ರೈತರಿಗೆ ಬೆಳೆ ಸಮೀಕ್ಷೆ ಆ್ಯಪ್ ಮಾಹಿತಿ
Team Udayavani, Aug 12, 2020, 3:16 PM IST
ಸಿರುಗುಪ್ಪ: ರೈತರು ಬೆಳೆದ ಬೆಳೆಗಳ ವಿವರಗಳನ್ನು ಸ್ವತಃ ನೋಂದಾಯಿಸಿಕೊಳ್ಳುವ ಸೌಲಭ್ಯ ಕಲ್ಪಿಸಿದ್ದು, ತಮ್ಮ ಮೊಬೈಲ್ಗಳಲ್ಲಿ ಬೆಳೆ ಸಮೀಕ್ಷೆ ಆ್ಯಪ್ ಡೌನ್ಲೋಡ್ ಮಾಡಿಕೊಂಡು ಜಮೀನುಗಳ ಸರ್ವೇ ನಂಬರ್, ಹಿಸ್ಸಾ ನಂಬರ್ ಹಾಗೂ ತಾವು ಬೆಳೆದ ಬೆಳೆಗಳ ಮಾಹಿತಿ ದಾಖಲಿಸಬಹುದೆಂದು ತಹಶೀಲ್ದಾರ್ ಎಸ್.ಬಿ. ಕೂಡಲಗಿ ತಿಳಿಸಿದರು.
ನಗರದ ತಹಶೀಲ್ದಾರ್ ಕಚೇರಿಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನ ರೈತರ ಬೆಳೆ ಸಮೀಕ್ಷೆ ಆ್ಯಪ್ ಕುರಿತು ನಡೆದ ಸಭೆಯಲ್ಲಿ ಮಾತನಾಡಿ ರೈತರು ತಮ್ಮ ಜಮೀನಿನಲ್ಲಿ ಬೆಳೆದಿರುವ ವಾರ್ಷಿಕ, ಬಹುವಾರ್ಷಿಕ, ತೋಟಗಾರಿಕೆ, ಅರಣ್ಯ ಸೇರಿದಂತೆ ಇತರೆ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಮೇತ ಸ್ವತಃ ನಮೂದಿಸಬಹುದು. ಹೀಗೆ ಸಂಗ್ರಹಿಸಿದ ಬೆಳೆ ಸಮೀಕ್ಷೆಯಿಂದ ಅಂಕೆಸಂಖ್ಯೆ ಸಾಂಖೀಕ ಇಲಾಖೆಯ ದತ್ತಾಂಶ ಸಂಗ್ರಹಕ್ಕೆ ಸೇರುತ್ತದೆ. ಇದೇ ದತ್ತಾಂಶದ ಆಧಾರದ ಮೇಲೆ ಕೃಷಿ, ತೋಟಗಾರಿಕೆ ಬೆಳೆಗಳ ವಿಸ್ತೀರ್ಣವನ್ನು ಲೆಕ್ಕ ಹಾಕುವುದು, ಬೆಳೆ ವಿಮೆ ಯೋಜನೆ ಪರಿಶೀಲನೆಗೆಮತ್ತು ಪ್ರಕೃತಿ ವಿಕೋಪ ಸಂದರ್ಭದಲ್ಲಿ ಪರಿಹಾರ ಪಡೆಯಲು, ಕನಿಷ್ಠ ಬೆಂಬಲ ಬೆಲೆ ಪಡೆಯಲು, ಬೆಳೆ ಕಟಾವು ಪ್ರಯೋಗ ನಡೆಸಲು, ಸಹಾಯಧನ ಪಡೆಯಲು, ಬೆಳೆ ಸಮೀಕ್ಷೆಯ ಮಾಹಿತಿ ಅಡಿಯಲ್ಲಿ ಫಲಾನುಭವಿಗಳನ್ನು ಗುರುತಿಸಲು ಅನುಕೂಲವಾಗಲಿದೆ ಎಂದು ಹೇಳಿದರು. ಸಹಾಯಕ
ಕೃಷಿ ನಿರ್ದೇಶಕ ನಜೀರ್ ಆಹ್ಮದ್ ಮಾತನಾಡಿ ತಾಲೂಕಿನಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಕೃಷಿ ಇಲಾಖೆ ನಿರ್ದೇಶಕರ ಹಾಗೂ ತೋಟಗಾರಿಕಾ ನಿರ್ದೇಶಕರು ಕಾರ್ಯದರ್ಶಿಗಳಾಗಿರುವ ಸಮಿತಿಯಲ್ಲಿ ಸೆ.30 ರೊಳಗೆ ಬೆಳೆ ಸಮೀಕ್ಷಾ ವರದಿ ಪೂರ್ಣಗೊಳಿಸಬೇಕಾಗಿದ್ದರಿಂದ ರೈತರಿಗೆ ತಮ್ಮ ಮೊಬೈಲ್ಗಳ ಮೂಲಕ ಬೆಳೆ ಸಮೀಕ್ಷೆ ದಾಖಲಿಸಲು ತಾಲೂಕಿನ ಕಂದಾಯ, ಕೃಷಿ, ತೋಟಗಾರಿಕಾ ಇಲಾಖೆ ಸಿಬ್ಬಂದಿಗಳನ್ನು ಮಾಸ್ಟರ್ ಟ್ರೈನರ್ಗಳನ್ನಾಗಿ ತರಬೇತಿ ನೀಡಿ ತಂಡಗಳನ್ನು ರಚಿಸಲಾಗುವುದು. ಈ ತಂಡಗಳು ರೈತರ ಜಮೀನಗಳಲ್ಲಿನ ಬೆಳೆಗಳನ್ನು ದಾಖಲಿಸಲು ನೆರವು ನೀಡಲಿದ್ದಾರೆ ಎಂದು ಹೇಳಿದರು.
ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ವಿಶ್ವನಾಥ, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು
ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು
Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು
Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು
Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು
MUST WATCH
ಹೊಸ ಸೇರ್ಪಡೆ
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?