ಕಂಪ್ಲಿಗೂ ಕಾಲಿಟ್ಟಿತು ಕೋವಿಡ್

ಶಿಬಿರದಿನ್ನಿ ಮಾರುತಿನಗರ ನಿವಾಸಿ 28 ವರ್ಷದ ವಲಸೆ ಕಾರ್ಮಿಕನಲ್ಲಿ ಸೋಂಕು ದೃಢ

Team Udayavani, May 12, 2020, 11:37 AM IST

ಕಂಪ್ಲಿಗೂ ಕಾಲಿಟ್ಟಿತು ಕೋವಿಡ್

ಕಂಪ್ಲಿ: ತಾಲೂಕಿನ ಶಿಬಿರದಿನ್ನಿ ಮಾರುತಿನಗರದಲ್ಲಿ ಕೊರೊನಾ ವಾರಿಯರ್ಸ್‌ ಪರಿಶೀಲನೆ ನಡೆಸಿದರು.

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಮತ್ತೂಂದು ಕೋವಿಡ್‌-19 ಪತ್ತೆಯಾಗಿದ್ದು, ಜಿಲ್ಲೆಯ ಕಂಪ್ಲಿ ತಾಲೂಕಿನ ಶಿಬಿರದಿನ್ನಿ ಮಾರುತಿನಗರದ ನಿವಾಸಿಯೊಬ್ಬರಲ್ಲಿ ಕೋವಿಡ್‌
-19 ಸೋಂಕು ಆವರಿಸಿರುವುದು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಪ್ರಕರಣಗಳ ಸಂಖ್ಯೆ 16ಕ್ಕೆ ಏರಿದಂತಾಗಿದೆ.

ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಕಳೆದೆರಡು ದಿನಗಳ ಹಿಂದಷ್ಟೇ ಬೆಂಗಳೂರಿನಿಂದ ಬಂದಿದ್ದ ಕಂಪ್ಲಿಯ ಶಿಬಿರದಿನ್ನಿಯ ವಲಸೆ ಕಾರ್ಮಿಕ 28 ವರ್ಷದ ವ್ಯಕ್ತಿಗೆ ಮಹಾಮಾರಿ ಕೋವಿಡ್ ಸೋಂಕು ಆವರಿಸಿದ್ದು, ಈ ಕುರಿತು ಮೇ 12ರ ಮೀಡಿಯಾ ಬುಲೆಟಿನ್‌ನಲ್ಲಿ ಅ ಧಿಕೃತ ಘೋಷಣೆಯೊಂದೇ ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಸೋಂಕಿತನನ್ನು ಬಳ್ಳಾರಿಯ ಕೋವಿಡ್‌ (ಜಿಲ್ಲಾ) ಆಸ್ಪತ್ರೆಗೆ ಕರೆತರಲಾಗಿದ್ದು, ಚಿಕಿತ್ಸೆ ಆರಂಭಿಸಲಾಗಿದೆ. ಅಲ್ಲದೇ, ಸೋಂಕಿತನೊಂದಿಗೆ ಸರ್ಕಾರಿ ಬಸ್‌ ನಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ಬಂದಿದ್ದ ಸಹ ಪ್ರಯಾಣಿಕರನ್ನು ಸಹ ಸಾಂಸ್ಥಿಕ ಕ್ವಾರಂಟೈನ್‌ ಮಾಡಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ ಎಂದು ಆರೋಗ್ಯ ಇಲಾಖೆ ವೈದ್ಯಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಸೋಂಕಿತನಿಗೆ ತಾಯಿ, ಪತ್ನಿ, ಮಗು ಇದ್ದಾರೆ ಎಂದು ತಿಳಿದು ಬಂದಿದೆ. ಇವರ ಗಂಟಲು ದ್ರವವನ್ನು ಸಹ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬರಬೇಕಿದೆ ಅಷ್ಟೇ. ಸದ್ಯ ಇವರನ್ನೂ ಕ್ವಾರಂಟೈನ್‌ ಮಾಡಲಾಗಿದೆ. ಸೋಂಕಿತನು ಕಳೆದ ಮೇ 5 ರಂದು ಬೆಂಗಳೂರಿನಿಂದ ನೆರೆಯ ಕೊಪ್ಪಳ ಜಿಲ್ಲೆಯ ಗಂಗಾವತಿಗೆ ಸರ್ಕಾರಿ ಬಸ್‌ನಲ್ಲಿ ಬಂದಿದ್ದು, ಅಲ್ಲಿಂದ ಆಟೋ ಮೂಲಕ ಕಂಪ್ಲಿ ಶಿಬಿರದಿನ್ನಿಯ ಮಾರುತಿ ನಗರಕ್ಕೆ ಬಂದಿದ್ದಾನೆ. ಗಂಗಾವತಿಯಲ್ಲಿ ಸೋಂಕಿತನನ್ನು ಇಳಿಸಿದ ಸರ್ಕಾರಿ ಬಸ್‌, ಅಲ್ಲಿಂದ ಮುಂದೆ ಕೊಪ್ಪಳಕ್ಕೆ ಹೋಗಿದೆ. ಅಲ್ಲದೇ, ಸೋಂಕಿತನೊಂದಿಗೆ
ಸರ್ಕಾರಿ ಬಸ್‌ನಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ಬಂದಿದ್ದ 28 ಸಹ ಪ್ರಯಾಣಿಕರನ್ನು ಪ್ರೈಮರಿ ಕಾಂಟ್ಯಾಕ್ಟ್ ಎಂದು ಗುರುತಿಸಿ ಸಾಂಸ್ಥಿಕ ಕ್ವಾರಂಟೈನ್‌ ಮಾಡಲು ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲಾಡಳಿತ ಸಿದ್ಧತೆ ನಡೆಸಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

16ಕ್ಕೇರಿದ ಪ್ರಕರಣಗಳ ಸಂಖ್ಯೆ: ಬಳ್ಳಾರಿ ಜಿಲ್ಲೆಯಲ್ಲಿ ಈಗಾಗಲೇ 15 ಪ್ರಕರಣಗಳಿದ್ದು, ಕಂಪ್ಲಿಯ 1 ಸೇರಿ 16ಕ್ಕೆ ಏರಿದಂತಾಗಿದೆ. ಹೊಸಪೇಟೆಯ ಒಂದೇ ಕುಟುಂಬದ 11 ಜನರ ಪೈಕಿ ಈಗಾಗಲೇ 10 ಜನರು ಸೋಂಕಿನಿಂದ ಗುಣಮುಖರಾಗಿ ಮನೆಗೆ ಸೇರಿದ್ದಾರೆ. ಜತೆಗೆ ಬಳ್ಳಾರಿ ನಗರದ ಗುಗ್ಗರಹಟ್ಟಿ ಪ್ರದೇಶದ ವ್ಯಕ್ತಿ ಸಹ ಗುಣಮುಖರಾಗಿದ್ದಾರೆ. ಇದೀಗ
ಬಳ್ಳಾರಿ ಕೌಲ್‌ಬಜಾರ್‌ನ 1, ಸಂಡೂರು ತಾಲೂಕು ಕೃಷ್ಣನಗರ 1, ಸಿರುಗುಪ್ಪ ತಾಲೂಕು ಎಚ್‌.ಹೊಸಳ್ಳಿ 1, ಕಂಪ್ಲಿ 1, ಹೊಸಪೇಟೆ 1 ಸೇರಿ ಒಟ್ಟು 5 ಸಕ್ರಿಯ ಪ್ರಕರಣಗಳಾಗಿವೆ.

ಜನತೆಯಲ್ಲಿ ಹೆಚ್ಚಿದ ಆತಂಕ
ಕಂಪ್ಲಿ: ಪಟ್ಟಣದಲ್ಲಿ ಮಾರಕ ಶಿಬಿರದಿನ್ನಿ ಮಾರುತಿನಗರ ನಿವಾಸಿ 28 ವರ್ಷದ ವಲಸೆ ಕಾರ್ಮಿಕನಲ್ಲಿ ಸೋಂಕು ದೃಢ ಸೋಂಕು ಪ್ರಕರಣ ದಾಖಲಾಗಿದ್ದು, ಸಾರ್ವಜನಿಕರಲ್ಲಿ ಆತಂಕ
ಮೂಡಿಸಿದೆ. ಕಳೆದ ಹಲವು ದಿನಗಳಿಂದ ಪಟ್ಟಣದಲ್ಲಿ ಬೇರೆ ಊರುಗಳಿಂದ ಆಗಮಿಸಿದ ಸುಮಾರು 50ಕ್ಕೂ ಅಧಿಕ ಜನರನ್ನು ಕ್ವಾರಂಟೈನ್‌ನಲ್ಲಿ ಇಡಲಾಗಿತ್ತು. ಜೊತೆಗೆ ಸೋಂಕಿನ ಲಕ್ಷಣಗಳು ಕಂಡು ಬಂದವರ ಗಂಟಲು ದ್ರವವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಇದರಲ್ಲಿ ಒಬ್ಬರದು ಪಾಸಿಟೀವ್‌ ಬಂದಿರುವುದು ದೃಢವಾಗಿದ್ದು, ಸೋಂಕಿತ ವ್ಯಕ್ತಿ
ವಾಸವಾಗಿರುವ ಪಟ್ಟಣದ ಶಿಬಿರದಿನ್ನೆ ಪ್ರದೇಶವನ್ನು ಕಂಟೇನ್ಮೆಂಟ್‌ ವಲಯವನ್ನಾಗಿ ರೂಪಿಸುತ್ತಿದ್ದು, ಆರೋಗ್ಯ, ಪುರಸಭೆ, ಕಂದಾಯ ಮತ್ತು ಪೊಲೀಸ್‌ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ಕೈಗೊಂಡಿದ್ದಾರೆ. ಈ ಪ್ರದೇಶಕ್ಕೆ ಒಳ ಬರುವ, ಹೊರ ಹೋಗುವ ಮಾರ್ಗ ಬಂದ್‌ ಮಾಡಲಿದ್ದಾರೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿದ ನಂತರ ಇನ್ನು ಹೆಚ್ಚಿನ ವಿವರಗಳು ತಿಳಿದು ಬರಲಿದೆ.

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.