ಆತ್ಮಹತ್ಯೆಗೆ ಶರಣಾದ ದಂಪತಿಗಳು: ಮೂರು ವರ್ಷದ ದಾಂಪತ್ಯ ಜೀವನ ಆತ್ಮಹತ್ಯೆಯಲ್ಲಿ ಅಂತ್ಯ
Team Udayavani, Sep 29, 2020, 8:10 AM IST
ಬಳ್ಳಾರಿ: ಜಿಲ್ಲೆಯ ಹರಪನಹಳ್ಳಿ ತಾಲೂಕು ಶಿಂಗ್ರಿಹಳ್ಳಿ ಗ್ರಾಮದಲ್ಲಿ ದಂಪತಿಗಳಿಬ್ಬರೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ನಡೆದಿದೆ.
ಪತ್ನಿ ಸುಧಾ (30), ಪತಿ ತೆಲಿಗರ ಹನುಮಂತಪ್ಪ (33) ಆತ್ಮಹತ್ಯೆಗೆ ಶರಣಾದ ದಂಪತಿ.
ಮಕ್ಕಳಾಗದ ಬೇಸರ ಸೇರಿ ಇನ್ನಿತರೆ ಕೌಟುಂಬಿಕ ವಿಚಾರಗಳಿಗೆ ಸಂಬಂಧಿಸಿದಂತೆ ಪತಿ-ಪತ್ನಿಯರ ನಡುವೆ ನಿತ್ಯ ಕಲಹವಾಗುತ್ತಿದ್ದು ಇದರಿಂದ ಬೇಸತ್ತ ಪತ್ನಿ ಸುಧಾ ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆದರೆ, ಮರಣೋತ್ತರ ಪರೀಕ್ಷೆಯ ವೇಳೆ ಮೃತ ಪತ್ನಿ ಸುಧಾ ಮೂರು ತಿಂಗಳ ಗರ್ಭವತಿಯಾಗಿದ್ದಾಳೆ ಎಂಬುದು ತಿಳಿದಿದೆ.
ಇದರಿಂದ ಭಯಭೀತನಾದ ಪತಿ ತೆಲಿಗರ ಹನುಮಂತ, ಪತ್ನಿ ಆತ್ಮಹತ್ಯೆ ಪ್ರಕರಣದ ಆರೋಪ ತನ್ನ ಮೇಲೆ ಬರುವುದು ಎಂದು ತನ್ನ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಪೊಲೀಸ್ ಮೂಲಗಳು ತಿಳಿಸಿವೆ.
ಕಳೆದ ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದ ದಂಪತಿಗಳಿಬ್ಬರ ಜೀವನ ಆತ್ಮಹತ್ಯೆಯಲ್ಲಿ ಅಂತ್ಯವಾಗಿದೆ. ಈ ಕುರಿತು ಹಲವಾಗಲು ಪೊಲೀಸ್ ಠಾಣೆಯಲ್ಲಿ ಹುಡುಗಿಯ ತಂದೆ ಮತ್ತು ಹುಡುಗನ ಸಹೋದರ ಪ್ರತ್ಯೇಕ ದೂರು-ಪ್ರತಿದೂರು ನೀಡಿದ್ದು, ಎರಡೂ ಕಡೆಯಿಂದ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು
ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು
Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು
Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು
Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು
MUST WATCH
ಹೊಸ ಸೇರ್ಪಡೆ
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ