ನೆಲಕಚ್ಚೋ ಹಂತದಲ್ಲೇ ಬೆಳೆ ನೀರುಪಾಲು!
Team Udayavani, Sep 16, 2017, 11:24 AM IST
ಬಳ್ಳಾರಿ: ಜಿಲ್ಲೆಯಾದ್ಯಂತ ಗುರುವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಸಾವಿರಾರು ಎಕರೆ ಭತ್ತದ ಬೆಳೆ ಹಾನಿಯಾಗಿದ್ದು, 79ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಉಂಟಾಗಿದೆ.
ಒಂದೆಡೆ ತುಂಗಭದ್ರಾ ಜಲಾಶಯದ ಎಸ್ಕೇಪ್ ಗೇಟ್ ಒಡೆದ ಪರಿಣಾಮ ಸಾವಿರಾರು ಎಕರೆ ಬೆಳೆ ಹಾನಿಯಾದರೆ,
ಮತ್ತೂಂದೆಡೆ ಬಳ್ಳಾರಿ ಮತ್ತು ಸಿರುಗುಪ್ಪ ನಗರಗಳಲ್ಲಿ ತಗ್ಗು ಪ್ರದೇಶ ಮತ್ತು ಮನೆಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತವಾಗಿದೆ.
ಒಂದೇ ರಾತ್ರಿ ವರುಣನ ಆರ್ಭಟಕ್ಕೆ ತತ್ತರಿಸಿದ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನಲ್ಲಿ ಬೆಳೆ ಜಲಾವೃತಗೊಂಡಿದೆ.
ನಿರ್ವಹಣೆ ಕೊರತೆಯಿಂದ ಎಚ್ಎಲ್ಸಿ ಕಾಲುವೆಯ ಎಸ್ಕೇಪ್ ಗೇಟ್ ಒಡೆದು ಅಪಾರ ಪ್ರಮಾಣದ ಬೆಳೆಹಾನಿಯಾಗಿದೆ.
ಕಳೆದ ಮೂರು ವರ್ಷದ ಬರಗಾಲದಿಂದ ತತ್ತರಿಸಿ ಹೋದ ರೈತರಿಗೆ ಕಳೆದೊಂದು ವಾರದಿಂದ ಆಗಾಗ ಸುರಿಯುತ್ತಿರುವ
ಮಳೆ ಒಂದಷ್ಟು ನೆಮ್ಮದಿ ತಂದಿದೆ. ಆದರೆ ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದ ಅಪಾರ ಹಾನಿಯಾಗಿದೆ. ಬಳ್ಳಾರಿ ತಾಲೂಕಿನ ಏಳಬಿಂಚಿ ಗ್ರಾಮದ ಬಳಿ ಬರುವ ಎಚ್ ಎಲ್ ಸಿ ಕಾಲುವೆಯ ಎಸ್ಕೇಪ್ ಗೇಟ್ ಒಡೆದ ಪರಿಣಾಮ 2 ಸಾವಿರಕ್ಕೂ ಹೆಚ್ಚು ಎಕರೆ ಬೆಳೆ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಈ ಭಾಗದಲ್ಲಿ ಬಿತ್ತನೆ ಮಾಡಲಾಗಿದ್ದ ಮೆಣಸಿನಕಾಯಿ, ಭತ್ತ, ತೊಗರಿ, ನವಣೆ, ಸಜ್ಜೆ ಬೆಳೆಗಳು ಸಂಪೂರ್ಣ ಹಾಳಾಗಿವೆ.
ಸಿರುಗುಪ್ಪ ತಾಲೂಕಿನಲ್ಲಿ ಮಳೆ ಆರ್ಭಟ ಜೋರಾಗಿತ್ತು. ಹಳ್ಳಕೊಳ್ಳಗಳು ತುಂಬಿದ ಪರಿಣಾಮ ಬೆಳೆ ಹಾನಿಯ ಜೊತೆ ಕೆಲವೆಡೆ ಮನೆಗಳಿಗೂ ನೀರು ನುಗ್ಗಿ ದೊಡ್ಡ ಆವಾಂತರ ಸೃಷ್ಟಿ ಮಾಡಿದೆ. ಬಳ್ಳಾರಿ ನಗರದಲ್ಲೂ ಸತ್ಯನಾರಾಯಣ ಪೇಟೆ ಅಂಡರ್ ಬ್ರಿಜ್ ತುಂಬಿದ ಕಾರಣ ಪ್ರಯಾಣಿಕರು ಪರದಾಡಿದರು. ಸಮರ್ಪಕ ನಿರ್ವಹಣೆ ಮಾಡದೆ ಕಾಲುವೆ ಒಡೆದಿದೆ. ಹೀಗಾಗಿ ರೈತರಿಗೆ ಬೆಳೆಹಾನಿಯ ಪರಿಹಾರ ನೀಡಬೇಕೆಂದು ರೈತರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್