ಅವಶ್ಯಕತೆಗಳಿಂದ ಹೊಸ ದಾರಿ ಸೃಷ್ಟಿ: ಬೇವೂರ್‌


Team Udayavani, Feb 4, 2019, 9:39 AM IST

bell-4.jpg

ಕೂಡ್ಲಿಗಿ: ಬಡತನ,ಹಸಿವು ಹಲವು ಪಾಠಗಳನ್ನು ಕಲಿಸುತ್ತವೆ. ಅದರಂತೆ ನಮ್ಮ ಅವಶ್ಯಕತೆಗಳು ಹೊಸ ದಾರಿಗಳನ್ನು ಸೃಷ್ಟಿಸುತ್ತವೆ. ಹೀಗಾಗಿ ವಿದ್ಯಾರ್ಥಿಗಳು ಯಾವುದು ಅಸಾಧ್ಯ ಎಂದು ಕೈಚಲ್ಲಿ ಕೂರಬೇಡಿ. ಆತ್ಮವಿಶ್ವಾಸದಿಂದ ಪ್ರಯತ್ನಿಸಬೇಕೆಂದು ಮುಖ್ಯ ಶಿಕ್ಷಕ ಮೈಲೇಶ್‌ ಬೇವೂರ್‌ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ತಾಲೂಕಿನ ಚೌಡಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಪರೀಕ್ಷಾ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿ ಜೀವನದಲ್ಲಿ ಕೊರತೆಯಿಂದ ಪಾಠಗಳನ್ನು ಕಲಿಯಬೇಕಿದೆ. ಸೌಲಭ್ಯಗಳು ಇಲ್ಲ ಎಂದು ಬೇರೆಯವರನ್ನು ದೂಷಿಸುವ ಬದಲು ನಿಮ್ಮಲ್ಲಿಯ ಆತ್ಮವಿಶ್ವಾಸದ ಮೂಲಕ ಪರೀಕ್ಷೆಗಳನ್ನು ಎದುರಿಸಬೇಕು. ಪರೀಕ್ಷೆ ಎಂದರೆ ಹಬ್ಬದ ರೀತಿ ತಯಾರಾಗಿ ಯಶಸ್ಸು ನಿಮ್ಮನ್ನು ಹುಡುಕಿಕೊಂಡು ಬರುತ್ತದೆ ಎಂದರು.

ವಿದ್ಯಾರ್ಥಿ ಜೀವನದಲ್ಲಿ ಎಸ್ಸೆಸ್ಸೆಲ್ಸಿ ಮೊದಲ ಮೆಟ್ಟಿಲಾಗಿದ್ದು, ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹದವಾದ ವಯಸ್ಸಿನಲ್ಲಿ ಎಡವದೆ ತಮ್ಮ ಭವಿಷ್ಯ ನಿರ್ಧರಿಸಿಕೊಳ್ಳಲು ಶಿಕ್ಷಣದ ಮೂಲಕ ಭದ್ರವಾದ ಬುನಾದಿ ಹಾಕಿಕೊಳ್ಳಬೇಕಿದೆ ಎಂದರು. ಸಂಪನ್ಮೂಲ ವ್ಯಕ್ತಿ ಪಿ.ರಾಜಶೇಖರ ಮಾತನಾಡಿ, ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಬೇಕಾದರೆ ಯಾವುದೇ ವಿಷ್ಯಯದ ಬಗ್ಗೆ ಆಸಕ್ತಿದಾಯಕ ಕಲಿಕೆ ಮುಖ್ಯವಾಗಿದೆ. ಇಚ್ಛಾಶಕ್ತಿ ಮೂಲಕ ಕಲಿಕೆ ಪ್ರಕ್ರಿಯೆಯಲ್ಲಿ ಮಕ್ಕಳು ಪಾಲ್ಗೊಂಡರೆ ವಿಷಯದ ಆಳಕ್ಕೆ ಹೋಗಬಹುದು. ಈ ಮೂಲಕ ವಿಷಯದ ಬಗ್ಗೆ ಸಮಗ್ರ ಅರಿವು ದೊರೆಯುತ್ತದೆ. ಸಮಾಜ, ಕನ್ನಡ ಮುಂತಾದ ವಿಷಯಗಳ ಬಗ್ಗೆ ಸಮಾನ ವಿದ್ಯಾರ್ಥಿಗಳೊಂದಿಗೆ ಚರ್ಚೆ ಮಾಡುವ ಮೂಲಕ ವಿಷಯವನ್ನು ಪುನರ್‌ ಮನನ ಮಾಡಿಕೊಳ್ಳಬೇಕಿದೆ ಎಂದು ಹೇಳಿದರು.

ಗಣಿತ ವಿಜ್ಞಾನ ವಿಷಯಗಳಲ್ಲಿ ಬರಹ, ಕ್ಲಿಷ್ಟ ಸಮಸ್ಯೆ ಸರಳೀಕರಣಗೊಳಿಸುವುದನ್ನು ವಿದ್ಯಾರ್ಥಿಗಳು ಕಲಿಯಬೇಕು. ಗೊತ್ತಿಲ್ಲದ ವಿಷಯಗಳ ಬಗ್ಗೆ ಶಿಕ್ಷಕರೊಂದಿಗೆ ಹಂಚಿಕೊಳ್ಳಬೇಕು. ಈ ಮೂಲಕ ತಮ್ಮ ಗೊಂದಲ ನಿವಾರಿಸಿಕೊಳ್ಳಬೇಕಿದೆ. ಪರೀಕ್ಷೆಯಲ್ಲಿ ಮೊದಲು ಬರವಣಿಗೆ ಸ್ಫುಟವಾಗಿರಬೇಕು. ಸಮಯದ ಪ್ರಜ್ಞೆ, ಪ್ರಶ್ನೆಗಳ ಸಂಖ್ಯೆ ಸರಿಯಾಗಿ ಬರೆಯುವುದು ಸೇರಿದಂತೆ ಪ್ರಶ್ನೆಗಳಿಗೆ ಅರ್ಥೈಸಿಕೊಂಡು ಉತ್ತರ ಬರೆಯಬೇಕು. ಅವಸರಕ್ಕಿಂತ ಪ್ರಶ್ನೆಗಳನ್ನು ಅರ್ಥೈಸಿಕೊಳ್ಳುವುದು ಮುಖ್ಯ ಎಂದರು.

ಸಹ ಶಿಕ್ಷಕರಾದ ಹೊನ್ನಳ್ಳಿ ಕೊಟ್ರೇಶ್‌, ಶರಣಬಸಪ್ಪ, ಕೊಟ್ರಪ್ಪ, ಕೊಟ್ರೇಶ್‌, ನಾಗಶ್ರೀ, ಚನ್ನಬಸಮ್ಮ, ಯುಗಚಂದ್ರ, ಅಭಿಷೇಕ್‌ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

CID ಕಚೇರಿಯಲ್ಲಿ ನಿದ್ದೆ ಇಲ್ಲದೆ ರಾತ್ರಿ ಕಳೆದ ರೇವಣ್ಣ

CID ಕಚೇರಿಯಲ್ಲಿ ನಿದ್ದೆ ಇಲ್ಲದೆ ರಾತ್ರಿ ಕಳೆದ ರೇವಣ್ಣ

Prajwal Revanna ಗೆದ್ದರೆ ಎನ್‌ಡಿಎಯಿಂದ ಕ್ರಮ: ಆರ್‌. ಅಶೋಕ್‌

Prajwal Revanna ಗೆದ್ದರೆ ಎನ್‌ಡಿಎಯಿಂದ ಕ್ರಮ: ಆರ್‌. ಅಶೋಕ್‌

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

NEET Exam; ರಾಜ್ಯದಲ್ಲಿ ಸುಗಮವಾಗಿ ನಡೆದ ನೀಟ್‌ ಪರೀಕ್ಷೆ

NEET Exam; ರಾಜ್ಯದಲ್ಲಿ ಸುಗಮವಾಗಿ ನಡೆದ ನೀಟ್‌ ಪರೀಕ್ಷೆ

1-wqeqwewq-ew

IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

CID ಕಚೇರಿಯಲ್ಲಿ ನಿದ್ದೆ ಇಲ್ಲದೆ ರಾತ್ರಿ ಕಳೆದ ರೇವಣ್ಣ

CID ಕಚೇರಿಯಲ್ಲಿ ನಿದ್ದೆ ಇಲ್ಲದೆ ರಾತ್ರಿ ಕಳೆದ ರೇವಣ್ಣ

Prajwal Revanna ಗೆದ್ದರೆ ಎನ್‌ಡಿಎಯಿಂದ ಕ್ರಮ: ಆರ್‌. ಅಶೋಕ್‌

Prajwal Revanna ಗೆದ್ದರೆ ಎನ್‌ಡಿಎಯಿಂದ ಕ್ರಮ: ಆರ್‌. ಅಶೋಕ್‌

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

NEET Exam; ರಾಜ್ಯದಲ್ಲಿ ಸುಗಮವಾಗಿ ನಡೆದ ನೀಟ್‌ ಪರೀಕ್ಷೆ

NEET Exam; ರಾಜ್ಯದಲ್ಲಿ ಸುಗಮವಾಗಿ ನಡೆದ ನೀಟ್‌ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.