ಶಾಲೆ ವಿದ್ಯಾರ್ಥಿನಿ ಸೇರಿ ಕುರುಗೋಡು ತಾಲೂಕಿನಲ್ಲಿ 17 ಕೋವಿಡ್ ಪ್ರಕರಣಗಳು ಪತ್ತೆ
Team Udayavani, Jan 18, 2022, 11:42 AM IST
ಕುರುಗೋಡು: ಕೊರೊನಾ ಹಟ್ಟಹಾಸಕ್ಕೆ ಇಡೀ ದೇಶದ ಜನತೆ ಆತಂಕಕ್ಕೆ ಒಳ್ಳಗಾಗಿದ್ದು, ಗ್ರಾಮೀಣ ಪ್ರದೇಶದ ಶಾಲೆ ಮಕ್ಕಳಿಗೂ ಸೋಂಕು ತಗುಲಿದ್ದು ಮಕ್ಕಳ ಪೋಷಕರಲ್ಲಿ ಆತಂಕದ ಮನೆ ಮಾಡಿದೆ.
ಇದರ ಪರಿಣಾಮ ಸಮೀಪದ ಪಟ್ಟಣ ಶೇರುಗು ಗ್ರಾಮದ ವಿದ್ಯಾರ್ಥಿನಿ ಗುತ್ತಿಗೆನೂರು ಗ್ರಾಮದ ಸರಕಾರಿ ಪ್ರೌಢ ಶಾಲೆ ಯಲ್ಲಿ ಎಸ್. ಎಸ್. ಎಲ್. ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ಗೆ ಕೊರೊನಾ ಸೋಂಕು ಇರುವುದು ಸೋಮವಾರ ದೃಢವಾಗಿದೆ.
ಕಳೆದ ನಾಲ್ಕು ಐದು ದಿನಗಳ ಹಿಂದೆ ವಿದ್ಯಾರ್ಥಿನಿ ಕೊರೊನಾ ಲಸಿಕೆ ಪಡೆದಿದ್ದಳು, ನಂತರ ಎರಡು ದಿನ ಮೇಲ್ಪಟ್ಟು ಜ್ವರ, ನೆಗಡಿ, ಕೆಮ್ಮು ಕಾಣಿಸಿಕೊಂಡಿವೆ ಇದರಿಂದ ಒರ್ವಾಯಿ ಪ್ರಾಥಮಿಕ ಅರೋಗ್ಯ ಕೇಂದ್ರಕ್ಕೆ ಚಿಕಿತ್ಸೆ ಪಡೆಯಲು ತೆರಳಿದ್ದಾರೆ. ಅಧಿಕಾರಿಗಳು ವಿದ್ಯಾರ್ಥಿನಿಗೆ ಕೊರೊನಾ ಪರೀಕ್ಷೆ ಮಾಡಿ ಹೆಚ್ಚುವರಿ ವರದಿಗೆ ವಿಮ್ಸ್ ಆಸ್ಪತ್ರೆಗೆ ಕಳಿಸಿದ್ದಾರೆ. ನಂತರ ಪಾಸಿಟಿವ್ ಇರುವುದು ದೃಢ ವಾಗಿದೆ.
ವಿದ್ಯಾರ್ಥಿ ಜ.12 ರಿಂದ ಶಾಲೆಗೆ ಇಲ್ಲಿವರೆಗೆ ಶಾಲೆಗೆ ಬಂದಿಲ್ಲ. ವಿದ್ಯಾರ್ಥಿ ಗೆ ಕೊರೊನಾ ಸೋಂಕು ದೃಢವಾದ ಹಿನ್ನಲೆ ಶಾಲೆಯ ಸುತ್ತಮುತ್ತ ಹಾಗೂ ಕೊಠಡಿಗಳಲ್ಲಿ ಸ್ಯಾನಿಟೈಜಾರ್ ಸಿಂಪರಣೆ ಮಾಡಿದ್ದಾರೆ.
ವಿದ್ಯಾರ್ಥಿ ಮನೆಯಲ್ಲೇ ಹೋಮ್ ಕ್ವಾರಂಟೈನ್ ಆಗಿದ್ದಾಳೆ. ಅಲ್ಲದೆ 9ನೇ ತರಗತಿ ಹಾಗೂ 10ನೇ ತರಗತಿ ಒಟ್ಟು 149 ವಿದ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ. ವಿದ್ಯಾರ್ಥಿಗಳ ಕೊರೊನಾ ವರದಿ ಬರುವ ತನಕ ಶಾಲೆಗೆ ಬರದಂತೆ ತಿಳಿಸಿದ್ದಾರೆ. ಹಾಗೂ ವಿದ್ಯಾರ್ಥಿನಿ ಕುಟುಂಬಸ್ಥರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ.
ಕುರುಗೋಡು ಸೇರಿದಂತೆ ಬೈಲೂರ್, ಸಿದ್ದಮ್ಮನಹಳ್ಳಿ, ಸೋಮಲಾಪುರ, ಸೋಮಸಮುದ್ರ, ಎರಂಗಳ್ಳಿ, ಎಮ್ಮಿಗನೂರು, ತಿಮ್ಮಲಾಪುರ, ಸೇರಿದಂತೆ ಒಟ್ಟು 17 ಕೊರೊನಾ ಪ್ರಕರಣಗಳು ಕಂಡುಬಂದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ
MUST WATCH
ಹೊಸ ಸೇರ್ಪಡೆ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್