ಇಂದು ಲಸಿಕಾ ಆಂದೋಲನ
Team Udayavani, Sep 22, 2021, 1:48 PM IST
ಬಳ್ಳಾರಿ: ಜಿಲ್ಲೆಯ ಬಳ್ಳಾರಿ ಗ್ರಾಮೀಣ, ಸಿರಗುಪ್ಪಹಾಗೂ ಕುರುಗೋಡು ತಾಲೂಕುಗಳಲ್ಲಿಸೆ. 22ರಂದು ಬೃಹತ್ ಪ್ರಮಾಣದ ವಿಶೇಷಕೋವಿಡ್ ಲಸಿಕಾ ನೀಡಿಕೆ ಆಂದೋಲನ ನಡೆಸಲಾಗುತ್ತಿದೆ.
ಇದಕ್ಕಾಗಿ ಎಲ್ಲರೀತಿಯ ಸಿದ್ಧತೆಗಳನ್ನು ಈಗಾಗಲೇಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿಅವರು ತಿಳಿಸಿದ್ದಾರೆ.ಲಸಿಕಾಕರಣ ಕಡಿಮೆಪ್ರಮಾಣವಾಗಿರುವ ಹಿನ್ನೆಲೆಯಲ್ಲಿಈ ವಿಶೇಷ ಲಸಿಕಾ ಆಂದೋಲನವನ್ನು ಬಳ್ಳಾರಿಗ್ರಾಮೀಣ, ಸಿರಗುಪ್ಪ ಮತ್ತು ಕುರುಗೋಡುತಾಲೂಕುಗಳಾದ್ಯಂತ ಹಮ್ಮಿಕೊಳ್ಳಲಾಗಿದೆ.ಇದಕ್ಕಾಗಿ 410 ತಂಡಗಳನ್ನು ರಚಿಸಲಾಗಿದ್ದು,ಈ ತಂಡಗಳು ಬುಧವಾರ (ಸೆ. 22ರಂದು)ಬೆಳಗ್ಗೆ 7ರಿಂದ ಸಂಜೆಯವರೆಗೆ ವಿವಿಧೆಡೆಸ್ಥಾಪಿಸಲಾಗಿರುವ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡಲಿವೆ ಎಂದು ಅವರು ತಿಳಿಸಿದ್ದಾರೆ.
ಲಸಿಕಾ ಕೇಂದ್ರಗಳ ಗುರುತು, ತಂಡಗಳ ನೇಮಕಮತ್ತು ಮೇಲ್ವಿಚಾರಣೆಗಾಗಿ ನೋಡಲ್ ಅಧಿಕಾರಿಗಳನ್ನು ನೇಮಕ ಸೇರಿದಂತೆ ಇದಕ್ಕೆ ಬೇಕಾದಎಲ್ಲ ಸಿದ್ಧತೆಗಳನ್ನು ಜಿಲ್ಲಾಡಳಿತ ಮಾಡಿಕೊಂಡಿದೆಎಂದು ಜಿಲ್ಲಾಧಿ ಕಾರಿ ಪವನಕುಮಾರ ಮಾಲಪಾಟಿಅವರು ತಿಳಿಸಿದ್ದಾರೆ.
ಸೋಮವಾರ ಸಂಜೆ ಈ ತಾಲೂಕುಗಳತಹಶೀಲ್ದಾರ್ರು, ನೋಡಲ್ ಅ ಧಿಕಾರಿಗಳುಮತ್ತು ಇನ್ನಿತರ ಅಧಿ ಕಾರಿಗಳೊಂದಿಗೆ ವಿಡಿಯೋಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ನಂತರ ಅವರುಮಾತನಾಡಿದರು.ಬಳ್ಳಾರಿ ಗ್ರಾಮೀಣ, ಸಿರಗುಪ್ಪ, ಕುರುಗೋಡುತಾಲೂಕುಗಳಲ್ಲಿ 60 ಸಾವಿರ ಡೋಸ್ಲಸಿಕೆ ನೀಡುವ ಗುರಿ ಹಾಕಿಕೊಳ್ಳಲಾಗಿದೆ.
ಕೋವಿಡ್ ಲಸಿಕೆ ನೀಡಿಕೆಗೆ ಸಂಬಂಧಿ ಸಿದಂತೆಹಾಕಿಕೊಂಡಿರುವ ಗುರಿ ಸಾಧಿ ಸಲು ಏನೆಲ್ಲಾಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಯಾವಸಿದ್ಧತೆಗಳನ್ನು ಮಾಡಬೇಕು ಎಂಬುದಕ್ಕೆ ಸಂಬಂಧಿಸಿದ ಸರಕಾರ ನಿರ್ದೇಶನ ನೀಡಿದ್ದು, ಅದರಂತೆಜಿಲ್ಲಾಡಳಿತ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಎಲ್ಲ ತಾಲೂಕುಗಳಲ್ಲಿ ಕಂದಾಯಇಲಾಖೆ, ನಗರ ಸ್ಥಳೀಯ ಸಂಸ್ಥೆ,ತಾಪಂ, ಗ್ರಾಮೀಣಾಭಿವೃದ್ಧಿ ಮತ್ತುಪಂಚಾಯತ್ರಾಜ್ ಇಲಾಖೆ, ಆರೋಗ್ಯಮತ್ತು ಕುಟುಂಬ ಕಲ್ಯಾಣ ಇಲಾಖೆಅ ಧಿಕಾರಿಗಳು ಮತ್ತು ಸಿಬ್ಬಂದಿ ಸೇರಿದಂತೆವಿವಿಧ ಇಲಾಖೆಗಳ ಅಧಿಕಾರಿಗಳುಮತ್ತು ಸಿಬ್ಬಂದಿ ಈ ಬೃಹತ್ ವಿಶೇಷ ಲಸಿಕಾಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಜನರುಸಹ ಮುಂದೆ ಬಂದು ಲಸಿಕೆ ಪಡೆದುಕೊಂಡುಈ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಜನರು,ಗ್ರಾಪಂ ಸದಸ್ಯರು, ನಗರ ಸ್ಥಳೀಯ ಸಂಸ್ಥೆಗಳಸದಸ್ಯರು, ತಾಪಂ ಮತ್ತು ಜಿಪಂ ಸದಸ್ಯರು,ಶಾಸಕರು, ಸಂಸದರು ಸೇರಿದಂತೆ ಎಲ್ಲಜನಪ್ರತಿನಿ ಧಿಗಳು ಮುಂದೆ ಬಂದು ಈ ಲಸಿಕಾಕಾರ್ಯಕ್ರಮದಲ್ಲಿ ಅತ್ಯಂತ ಉತ್ಸಾಹದಿಂದಭಾಗವಹಿಸಬೇಕು ಎಂದು ಮನವಿ ಮಾಡಿದರು.ತಾವು ಲಸಿಕೆ ಹಾಕಿಸಿಕೊಂಡಿರುತ್ತೀರಿ. ತಾವುಹಾಕಿಕೊಂಡರಾಯ್ತು ಅಂತ ಅಂದುಕೊಳ್ಳದೇ ತಮ್ಮಅಕ್ಕಪಕ್ಕದ ಮನೆಯಲ್ಲಿ ಲಸಿಕೆ ಹಾಕಿಸಿಕೊಳ್ಳದವರಮನವೊಲಿಸಿ ಅವರನ್ನು ಲಸಿಕಾಕೇಂದ್ರಗಳಿಗೆ ಕರೆ ತಂದು ಲಸಿಕೆ ಹಾಕಿಸುವ ಕೆಲಸ ಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಉಳಿದೆಡೆ ಎಂದಿನಂತೆ ಲಸಿಕಾ ನೀಡಿಕೆ ಪ್ರಕ್ರಿಯೆನಡೆಯಲಿವೆ ಎಂದು ಅವರು ತಿಳಿಸಿದರು. ಈಸಂದರ್ಭದಲ್ಲಿ ಜಿಪಂ ಸಿಇಒ ಕೆ.ಆರ್. ನಂದಿನಿ,ಅಪರ ಜಿಲ್ಲಾ ಧಿಕಾರಿ ಪಿ.ಎಸ್.ಮಂಜುನಾಥ, ಎಸಿಆಕಾಶ ಶಂಕರ್, ಡಿಎಚ್ಒ ಡಾ| ಜನಾರ್ಧನ್ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ
MUST WATCH
ಹೊಸ ಸೇರ್ಪಡೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ