ಜೆಸಿಬಿ ಯಂತ್ರ ಬಳಸಿ ಬೆಳೆ ತೆರವು
Team Udayavani, Jan 14, 2021, 3:44 PM IST
ಹರಪನಹಳ್ಳಿ: ರಸ್ತೆಯಲ್ಲಿ ರಾಗಿ, ಮಕ್ಕೆಜೋಳ, ತೊಗರಿಬೆಳೆ ಹಾಕಿ ಒಕ್ಕಲುತನ ಮಾಡುತ್ತಿದ್ದ ರೈತರ ವಿರುದ್ಧ ಕೆಂಡಮಂಡಲರಾದ ಸ್ಥಳೀಯ ಹಿರಿಯ ಸಿವಿಲ್ ನ್ಯಾಯಾಧೀಶರಾದ ಉಂಡಿ ಮಂಜುಳಾ ಶಿವಪ್ಪ ಅವರು ಜೆಸಿಬಿ ಯಂತ್ರ ಬಳಿಸಿ ರಸ್ತೆಯಲ್ಲಿ ಹಾಕಿದ್ದ ಬೆಳೆ ರಸ್ತೆಯಿಂದ ಹೊರಕ್ಕೆ ಹಾಕಿಸಿದರು.
ಮಂಗಳವಾರ ಕೆಲವೆಡೆ ರಸ್ತೆಯಲ್ಲಿ ಹಾಕಿದ್ದ ಬೆಳೆಗಳನ್ನು ತೆಗೆಸಿದ್ದ ನ್ಯಾಯಾಧೀಶರು ಉಪವಿಭಾಗಾಧಿ ಕಾರಿ ಕೆ.ವಿ. ಪ್ರಸನ್ನಕುಮಾರ್, ತಹಶೀಲ್ದಾರ್ ಎಲ್.ಎಂ. ನಂದೀಶ್, ಪಿಎಸ್ಐ ಸಿ. ಪ್ರಕಾಶ್, ವಕೀಲರ ಸಂಘದ ಅಧ್ಯಕ್ಷ ಕೆ. ಚಂದ್ರೆಗೌಡ, ಲೋಕೊಪಯೋಗಿ ಇಲಾಖೆ ಎಇಇ ಎಂ. ಲಿಂಗಪ್ಪ ಒಳಗೊಂಡ ಅಧಿ ಕಾರಿಗಳ ತಂಡದೊಂದಿಗೆ ಬುಧವಾರ ಕೂಡ ಜಾಗೃತಿ ಮೂಡಿಸುವ ಕಾರ್ಯ ಮುಂದುವರೆಸಿದ್ದರು. ತಾಲೂಕಿನ ಯಲ್ಲಪುರ, ತೋಗರಿಕಟ್ಟಿ, ನಾರಾಯಣಪುರ, ಹುಲಿಕಟ್ಟೆ, ಹಾರಕನಾಳು ಗ್ರಾಮದ ರಸ್ತೆಯಲ್ಲಿ ಒಕ್ಕಲುತನ ಮಾಡುತ್ತಿದ್ದ ರೈತರಿಗೆ ತರಾಟೆಗೆ ತೆಗೆದುಕೊಂಡ ಅವರು ಕಾನೂನು ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ನ್ಯಾಯಾಧೀಶರು ಸೂಚನೆ ನೀಡಿದರು.
ಇದನ್ನೂ ಓದಿ:ಗ್ರಾಪಂ ಸದಸ್ಯರು ಜನ ಸೇವಕರಾಗಿ ಕೆಲಸ ಮಾಡಲಿ : ರಾಜ್ಯದಲ್ಲಿ ಗೆದ್ದಿದ್ದಾರೆ 5,246 ಬೆಂಬಲಿತರು
ರೈತರು ತಮ್ಮ ಜಮೀನುಗಳಲ್ಲಿ ಬೆಳೆದ ಬೆಳೆಗಳನ್ನು ಕಟಾವು ಮಾಡಿಕೊಂಡು ಒಕ್ಕಲು ಮಾಡಿಕೊಳ್ಳಲು ಕಣಗಳನ್ನು ಬಳಸಿಕೊಳ್ಳದೇ ಸಾರ್ವಜನಿಕರು ಸಂಚರಿಸುವ ರಸ್ತೆಗಳನ್ನು ಅಶ್ರಯಿಸಬಾರದು ಎಂದ ನ್ಯಾಯಾಧಿಧೀಶರು ರಸ್ತೆಯಲ್ಲಿಹಾಕಿದ್ದ ಮೆಕ್ಕೆಜೋಳ, ರಾಗಿ, ತೊಗರಿಬೆಳೆಗಳನ್ನು ಜೆಸಿಬಿ ಯಂತ್ರ ಹಾಗೂ ಟ್ರಾÂಕ್ಟರ್ ಬಳಿಸಿ ರಸ್ತೆ ಬದಿಯಲ್ಲಿರುವ ಜಮೀನುಗಳಿಗೆ ಹಾಕಿಸಿದರು.
ಚುನಾಯಿತ ಪ್ರತಿನಿಧಿ ಗಳು ಹಾಗೂ ಅಧಿ ಕಾರಿಗಳು ರೈತರಿಗೆ ಕಣಗಳನ್ನು ಬಳಸುವಂತೆ ಮನವೊಲಿಸಬೇಕು. ಮಾತು ಕೇಳದೆ ಇರುವವರ ವಿರುದ್ಧ ಸೂಕ್ತ ಕ್ರಮಕೈಗೊಂಡು ಸರ್ಕಾರದಿಂದ ಪಡೆಯುತ್ತಿರುವ ಎಲ್ಲ ಸೌಲಭ್ಯಗಳನ್ನು ವಂಚಿತರನ್ನಾಗಿ ಮಾಡಬೇಕು ಎಂದು ನ್ಯಾಯಾಧೀಶರಾದ ಉಂಡಿ ಮಂಜುಳಾ ಶಿವಪ್ಪ ಅಭಿಪ್ರಾಯಪಟ್ಟರು. ಇಂಜಿನಿಯರ್ ಕುಬೇಂದ್ರನಾಯ್ಕ, ಪಿಡಿಓ ಚಂದ್ರನಾಯ್ಕ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
MUST WATCH
ಹೊಸ ಸೇರ್ಪಡೆ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ