ ಬಿಜೆಪಿ ಪಕ್ಷಕ್ಕೆ, ಪ್ರಧಾನಿ ನರೇಂದ್ರ ಮೋದಿಗೆ ಮತ ನೀಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
MUST WATCH
ಹೊಸ ಸೇರ್ಪಡೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ