7 ಲಕ್ಷ ರೂ.ವೆಚ್ಚದಲ್ಲಿ ಕನಕದಾಸ ಪುತ್ಥಳಿ ನಿರ್ಮಾಣ


Team Udayavani, Jan 25, 2019, 8:26 AM IST

bell-3.jpg

ಹಗರಿಬೊಮ್ಮನಹಳ್ಳಿ: ಪಟ್ಟಣದಲ್ಲಿ 50 ಲಕ್ಷ ರೂ.ಅಂದಾಜು ಮೊತ್ತದಲ್ಲಿ ಕನಕ ಭವನ ನಿರ್ಮಿಸಲಾಗಿದ್ದು ಶೀಘ್ರದಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಶಾಸಕ ಭೀಮಾನಾಯ್ಕ ತಿಳಿಸಿದರು. ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ನಡೆದ ಕನಕದಾಸರ 531ನೇ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವ‌ರು ಮಾತನಾಡಿದರು.

ಕೊಟ್ಟೂರು ರಸ್ತೆಯನ್ನು ಭಕ್ತ ಕನಕದಾಸರ ವೃತ್ತವನ್ನಾಗಿ ಅಭಿವೃದ್ಧಿಪಡಿಸಲಾಗುವುದು. ಒಟ್ಟು 7 ಲಕ್ಷ ರೂ.ಅಂದಾಜು ಮೊತ್ತದಲ್ಲಿ ಕನಕದಾಸರ ಪುತ್ಥಳಿ ನಿರ್ಮಿಸಲಾಗುವುದು. ವಿಶೇಷ ಅನುದಾನದಡಿ ಕಿತ್ತೂರು ರಾಣಿ ಚನ್ನಮ್ಮ, ವಾಲ್ಮೀಕಿ ಮತ್ತು ಅಂಬೇಡ್ಕರ್‌ ಕಂಚಿನ ಪುತ್ಥಳಿ ನಿರ್ಮಿಸಲಾಗುವುದು. ಈಗಾಗಲೇ ತಾಲೂಕಿನ ಬ್ಯಾಸಿಗೆದೇರಿ ಗ್ರಾಮದಲ್ಲಿ ಸಂಗೊಳ್ಳಿರಾಯಣ್ಣ ಪುತ್ಥಳಿ ಸ್ಥಾಪಿಸಲಾಗಿದೆ. ಕಾತ್ಯಾಯಿನಿ ಮರಡಿ ಬಳಿ 80 ಸೆಂಟ್ಸ್‌ ನಿವೇಶನವನ್ನು ಹಾಲುಮತ ಸಮಾಜದ ಕಲ್ಯಾಣಮಂಟಪಕ್ಕೆ ಒದಗಿಸಲಾಗುವುದು ಎಂದು ತಿಳಿಸಿದರು.

ಕಾಗಿನೆಲೆ ಮಹಾಸಂಸ್ಥಾನಮಠದ ನಿರಂಜನಾನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿ, ಹಾಲುಮತ ಸಮಾಜದವರು ಪ್ರಜ್ಞಾವಂತಿಕೆ ಮೆರೆಯಬೇಕು. ಡಿಜೆ ಸಂಸ್ಕೃತಿಯಿಂದ ಯುವಕರು ಹೊರ ಬರಬೇಕಿದೆ. ಕಲ್ಯಾಣ ಮಂಟಪಕ್ಕಿಂತಲೂ ಸಮಾಜದ ವಿದ್ಯಾರ್ಥಿಗಳ ವಸತಿ ನಿಲಯ ನಿರ್ಮಿಸುವುದು ಹೆಚ್ಚು ಸೂಕ್ತ. ದೇವಸ್ಥಾನದ ಗಂಟೆಗಿಂತಲೂ ಶಾಲೆಯ ಗಂಟೆಗಳು ಹೆಚ್ಚು ಕೇಳಿಬರುವುದು ಶೈಕ್ಷಣಿಕ ಪ್ರಗತಿಯ ಸಂಕೇತ. ಜಾತಿ ವ್ಯವಸ್ಥೆಯ ಅನಿಷ್ಠ ಪದ್ಧತಿ ನಿರ್ಮೂಲನೆ ಮಾಡಬೇಕು. ಸತ್ಯವನ್ನು ಮರೆತು ಬದುಕಬಾರದು, ಇತಿಹಾಸವನ್ನು ತಿಳಿದುಕೊಳ್ಳುವ ಅಗತ್ಯವಿದೆ. ಸಮುದಾಯ ಜಾಗೃತಿಯಾಗಬೇಕು. ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಸ್ವಾವಲಂಬನೆಯ ದಾರಿ ಕಲ್ಪಿಸಬೇಕಿದೆ. ಜಾತಿಗಿಂತಲೂ ನೀತಿ ಮುಖ್ಯ, ಎಲ್ಲ ಸಮಾಜದೊಂದಿಗೆ ಸೌಹಾರ್ದ ಬದುಕು ನಡೆಸಿ. ಸಾಮಾಜಿಕ ಜಾಲತಾಣದಲ್ಲಿ ಯಾವ ಸಮಾಜವನ್ನು ನಿಂದನೆ ಮಾಡಬೇಡಿ. ಸುಸಂಸ್ಕೃತರಾಗಿ ಜೀವನ ನಡೆಸಿ ಎಂದು ಕಿವಿಮಾತು ಹೇಳಿದರು.

ತಾಲೂಕು ಹಾಲುಮತ ಸಮಾಜದ ಅಧ್ಯಕ್ಷ ಬಿ.ಬಸವರಾಜ, ಸಮಾಜದ ಮುಖಂಡ ಮುಟುಗನಹಳ್ಳಿ ಕೊಟ್ರೇಶ್‌, ಬಿಇಒ ಶೇಖರಪ್ಪ ಹೊರಪೇಟೆ ಮಾತನಾಡಿದರು. ಸಮಾಜದ ಗುರುವಿನ ಕೊಟ್ರಯ್ಯ ಒಡೆಯರ್‌, ಕುರಿ ಶಿವಮೂರ್ತಿ, ಕನಕಸೇನೆ ಅಧ್ಯಕ್ಷ ದೊಡ್ಡಬಸಪ್ಪ, ಕೊಟ್ರೇಶ್‌, ತಾಪಂ ಇಒ ಮಲ್ಲಾನಾಯ್ಕ, ತೋಟಗಾರಿಕೆ ಸಹಾಯಕ ನಿರ್ದೇಶಕ ಡಾ| ಪರಮೇಶ್ವರಪ್ಪ, ತಾಪಂ ಅಧ್ಯಕ್ಷೆ ಕೆ.ನಾಗಮ್ಮ, ಉಪಾಧ್ಯಕ್ಷೆ ಕೊಚಾಲಿ ಸುಶೀಲಮ್ಮ ಮಂಜುನಾಥ, ಎಪಿಎಂಸಿ ಅಧ್ಯಕ್ಷ ದೊಡ್ಡಬಸಪ್ಪ, ತಾ.ಪಂ.ಸದಸ್ಯರಾದ ಗೀತಾ ಹುಲುಗಪ್ಪ, ಸೊನ್ನದ ಪ್ರಭಾಕರ್‌, ಶ್ಯಾಮಲಮ್ಮ, ಸಮಾಜದ ಮಾಜಿ ಅಧ್ಯಕ್ಷ ಮೈಲಾರಪ್ಪ, ಕುರುಬ ಸಮಾಜದ ಮಹಿಳಾ ಘಟಕದ ಅಧ್ಯಕ್ಷೆ ನಾಗರತ್ನಮ್ಮ, ಜಿಲ್ಲಾ ನಿರ್ದೇಶಕಿ ಸುಶೀಲಮ್ಮ, ವಾಲ್ಮೀಕಿ ಸಮಾಜದ ಮುಖಂಡ ಪವಾಡಿ ಹನುಮಂತಪ್ಪ, ಜಂಬಣ್ಣ, ಜಳಿಕಿ ಗುರುಬಸಪ್ಪ, ಎಪಿಎಂಸಿ ನಿರ್ದೇಶಕ ರಾಮಣ್ಣ, ವರದಾಪುರ ಕುಮಾರ ಇತರರಿದ್ದರು. ಉಪನ್ಯಾಸಕ ಗೂಳೆಪ್ಪ, ಮುಖ್ಯಗುರು ಎಚ್.ದೇವಪ್ಪ, ಶಿಕ್ಷಕ ರಾಮಣ್ಣ ನಿರೂಪಿಸಿದರು.

 ಶ್ರೀನಿರಂಜನಾನಂದಪುರಿ ಸ್ವಾಮೀಜಿ, ಕಾಗಿನೆಲೆ ಮಹಾಸಂಸ್ಥಾನ ಮಠ
ಜಾತಿ ವ್ಯವಸ್ಥೆಯ ಅನಿಷ್ಠ ಪದ್ಧತಿ ನಿರ್ಮೂಲನೆ ಮಾಡಬೇಕು. ಸತ್ಯವನ್ನು ಮರೆತು ಬದುಕಬಾರದು, ಇತಿಹಾಸವನ್ನು ತಿಳಿದುಕೊಳ್ಳುವ ಅಗತ್ಯವಿದೆ. ಸಮುದಾಯ ಜಾಗೃತಿಯಾಗಬೇಕು. ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಸ್ವಾವಲಂಬನೆಯ ದಾರಿ ಕಲ್ಪಿಸಬೇಕಿದೆ. ಜಾತಿಗಿಂತಲೂ ನೀತಿ ಮುಖ್ಯ, ಎಲ್ಲ ಸಮಾಜದೊಂದಿಗೆ ಸೌಹಾರ್ದ ಬದುಕು ನಡೆಸಿ. ಸಾಮಾಜಿಕ ಜಾಲತಾಣದಲ್ಲಿ ಯಾವ ಸಮಾಜವನ್ನು ನಿಂದನೆ ಮಾಡಬೇಡಿ. ಸುಸಂಸ್ಕೃತರಾಗಿ ಜೀವನ ನಡೆಸಿ.

ಟಾಪ್ ನ್ಯೂಸ್

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.