ಶೀಘ್ರ ಕೇಂದ್ರಕ್ಕೆ ಬೆಳೆ ಹಾನಿ ವರದಿ: ಗೌತಮ್‌


Team Udayavani, Nov 19, 2018, 2:54 PM IST

bell-1.jpg

ಬಳ್ಳಾರಿ: ಕೇಂದ್ರ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಮಿತಾಬ್‌ ಗೌತಮ್‌ ನೇತೃತ್ವದ ಕೇಂದ್ರ ಬರ ಅಧ್ಯಯನ ತಂಡ ಜಿಲ್ಲೆಯ ವಿವಿಧೆಡೆ ಭೇಟಿ ನೀಡಿ ಭಾನುವಾರ ಪರಿಶೀಲನೆ ನಡೆಸಿತು.

ಬೆಳಗ್ಗೆ ಬಳ್ಳಾರಿಯ ಸರಕಾರಿ ಪ್ರವಾಸಿ ಮಂದಿರದಲ್ಲಿ ಜಿಲ್ಲಾಧಿಕಾರಿ ಡಾ| ವಿ.ರಾಮ್‌ ಪ್ರಸಾತ್‌ ಮನೋಹರ್‌ ಅವರು ಜಿಲ್ಲೆಯಲ್ಲಿ ಮಳೆ ಬರದ ಪರಿಣಾಮ 2.30 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. 153 ಕೋಟಿ ರೂ. ಹಾನಿಯಾಗಿದೆ. ಜಿಲ್ಲೆಯ 7 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿದೆ. ಬರ ಸಂಬಂಧಿತ ಕಾಮಗಾರಿಗಳನ್ಮು ಆದ್ಯತೆ ಮೇಲೆ ಜಿಲ್ಲಾಡಳಿತ ಕೈಗೊಳ್ಳುತ್ತಿದೆ. ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ನೋಡಿಕೊಳ್ಳಲಾಗಿದೆ. ಬಳ್ಳಾರಿ ಜಿಲ್ಲೆಗೆ ತಮ್ಮ ತಂಡದ ವತಿಯಿಂದ 153 ಕೋಟಿ ರೂ. ಒದಗಿಸುವ ನಿಟ್ಟಿನ ಶಿಫಾರಸು ಮಾಡುವಂತೆ ಅವರು ಕೋರಿದರು.

ಇದಾದ ನಂತರ ಅವರು ಮೊದಲು ಕೂಡ್ಲಿಗಿ ತಾಲೂಕಿನ ಮಹಾದೇವಪುರದ ಅಪ್ಪೇನಹಳ್ಳಿ ಗ್ರಾಪಂ ವ್ಯಾಪ್ತಿಯ ಮಹಾದೇವಪುರದ ಚಂದ್ರೇಗೌಡ ಎನ್ನುವವರ ಹೊಲಕ್ಕೆ ಅಮಿತಾಬ್‌ ಗೌತಮ್‌ ನೇತೃತ್ವದ ಮೂರು ಜನ ಅಧಿಕಾರಿಗಳ ತಂಡ ಭೇಟಿ ನೀಡಿ, ಮಳೆ ಬರದೇ ಬಾಡಿದ ಶೇಂಗಾ ಬೆಳೆ ಮತ್ತು ಸಂಪೂರ್ಣ ಒಣಗಿದ ಸಜ್ಜೆ ಬೆಳೆಯನ್ನು ಪರಿಶೀಲಿಸಿತು.

ಇದೇ ಸಂದರ್ಭದಲ್ಲಿ ರೈತರೊಂದಿಗೆ ಅಧಿಕಾರಿಗಳು ಚರ್ಚಿಸಿದರು. ರೈತರು ಸಹ ಮಳೆ ಬರದೇ ಕಂಗಾಲಾಗಿರುವುದನ್ನು ಹಾಗೂ ಪದೇ-ಪದೇ ತಾವು ಅನುಭವಿಸುತ್ತಿರುವ ಬರದ ಸಮಸ್ಯೆ ಹಾಗೂ ಬೆಳೆಹಾನಿ, ಬಿತ್ತನೆಗೆ ಮಾಡಿದ ಖರ್ಚು ಕೂಡ ಬಾರದಿರುವುದು ಸೇರಿದಂತೆ ತಾವು ಅನುಭವಿಸುತ್ತಿರುವ ಸಮಸ್ಯೆಗಳ ಸರಮಾಲೆಯನ್ನು ಅಧಿಕಾರಿಗಳ ಮುಂದಿಟ್ಟರು.

ತಮ್ಮ ಬೆಳೆಗೆ ವಿಮೆ ಮಾಡದಿರುವುದು ಹಾಗೂ ಈ ಕುರಿತು ನಮಗೆ ಅರಿವಿಲ್ಲ ಎಂದು ಹೊಲದ ಒಡೆಯ ರೈತ ಚಂದ್ರೇಗೌಡ ಹಾಗೂ ಅಲ್ಲಿದ್ದ ರೈತರು ವಿವರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅಧಿಕಾರಿಗಳ ತಂಡದ ಮುಖ್ಯಸ್ಥ ಕೇಂದ್ರ ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಮಿತಾಬ್‌ ಗೌತಮ್‌, 2017-18ಕ್ಕೆ ಕೇಂದ್ರ ಪ್ರಕೃತಿ ವಿಕೋಪ ನಿಧಿಯಿಂದ 245 ಕೋಟಿ ರೂ. ಮಂಜೂರು ಮಾಡಲಾಗಿದೆ. ಪ್ರಸಕ್ತ ಮೊದಲ ಕಂತಿನ ರೂಪದಲ್ಲಿ 115 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಫಸಲ್‌ ಭಿಮಾ ಯೋಜನೆ ಬೆಳೆ ವಿಮೆ ಪರಿಹಾರದ ಕುರಿತು ರಾಜ್ಯ ಸರಕಾರ ಕ್ರಮ ಕೈಗೊಳ್ಳಲಿದ್ದು, ಈ ಕುರಿತು ರಾಜ್ಯ ಸರ್ಕಾರದೊಂದಿಗೆ ಚರ್ಚಿಸಲಾಗುವುದು ಎಂದರು.

ಜಿಲ್ಲಾಧಿಕಾರಿ ಡಾ| ರಾಮ್‌ ಪ್ರಸಾತ್‌ ಮಾತನಾಡಿ, 2.30 ಲಕ್ಷ ಹೆಕ್ಟೇರ್‌ ಪ್ರದೇಶದ ಬೆಳೆ ಹಾನಿಯಾಗಿದ್ದು, 153 ಕೋಟಿ ರೂ. ನೀಡುವಂತೆ ಕೋರಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
 
ಜಿಪಂ ಉಪಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ದಿವಾಕರ್‌, ಉಪನಿರ್ದೇಶಕ ಶಿವನಗೌಡ ಪಾಟೀಲ್‌, ತಹಶೀಲ್ದಾರ್‌ ಕೃಷ್ಣಮೂರ್ತಿ, ಗ್ರಾಮೀಣ ಕುಡಿಯುವ ನೀರಿನ ಸರಬರಾಜು ಕಾರ್ಯನಿರ್ವಾಹಕ ಎಂಜಿನಿಯರ್‌ ಎಸ್‌.ಬಿ. ದೇವನಾಳ ಸೇರಿದಂತೆ ಅಧಿಕಾರಿಗಳು ಮತ್ತು ರೈತರು ಇದ್ದರು.

ನಂತರ ಅಮಿತಾಬ್‌ ಗೌತಮ್‌ ನೇತೃತ್ವದ ಅಧಿಕಾರಿಗಳ ತಂಡವು ಕೂಡ್ಲಿಗಿಗೆ ತೆರಳಿ, ಅಲ್ಲಿಂದ ಭಟ್ಟನಹಳ್ಳಿಗೆ ತೆರಳಿ ಹಾನಿಗೀಡಾದ ಬೆಳೆಗಳ ವೀಕ್ಷಣೆ ಮತ್ತು ರೈತರೊಂದಿಗೆ ಚರ್ಚೆ ನಡೆಸಿತು. ನಂತರ ಅಲಬೂರಗೆ ತೆರಳಿ ಅಲ್ಲಿಯೂ ಹಾನಿಗೀಡಾದ ಬೆಳೆಗಳ ಪರಿಶೀಲಿಸಿ ನಂತರ ದಾವಣಗೆರೆ ಜಿಲ್ಲೆಯ ಹರಪನಳ್ಳಿಗೆ ತಾಲೂಕಿನ ಹಳ್ಳಿಗಳಿಗೆ ತೆರಳಿತು.

ಕೇಂದ್ರ ಬರ ಅಧ್ಯಯನ ತಂಡ ಬಾರದಕ್ಕೆ ರೈತರ ಆಕ್ರೋಶ
ಹಗರಿಬೊಮ್ಮನಹಳ್ಳಿ: ಸಂಪೂರ್ಣ ಬೆಳೆಹಾನಿಯಿಂದ ತತ್ತರಿಸಿದ್ದ ತಾಲೂಕಿನ ರೈತರ ಬೆಳೆಗಳನ್ನು ವೀಕ್ಷಿಸದೇ ತೆರಳಿದ ಬರ ಅಧ್ಯಯನ ತಂಡದ ವಿರುದ್ಧ ಆಕ್ರೋಶ ವ್ಯಕ್ತವಾಯಿತು. ಬರ ಅಧ್ಯಯನದ ಕೇಂದ್ರ ತಂಡ ತಾಲೂಕಿನ ಅಲಬೂರು ಗ್ರಾಮಕ್ಕೆ ಭೇಟಿ ನೀಡಲು ಸಮಯ ನಿಗದಿಪಡಿಸಲಾಗಿತ್ತು. ತಾಲೂಕು ಆಡಳಿತ ಅಲಬೂರು ಗ್ರಾಮದಲ್ಲಿ ಬೆಳಗಿನಿಂದಲೇ ಕೇಂದ್ರ ತಂಡದ ಬರುವಿಕೆಗೆ ತಯಾರಿ ನಡೆಸಿತ್ತು.

ಅಲಬೂರು ಗ್ರಾಮದ ರೈತ ನಾಗಪ್ಪ ಅವರ 6 ಎಕರೆ ಸೂರ್ಯಕಾಂತಿ ಬೆಳೆ, ದೊಡ್ಡಬಸಪ್ಪ ಅವರ 11 ಎಕರೆ ಮುಸುಕಿನ ಜೋಳ ಮತ್ತು ಹನುಮಂತಪ್ಪರ 2 ಎಕರೆ ಮುಸುಕಿನಜೋಳದ ವೀಕ್ಷಣೆಗೆ ಸಿದ್ಧತೆ ನಡೆಸಲಾಗಿತ್ತು. ತಂಡಕ್ಕೆ ಸ್ವಾಗತ ಕೋರಿ ಫ್ಲೆಕ್ಸ್‌ ಹಾಕಲಾಗಿತ್ತು. ಅಲ್ಲದೇ ಬರಪೀಡಿತ ಬೆಳೆಗಳ ಸ್ಥಿತಿಗತಿ ಕುರಿತಾದ ಅಂಕಿ-ಅಂಶಗಳನ್ನು ಮತ್ತೂಂದು ಫ್ಲೆಕ್ಸ್‌ನಲ್ಲಿ ದಾಖಲಿಸಲಾಗಿತ್ತು.
 
ಆದರೆ, ಅಧ್ಯಯನ ತಂಡ ಗ್ರಾಮಕ್ಕೆ ಭೇಟಿ ನೀಡದ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಬರ ಸಮೀಕ್ಷೆ ಕಾರ್ಯಕ್ಕೆ ಹಿನ್ನಡೆಯಾದಂತಾಗಿದೆ. ಬಿರುಬಿಸಿಲಿನಲ್ಲಿ ಕಾಯುತ್ತಿದ್ದ ರೈತರು ಕೇಂದ್ರ ತಂಡದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರಕಾರ ರಾಜ್ಯದ ವಿವಿಧೆಡೆ ಬರ ತಾಂಡವಾಡುತ್ತಿದ್ದು, ಕೂಡಲೇ ಪರಿಹಾರ ಒದಗಿಸುವಂತೆ ಮತ್ತು ಪರಿಶೀಲನೆ ನಡೆಸುವಂತೆ ಕೋರಿದ ಹಿನ್ನೆಲೆ ಮೂರು ತಂಡಗಳನ್ನಾಗಿ ವಿಂಗಡಿಸಿ ರಾಜ್ಯದ 13 ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಬರಸ್ಥಿತಿ ಅಧ್ಯಯನ ಮಾಡಲಾಗಿದೆ. ನ.19ರಂದು ಬೆಂಗಳೂರಿನಲ್ಲಿ ಸಭೆ ನಡೆಸಿ ಕೇಂದ್ರ ಸರಕಾರಕ್ಕೆ ಅಂತಿಮ ವರದಿ ಶೀಘ್ರ ಸಲ್ಲಿಸಲಾಗುವುದು. ತಮ್ಮ ಜಿಲ್ಲೆಯಲ್ಲಿಯೂ ಭೀಕರ ಬರವಿರುವುದು ಗಮನಕ್ಕೆ ಬಂದಿದ್ದು, ಸೂಕ್ತ ಮತ್ತು ಬಳ್ಳಾರಿ ಜಿಲ್ಲೆಗೆ ಅನುಕೂಲವಾಗುವ ವರದಿಯನ್ನು ಕೇಂದ್ರಕ್ಕೆ ಸಲ್ಲಿಸಲಾಗುವುದು. 
 ಅಮಿತಾಬ್‌ ಗೌತಮ್‌, ಕೇಂದ್ರ ಬರ ಅಧ್ಯಯನ ತಂಡದ ಮುಖ್ಯಸ್ಥ

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.