ವಾರಿಯರ್ಸ್‌ ಕುಟುಂಬಕ್ಕೆ ಸಿಕ್ಕಿಲ್ಲ ಪರಿಹಾರ

ಪೊಲೀಸರು, ಆರೋಗ್ಯ ಇಲಾಖೆಯ ತಲಾ 8 ಸಿಬ್ಬಂದಿ, ಇಬ್ಬರು ಪೌರ ಕಾರ್ಮಿಕರ ಸಾವು

Team Udayavani, Oct 21, 2020, 7:07 PM IST

ballary-tdy-2

ಬಳ್ಳಾರಿ: ಗಣಿ ನಾಡು ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್‌ ಸೋಂಕನ್ನು ನಿಯಂತ್ರಿಸುವಲ್ಲಿ ಪೌರ ಕಾರ್ಮಿಕರು, ಪೊಲೀಸ್‌, ಆರೋಗ್ಯ ಇಲಾಖೆ ಹಗಲಿರುಳೆನ್ನದೇ ಕರ್ತವ್ಯನಿರ್ವಹಿಸಿದ್ದು ಮೂರು ಇಲಾಖೆಗಳಲ್ಲಿನ 18 ಜನ ಕೋವಿಡ್ ವಾರಿಯರ್ಸ್ ಮೃತಪಟ್ಟಿದ್ದಾರೆ. ಕೆಲವರಿಗೆ ಇನ್ನೂ ಪರಿಹಾರ ದೊರಕಿಲ್ಲ. ಜಿಲ್ಲೆಯ ವಿವಿಧ ಠಾಣೆಗಳಲ್ಲಿನ 8 ಜನ ಪೊಲೀಸರು, 8 ಮಂದಿ ಆರೋಗ್ಯ ಇಲಾಖೆ ಸಿಬ್ಬಂದಿ, ಇಬ್ಬರು ಪೌರ ಕಾರ್ಮಿಕರು ಕೋವಿಡ್‌ ಸೋಂಕಿಗೆ ಬಲಿಯಾಗಿದ್ದಾರೆ.

8 ಪೊಲೀಸರ ಬಲಿ: ಕೋವಿಡ್ ವೈರಸ್‌ ಹರಡದಂತೆ ತಡೆಯಲು ಜಾರಿಗೊಳಿಸಿದ್ದ ಲಾಕ್‌ಡೌನ್‌ ಅವಧಿಯಲ್ಲಿ ಜನರನ್ನು ನಿಯಂತ್ರಿಸಲು ಪೊಲೀಸರು ಹಗಲಿರುಳು ಶ್ರಮಿಸಿದರು. ಬಿರುಬಿಸಿಲನ್ನು ಲೆಕ್ಕಿಸದೆ ಇಡೀ ದಿನ ಕೋವಿಡ್ ಕರ್ತವ್ಯದಲ್ಲೇ ನಿರತರಾದರು. ಹೀಗೆ ವಿವಿಧೆಡೆ ಕರ್ತವ್ಯ ನಿರ್ವಹಿಸಿದ್ದ ಬಳ್ಳಾರಿಯ ಡಿಎಆರ್‌ ಪೇದೆ, ಗಾದಿಗನೂರು ಪೊಲೀಸ್‌ ಠಾಣೆಯ ಪೇದೆ, ಹೊಸಪೇಟೆ ಗ್ರಾಮೀಣ ಠಾಣೆಯ ಪೇದೆ, ಹಿರೇಹಡಗಲಿ ಠಾಣೆಯ ಪೇದೆ, ಹಗರಿಬೊಮ್ಮನ ಹಳ್ಳಿ ಠಾಣೆ ಪೇದೆ, ಹೊಸಪೇಟೆ ಸಂಚಾರಿ ಠಾಣೆ ಎಎಸ್‌ಐ, ಬಳ್ಳಾರಿ ಬ್ರೂಸ್‌ಪೇಟೆ ಪೊಲೀಸ್‌ ಠಾಣೆ ಪೇದೆ, ಡಿಎಆರ್‌ನ ಎಸ್‌ಐ ಸೇರಿ ಒಟ್ಟು 8 ಜನರಿಗೆ ಸೋಂಕು ಪತ್ತೆಯಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಪೊಲೀಸ್‌ ಇಲಾಖೆ ತಿಳಿಸಿದೆ.

ಆರೋಗ್ಯ ಇಲಾಖೆಯಲ್ಲೂ 8 ಸಾವು: ಕೋವಿಡ್‌ ಸೋಂಕು ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದ ಆರೋಗ್ಯ ಇಲಾಖೆಯಲ್ಲೂ 8 ಜನ ವಾರಿಯರ್ಗಳು ಮೃತಪಟ್ಟಿದ್ದಾರೆ. ಮನೆಮನೆಗೆ ಸಮೀಕ್ಷಾ ಕಾರ್ಯ ನಡೆಸುವುದರ ಜತೆಗೆ ವೃದ್ಧರು, ಗರ್ಭಿಣಿಯರು, ವಿವಿಧ ಕಾಯಿಲೆ ಗಳುಳ್ಳವರನ್ನು ಗುರುತಿಸಿ ಕೋವಿಡ್‌ ತಪಾಸಣೆಗೆ ಒಳಪಡಿಸುವುದರ ಮೂಲಕ ಸೋಂಕನ್ನು ಪತ್ತೆಹಚ್ಚುವಲ್ಲಿ ಫ್ರಂಟ್‌ಲೈನ್‌ನಲ್ಲಿ ಕಾರ್ಯನಿರ್ವಹಿಸಿದ್ದ 4 ಆಶಾ ಕಾರ್ಯಕರ್ತೆಯರಿಗೂ ಸೋಂಕು ಆವರಿಸಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕೋವಿಡ್‌ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಒಬ್ಬ ಸ್ಟಾಫ್‌ ನರ್ಸ್‌, ಒಬ್ಬ ಮನೋರೋಗ ತಜ್ಞ, ಆರೋಗ್ಯ ಕಾರ್ಯಕರ್ತೆ, ಒಬ್ಬ ಆರೋಗ್ಯ ನಿರೀಕ್ಷಕರು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಚ್‌.ಎಲ್‌. ಜನಾರ್ಧನ ತಿಳಿಸಿದ್ದಾರೆ.

ಇಬ್ಬರು ಪೌರ ಕಾರ್ಮಿಕರ ಸಾವು: ಕೋವಿಡ್‌ ಸಂದರ್ಭದಲ್ಲಿ ಎಲ್ಲೆಡೆ ಸ್ವಚ್ಛತೆ ಕಾಪಾಡುವಲ್ಲಿ ನಿರತವಾಗಿದ್ದ ಹರಪನಹಳ್ಳಿಯ ಪುರಸಭೆಯಲ್ಲಿ ಪೌರ ಕಾರ್ಮಿಕರಾಗಿ ಕರ್ತವ್ಯ ನಿರ್ವಹಿಸಿದ್ದ ಬಂಡಿ ಹನುಮಂತಪ್ಪ, ಬಳ್ಳಾರಿ ಮಹಾನಗರ ಪಾಲಿಕೆಯ ರಾಮಾಂಜಿನಮ್ಮ ಅವರು ಸೋಂಕಿನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಾದ್ಯಂತ ಒಟ್ಟು 18 ಜನರು ಮೃತಪಟ್ಟಿದ್ದಾರೆ.

ಬಹುತೇಕರಿಗೆ ಲಭಿಸಿಲ್ಲ ಪರಿಹಾರ: ಕೋವಿಡ್‌ ಸೋಂಕಿನಿಂದ ಮೃತಪಟ್ಟಿದ್ದ 18 ಕೋವಿಡ್ ವಾರಿಯರ್ಸ್ ಗಳಲ್ಲಿ ಬಹುತೇಕರಿಗೆ ಪರಿಹಾರ ಲಭಿಸಬೇಕಾಗಿದೆ. ಪೊಲೀಸ್‌ ಇಲಾಖೆಯಲ್ಲಿನ 8 ಪೊಲೀಸರಿಗೆ ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದ ತಲಾ 30 ಲಕ್ಷ ರೂ. ಪರಿಹಾರ ದೊರಕಿದೆ ಎನ್ನಲಾಗುತ್ತಿದೆ. ಇಬ್ಬರು ಪೌರ ಕಾರ್ಮಿಕರಲ್ಲಿ ಹರಪನಹಳ್ಳಿಯ ಬಂಡಿ ಹನುಮಂತಪ್ಪರಿಗೆ 30 ಲಕ್ಷ ರೂ.ಗಳ ಪರಿಹಾರ ನೀಡಲಾಗಿದೆ. ಇನ್ನುಳಿದ ಬಳ್ಳಾರಿ ಮಹಾನಗರ ಪಾಲಿಕೆಯ ರಾಮಾಂಜಿನಮ್ಮಗೆ ಶೀಘ್ರದಲ್ಲೇ 30 ಲಕ್ಷ ರೂ.ಗಳ ಪರಿಹಾರ ಲಭಿಸಲಿದೆ ಎಂದು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ್‌ತಿಳಿಸಿದ್ದಾರೆ.

ಆರೋಗ್ಯ ಇಲಾಖೆಯ 8 ಜನ ವಾರಿಯರ್ಸ್ ಗಳಿಗೆ 50 ಲಕ್ಷ ರೂ. ಪರಿಹಾರ ಕೊಡಿಸುವಲ್ಲಿ ಅಗತ್ಯ ದಾಖಲೆಗಳನ್ನು ಸಲ್ಲಿಸಲಾಗಿದೆ. ಇನ್ನು ಯಾರಿಗೂ ವಿತರಣೆಯಾಗಿಲ್ಲ. ಶೀಘ್ರದಲ್ಲೇ ವಿತರಣೆಯಾಗಲಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಚ್‌.ಎಲ್‌. ಜನಾರ್ದನ್‌ ತಿಳಿಸಿದ್ದಾರೆ.

ಆರೋಗ್ಯ ಇಲಾಖೆಯಲ್ಲಿ 8 ಜನ ಸಿಬ್ಬಂದಿ ಕೋವಿಡ್‌ ಸೋಂಕಿಗೆ ಮೃತಪಟ್ಟಿದ್ದಾರೆ. ಈ 8 ಜನರಿಗೂ ಕೇಂದ್ರ ಸರ್ಕಾರ ಘೋಷಿಸಿದ್ದ ಕೋವಿಡ್‌ ಪರಿಹಾರ ಲಭಿಸಲಿದೆ. ಅಗತ್ಯ ದಾಖಲೆಗಳನ್ನು ಕಳುಹಿಸಲಾಗಿದ್ದು, ಶೀಘ್ರದಲ್ಲೇ ಪರಿಹಾರ ಲಭಿಸಲಿದೆ.  -ಡಾ| ಎಚ್‌.ಎಲ್‌.ಜನಾರ್ದನ್‌, ಜಿಲ್ಲಾ ಆರೋಗ್ಯಾಧಿಕಾರಿ, ಆರೋಗ್ಯ ಇಲಾಖೆ, ಬಳ್ಳಾರಿ

 

-ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.