ಸಭೆ ಬಹಿಷ್ಕರಿಸಿದ ಕಾಂಗ್ರೆಸ್‌ ಸದಸ್ಯರು

ಕೋರಂ ಕೊರತೆ-ಸಭೆ ಮುಂದೂಡಿದ ಅಧ್ಯಕ್ಷರು! ­ಅನುದಾನ ಸಮರ್ಪಕ ಹಂಚಿಕೆಯಾಗಿಲ್ಲ: ಆರೋಪ

Team Udayavani, Mar 26, 2021, 9:32 PM IST

congress

ಬಳ್ಳಾರಿ: ಅನುದಾನ ಸಮರ್ಪಕ ಹಂಚಿಕೆಯಾಗಿಲ್ಲ, ನೂತನ ಸಭಾಂಗಣವನ್ನು ಉದ್ಘಾಟಿಸಿದರೂ ಸಭೆ ಏಕೆ ನಡೆಸುತ್ತಿಲ್ಲ ಎಂದು ಕಾಂಗ್ರೆಸ್‌ನ ಕೆಲ ಜಿಪಂ ಸದಸ್ಯರು ಪಟ್ಟು ಹಿಡಿದು ಸಭೆಯನ್ನು ಬೈಕಾಟ್‌ ಮಾಡಿದ ಹಿನ್ನೆಲೆಯಲ್ಲಿ ಕೋರಂ ಕೊರತೆಯಿಂದ ಸಭೆಯನ್ನು ಮುಂದೂಡಲಾಯಿತು.

ನಗರದ ಜಿಪಂ ಸಭಾಂಗಣದಲ್ಲಿ ಗುರುವಾರ 13ನೇ ಸಾಮಾನ್ಯ ಸಭೆಯಲ್ಲಿ ನಡಯಬೇಕಿತ್ತು. ಆದರೆ, ಸಭೆ ಆರಂಭವಾಗುತ್ತಿದ್ದಂತೆ ಜಿಪಂ ಸದಸ್ಯರಾದ ನಾರಾ ಭರತ್‌ರೆಡ್ಡಿ, ಅಲ್ಲಂ ಪ್ರಶಾಂತ್‌, ಎ.ಮಾನಯ್ಯ, ವಿಶ್ವನಾಥ್‌ ಸೇರಿ ಹಲವು ಸದಸ್ಯರು ಅನುದಾನ ಸಮರ್ಪಕವಾಗಿ ಹಂಚಿಕೆಯಾಗಿಲ್ಲ. ಜಿಪಂನ ನೂತನ ಸಭಾಂಗಣವನ್ನು ಉದ್ಘಾಟಿಸಿದರೂ, ಅದರಲ್ಲಿ ಸಾಮಾನ್ಯ ಸಭೆ ಏಕೆ ನಡೆಸುತ್ತಿಲ್ಲ ಪ್ರಶ್ನಿಸಿದರು. ಕಳೆದ ಸಭೆಯಲ್ಲೇ ಮುಂದಿನ ಸಭೆಯನ್ನು ನೂತನ ಸಭಾಂಗಣದಲ್ಲಿ ನಡೆಸಬೇಕು ಎಂದು ತಿಳಿಸಲಾಗಿತ್ತು. ಆದರೆ, ನೂತನ ಸಭಾಂಗಣವನ್ನು ಉದ್ಘಾಟಿಸಿ ಪುನಃ ಹಳೆಯ ಸಭಾಂಗಣದಲ್ಲೇ ಸಭೆಯನ್ನು ನಡೆಸುತ್ತಿದ್ದೀರಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ವೇಳೆ ಮಧ್ಯ ಪ್ರವೇಶಿಸಿದ ಜಿಪಂ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ, ನೂತನ ಸಭಾಂಗಣದಲ್ಲಿ ಮೈಕ್‌ ವ್ಯವಸ್ಥೆ ಆಗಿಲ್ಲ. ಶೌಚಾಲಯ ವ್ಯವಸ್ಥೆ ಇಲ್ಲ. ಬೋರ್ಡ್‌ ಸಹ ಸಿದ್ದವಾಗಿಲ್ಲ. ಹಾಗಾಗಿ ಇದೊಂದು ಸಭೆಯನ್ನು ಹಳೆಯ ಸಭಾಂಗಣದಲ್ಲೇ ನಡೆಸುತ್ತಿದ್ದೇವೆ ಎಂದು ಪ್ರತಿಕ್ರಿಯಿಸಿದರು. ಹಾಗಾದರೆ ಈ ಸಭೆಯನ್ನು ನಾವೆಲ್ಲರು ಬೈಕಾಟ್‌ ಮಾಡುತ್ತೇವೆ. ಇನ್ನೊಮ್ಮೆ ಸಭೆಗೆ ಕರೆಯುವುದಾದರೆ ಹೊಸ ಸಭಾಂಗಣದಲ್ಲೇ ಕರೆಯಿರಿ ಎಂದು ಸಭೆಯಿಂದ ಹೊರನಡೆದರು. ಸದಸ್ಯರನ್ನು ಸಮಾಧಾನ ಪಡಿಸಲು ನಡೆಸಿದ ಎಲ್ಲ ಪ್ರಯತ್ನಗಳು ವಿಫಲವಾದವು. ಇದರಿಂದ ಸಭೆ ನಡೆಯಲು ಬೇಕಿದ್ದ 38 ಸದಸ್ಯರ ಪೈಕಿ 32 ಸದಸ್ಯರು ಮಾತ್ರ ಸಹಿ ಮಾಡಿದ್ದು, ಕೋರಂ ಕೊರತೆಯಾಗಿದ್ದರಿಂದ ಸಭೆಯನ್ನು ಮುಂದೂಡುವುದಾಗಿ ಅಧ್ಯಕ್ಷೆ ಭಾರತಿ ತಿಮ್ಮಾರಡ್ಡಿ ಘೋಷಿಸಿದರು. ಸಭಾಂಗಣ ನಿರ್ಮಾಣಕ್ಕೆ 110 ಲಕ್ಷ ರೂ ಅನುದಾನ ಕೊರತೆ ಇತ್ತು. ಆದರೂ ಜಿಲ್ಲಾ ಕಾರಿಗಳ ಸಹಕಾರದಿಂದ ಸರ್ಕಾರದಿಂದ ಅನುದಾನ ತಂದು ಮಾಡಲಾಗಿದೆ. ಕೆಲ ಕಾಮಗಾರಿ ಬಾಕಿ ಇದೆ. ಮುಗಿದ ತಕ್ಷಣ, ಅಧ್ಯಕ್ಷರು ಹೇಳಿದಾಗ ಮತ್ತೆ ಸಭೆ ಕರೆಯಲಾಗುವುದು ಸಿಇಒ ನಂದಿನಿ ಹೇಳಿದರು. ಗೊಂದಲದಲ್ಲೇ ಆರಂಭ, ಮುಕ್ತಾಯ: ಜಿಪಂ 13ನೇ ಸಾಮಾನ್ಯ ಸಭೆಯನ್ನು ಹೇಗಾದರೂ ಮಾಡಿ ನಡೆಬೇಕು ಎಂದು ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿಯವರು ಪ್ರಯತ್ನಿಸಿದರೂ, ಕಾಂಗ್ರೆಸ್‌ನ ಕೆಲ ಸದಸ್ಯರ ಅಸಹಕಾರದಿಂದ ಸಾಧ್ಯವಾಗಲಿಲ್ಲ.

ಗೊಂದಲದಲ್ಲಿ ಸಭಾಂಗಣ ಉದ್ಘಾಟನೆ ಮತ್ತು ಸಭೆಯನ್ನು ಏಕೆ ಕರೆದಿದ್ದೀರಿ ಎಂದು ಸದಸ್ಯರೊಬ್ಬರು ಪ್ರಶ್ನಿಸಿದಾಗ, ಜಿಪಂ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿಯವರು ನಾನು ಗೊಂದಲದಲ್ಲೇ ಅಧ್ಯಕ್ಷೆ ಆಗಿದ್ದೇನೆ. ಗೊಂದಲದಲ್ಲೇ ಅವ  ಮುಗಿಸುತ್ತೇನೆ ಎಂದು ಚಟಾಕಿ ಹಾರಿಸಿದರು. ಇದಕ್ಕೆ ಸಭೆಯಲ್ಲಿದ್ದ ಹಲವು ಸದಸ್ಯರು ನಕ್ಕರು.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.