ವಾರ ಕಳೆದರೂ ಕಾಲೇಜುಗಳತ್ತ ಮುಖಮಾಡದ ವಿದ್ಯಾರ್ಥಿಗಳು!

ಶೇ.60ರಷ್ಟು ವಿದ್ಯಾರ್ಥಿಗಳು ಆನ್‌ಲೈನ್‌ ತರಗತಿಗಳಲ್ಲಿ ಭಾಗಿ

Team Udayavani, Nov 24, 2020, 7:11 PM IST

ವಾರ ಕಳೆದರೂ ಕಾಲೇಜುಗಳತ್ತ ಮುಖಮಾಡದ ವಿದ್ಯಾರ್ಥಿಗಳು!

ಬಳ್ಳಾರಿ: ಕೋವಿಡ್‌ ಸೋಂಕಿನ ಭೀತಿಯಿಂದ ಕಳೆದ 8 ತಿಂಗಳಿಂದ ಮುಚ್ಚಲಾಗಿದ್ದ ಕಾಲೇಜುಗಳನ್ನು ತೆರೆದು ಒಂದು ವಾರ ಕಳೆದರೂ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳು ನಿರೀಕ್ಷಿತ ಪ್ರಮಾಣದಲ್ಲಿ ಕಾಲೇಜುಗಳತ್ತ ಮುಖ ಮಾಡುತ್ತಿಲ್ಲ. ಕೋವಿಡ್‌ ಪರೀಕ್ಷೆ ಮಾಡಿಸಿಕೊಂಡಿರುವ ವರದಿಯನ್ನು ಸಹ ಕಾಲೇಜುಗಳಿಗೆ ಸಲ್ಲಿಸುವಲ್ಲಿ ವಿದ್ಯಾರ್ಥಿಗಳು ಹಿಂಜರಿಯುತ್ತಿದ್ದು ಉಪನ್ಯಾಸಕರನ್ನು ಚಿಂತೆಗೀಡು ಮಾಡಿದೆ.

ಕೋವಿಡ್ ಸೋಂಕಿನ ಪ್ರಮಾಣ ನಿಯಂತ್ರಣಕ್ಕೆ ಬರುತ್ತಿರುವುದರಿಂದ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ತರಗತಿ ನಡೆಸಲು ರಾಜ್ಯ ಸರ್ಕಾರ ನ. 17ರಂದು ಆದೇಶ ಹೊರಡಿಸಿತು. ಜತೆಗೆ ಕೋವಿಡ್‌ ನಿಯಮಗಳನ್ನು ಸಹ ಕಡ್ಡಾಯವಾಗಿ ಪಾಲಿಸುವಂತೆಯೂ ಸೂಚಿಸಿತು. ಅದರಂತೆ 8 ತಿಂಗಳಿಂದ ಮುಚ್ಚಲಾಗಿದ್ದ ಪದವಿ ಕಾಲೇಜುಗಳನ್ನು ತೆರೆದು ವಿದ್ಯಾರ್ಥಿಗಳಿಗೆ ಕೋವಿಡ್‌ ಟೆಸ್ಟ್‌ ಮಾಡಿಸಿದರೂ ವಿದ್ಯಾರ್ಥಿಗಳು ನಿರೀಕ್ಷಿತ ಪ್ರಮಾಣದಲ್ಲಿ ಕಾಲೇಜುಗಳಿಗೆ ಬರುತ್ತಿಲ್ಲ. ಕೋವಿಡ್‌ ಪರೀಕ್ಷೆ ಮಾಡಿಸಿಕೊಂಡವರು ಸಹ ಕಾಲೇಜುಗಳಿಗೆ ವರದಿಗಳನ್ನೂ ನೀಡುತ್ತಿಲ್ಲ. ತರಗತಿಗಳಿಗೂ ನಿರೀಕ್ಷಿತ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಹಾಜರಾಗುತ್ತಿಲ್ಲ.

963 ವಿದ್ಯಾರ್ಥಿಗಳಿಂದ ವರದಿ: ಬಳ್ಳಾರಿ ಜಿಲ್ಲಾ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ಬಳ್ಳಾರಿ ಜಿಲ್ಲೆಯಲ್ಲೊಂದೇ ಕಳೆದ ಒಂದು ವಾರದಿಂದ ನಡೆದ ಕೋವಿಡ್‌ ಟೆಸ್ಟ್‌ನಲ್ಲಿ ಸುಮಾರು 6ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನುಪರೀಕ್ಷಿಸಲಾಗಿದೆ. ಈ ಪೈಕಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪಾಸಿಟಿವ್‌ ಬಂದಿದೆ.

ಇಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಬಳ್ಳಾರಿ, ಕೊಪ್ಪಳ ಜಿಲ್ಲೆಗಳು ಬರಲಿದ್ದು, ಎರಡು ಜಿಲ್ಲೆಗಳಲ್ಲಿ 120 ಪದವಿ ಕಾಲೇಜುಗಳಿವೆ. ಈ 120 ಪದವಿ ಕಾಲೇಜುಗಳ ಪೈಕಿ ಕೋವಿಡ್‌ ಟೆಸ್ಟ್‌ ಮಾಡಿಸಿಕೊಂಡು ತಮ್ಮ ತಮ್ಮ ಕಾಲೇಜುಗಳಲ್ಲಿ ಕೇವಲ (ಎರಡು ಜಿಲ್ಲೆಗಳಲ್ಲಿ ಪುರುಷ 636, ಮಹಿಳೆ 327) 963 ವಿದ್ಯಾರ್ಥಿಗಳು ಮಾತ್ರ ವರದಿ ನೀಡಿದ್ದಾರೆ. ಸಿರುಗುಪ್ಪದಲ್ಲಿ ಒಬ್ಬ ವಿದ್ಯಾರ್ಥಿಗೆ ಪಾಸಿಟಿವ್‌ ಬಂದಿದೆ. ಈ ವಿಷಯವನ್ನು ದೂರವಾಣಿ ಮೂಲಕ ತಿಳಿಸಿದ್ದಾರೆ ಹೊರತು, ಕಾಲೇಜಿಗೆ ವರದಿ ಸಲ್ಲಿಸಿಲ್ಲ ಎಂದು ವಿಸ್‌ಕೆ ವಿವಿಯ ಪ್ರೊ| ಜಿಲಾನಿಬಾಷಾ ಮಾಹಿತಿ ನೀಡಿದ್ದಾರೆ.

ವಿದ್ಯಾರ್ಥಿಗಳಿಗಾಗಿ ಸದ್ಯ ಕಾಲೇಜುಗಳಲ್ಲೇ ಕೋವಿಡ್‌ಟೆಸ್ಟ್‌ ಮಾಡಲಾಗುತ್ತಿದೆ. ಕೆಲವರು ಕಾಲೇಜುಗಳಲ್ಲಿ ಟೆಸ್ಟ್‌ ಮಾಡಿಸಿಕೊಂಡರೆಇನ್ನು ಕೆಲವರು ಬೇರೆಡೆಯೂ ಟೆಸ್ಟ್‌ ಮಾಡಿಸಿಕೊಂಡಿದ್ದಾರೆ. ಅದರಲ್ಲಿ ಕೆಲವರು ಅಧಿಕೃತ ವರದಿಗಳನ್ನು ಕಾಲೇಜುಗಳಿಗೆ ನೀಡುತ್ತಿಲ್ಲ. ಎಲ್ಲ ವಿದ್ಯಾರ್ಥಿಗಳಿಗೂ ಆರ್‌ಟಿ-ಪಿಸಿಆರ್‌ ಮೂಲಕ ಟೆಸ್ಟ್‌ಮಾಡುತ್ತಿರುವ ಹಿನ್ನೆಲೆಯಲ್ಲಿ ಕೆಲವರ ವರದಿ ಬರಲು ಒಂದಷ್ಟು ವಿಳಂಬವಾಗಬಹುದು. ಆದರೆ, ವರದಿಗಳನ್ನು ಪಡೆದಿರುವ ವಿದ್ಯಾರ್ಥಿಗಳು ಸಹ ಕಾಲೇಜುಗಳಿಗೆ ಅದನ್ನು ಸಲ್ಲಿಸಿ ಭೌತಿಕ ತರಗತಿಗಳಿಗೆ ಹಾಜರಾಗದಿರಲು ಕಾರಣ ತಿಳಿಯುತ್ತಿಲ್ಲ ಎಂದವರು ಬೇಸರ ವ್ಯಕ್ತಪಡಿಸುತ್ತಾರೆ.

ಶೇ. 56ರಿಂದ 60ರಷ್ಟು ಆನ್‌ ಲೈನ್‌ನಲ್ಲಿ ಭಾಗಿ: ವಿಎಸ್‌ಕೆ ವಿವಿ ವ್ಯಾಪ್ತಿಯಲ್ಲಿನ ಬಳ್ಳಾರಿ-ಕೊಪ್ಪಳ ಜಿಲ್ಲೆಗಳ 120 ಕಾಲೇಜುಗಳಲ್ಲಿ ಅ. 15ರಿಂದಲೇ ಆನ್‌ಲೈನ್‌ ತರಗತಿಗಳನ್ನು ಆರಂಭಿಸಲಾಗಿದೆ. ಶೇ. 50ರಿಂದ 60ರಷ್ಟು ವಿದ್ಯಾರ್ಥಿಗಳು ಆನ್‌ಲೈನ್‌ ತರಗತಿಗಳಲ್ಲಿ ಭಾಗವಹಿಸುತ್ತಾರೆ. ಇನ್ನುಳಿದ ಶೇ. 40ರಿಂದ 50ರಷ್ಟು ವಿದ್ಯಾರ್ಥಿಗಳಿಗೆ ನೆಟ್‌ ವರ್ಕ್‌ ಸಮಸ್ಯೆ ಇರಬಹುದು. ಮೊಬೈಲ್‌ ಇಲ್ಲದಿರಬಹುದು ಅಥವಾ ಇನ್ಯಾವುದೇ ಸಮಸ್ಯೆ ಇರಬಹುದು. ಆನ್‌ಲೈನ್‌ ತರಗತಿಗೆ ಸಂಬಂಧಿ ಸಿದಂತೆ ವಿವಿ ಕ್ಯಾಂಪಸ್‌ ಸೇರಿ ಎಲ್ಲ ಪದವಿ ಕಾಲೇಜುಗಳಲ್ಲೂ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಲಾಗಿದೆ.

ಝೂಮ್‌, ಗೂಗಲ್‌ ಮೀಟ್‌, ಫೆಡ್‌ ಎಕ್ಸ್‌ ಆ್ಯಪ್‌ಗ್ಳ ಮೂಲಕ ಆನ್‌ಲೈನ್‌ ತರಗತಿಗಳನ್ನು ನಡೆಸಲಾಗುತ್ತಿದೆ. ಆನ್‌ಲೈನ್‌ನಲ್ಲಿ ಪಾಠ ಅರ್ಥವಾಗದ ವಿದ್ಯಾರ್ಥಿಗಳಿಗೆ ತಮ್ಮ ಕಾಲೇಜುಗಳಿಗೆ ತೆರಳಿ ಭೌತಿಕ ತರಗತಿಗಳನ್ನು ಪಡೆಯಲೂ ಅವಕಾಶ ನೀಡಲಾಗಿದೆ. ಆದರೂ,ವಿದ್ಯಾರ್ಥಿಗಳು ನಿರೀಕ್ಷಿತ ಪ್ರಮಾಣದಲ್ಲಿ ಕಾಲೇಜುಗಳತ್ತ ಮುಖ ಮಾಡದಿರುವುದು ಉಪನ್ಯಾಸಕರನ್ನು ಚಿಂತೆಗೀಡು ಮಾಡಿದೆ.

ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ವ್ಯಾಪ್ತಿಯ ಬಳ್ಳಾರಿ-ಕೊಪ್ಪಳ ಜಿಲ್ಲೆಗಳಲ್ಲಿ 120 ಪದವಿ ಕಾಲೇಜುಗಳಿದ್ದು, ನ. 17ರಿಂದ ಭೌತಿಕ ತರಗತಿಗಳು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಕಾಲೇಜುಗಳಿಗೆ ಆಗಮಿಸುತ್ತಿಲ್ಲ. ಆನ್‌ಲೈನ್‌ ತರಗತಿಯಲ್ಲಿ ಶೇ. 70ರಷ್ಟು ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದಾರೆ.- ಪ್ರೊ| ತುಳಸಿಮಾಲಾ, ಕುಲಸಚಿವರು, ಆಡಳಿತ ವಿಭಾಗ, ವಿಎಸ್‌ಕೆ ವಿವಿ

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.